AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ನಮಗಿಂತ ಉತ್ತಮ ತಂಡ, ಅದುವೇ ಸೋಲಿಗೆ ಕಾರಣ: ರೋಹಿತ್ ಶರ್ಮಾ

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಪರ್ತ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತೀಯ ಪಡೆ 295 ರನ್​​ಗಳಿಂದ ಬಗ್ಗು ಬಡಿದಿತ್ತು. ಇದೀಗ ಅಡಿಲೇಡ್​ನಲ್ಲಿ ಕಂಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು 10 ವಿಕೆಟ್​ಗಳಿಂದ ಸೋಲಿಸಿದೆ.

ಆಸ್ಟ್ರೇಲಿಯಾ ನಮಗಿಂತ ಉತ್ತಮ ತಂಡ, ಅದುವೇ ಸೋಲಿಗೆ ಕಾರಣ: ರೋಹಿತ್ ಶರ್ಮಾ
Rohit sharma
ಝಾಹಿರ್ ಯೂಸುಫ್
|

Updated on: Dec 08, 2024 | 12:55 PM

Share

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 10 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​​ನಲ್ಲಿ 180 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​​ನಲ್ಲಿ 337 ರನ್ ಪೇರಿಸಿ 157 ರನ್​​ಗಳ ಮುನ್ನಡೆ ಪಡೆಯಿತು.

157 ರನ್​​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 175 ರನ್​​ಗಳಿಗೆ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​​ನಲ್ಲಿ ಕೇವಲ 19 ರನ್​​​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 3.2 ಓವರ್​​ಗಳಲ್ಲಿ ಗುರಿ ಮುಟ್ಟುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಹೀನಾಯ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಂಡದ ಪ್ರದರ್ಶನವು ನಿರಾಶಾದಾಯಕವಾಗಿತ್ತು ಎಂದಿದ್ದಾರೆ . ಅಲ್ಲದೆ ನಾವು ಈ ಪಂದ್ಯವನ್ನು ಗೆಲ್ಲುವಷ್ಟು ಚೆನ್ನಾಗಿ ಆಡಲಿಲ್ಲ ಎಂದು ಬಹಿರಂಗವಾಗಿಯೇ ತಿಳಿಸಿದ್ದಾರೆ.

ಇನ್ನು ಸೋಲಿಗೆ ಮುಖ್ಯ ಕಾರಣವೇನು ಎಂಬ ಪ್ರಶ್ನೆಗೆ, ಆಸ್ಟ್ರೇಲಿಯಾ ತಂಡವು ನಮಗಿಂತ ಉತ್ತಮವಾಗಿ ಆಡಿದೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಆಸೀಸ್ ಪಡೆ ಗೆದ್ದಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ನಾವು ಪರ್ತ್​​ನಲ್ಲಿ ಚೆನ್ನಾಗಿಯೇ ಆಡಿದ್ದೆವು. ಆದರೆ ಅಡಿಲೇಡ್​ನಲ್ಲಿ ಹಲವು ಅವಕಾಶಗಳನ್ನು ಕೈಚೆಲ್ಲಿಕೊಂಡೆವು. ಇಲ್ಲಿ ಮುಖ್ಯವಾಗಿ ಪಿಂಕ್ ಬಾಲ್​ನಲ್ಲಿ ಆಡುವುದು ದೊಡ್ಡ ಸವಾಲು. ಮೊದಲೇ ಹೇಳಿದಂತೆ ಆಸ್ಟ್ರೇಲಿಯಾ ತಂಡವು ನಮಗಿಂತ ಉತ್ತಮವಾಗಿದೆ. ಇದಾಗ್ಯೂ ನಾವು ಗಬ್ಬಾ ಟೆಸ್ಟ್​ನಲ್ಲಿ ಕಂಬ್ಯಾಕ್ ಮಾಡುವ ವಿಶ್ವಾಸವಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಸರಣಿ ಸಮಬಲ:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು. ಪರ್ತ್​​ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತೀಯ ಪಡೆ 295 ರನ್​​ಗಳಿಂದ ಬಗ್ಗು ಬಡಿದಿತ್ತು. ಇದೀಗ ಅಡಿಲೇಡ್​ನಲ್ಲಿ ಕಂಬ್ಯಾಕ್ ಮಾಡಿರುವ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು 10 ವಿಕೆಟ್​ಗಳಿಂದ ಸೋಲಿಸಿದೆ.

ಇದನ್ನೂ ಓದಿ: ಅಂಕ ಪಟ್ಟಿಯಲ್ಲಿ ಭಾರೀ ಕುಸಿತ: ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ WTC ಶಾಕ್

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು 5 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಇನ್ನು ಈ ಸರಣಿಯ ಮೂರನೇ ಪಂದ್ಯವು ಡಿಸೆಂಬರ್ 14 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಬ್ರಿಸ್ಬೇನ್​ನ ಗಬ್ಬಾ ಮೈದಾನ ಆತಿಥ್ಯವಹಿಸಲಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!