AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ

IND vs SL 1st test: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭಾರತ-ಶ್ರೀಲಂಕಾ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಹಿಟ್​ಮ್ಯಾನ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದರಲ್ಲಿ ರೋಹಿತ್​ಗೆ ಪ್ರಶ್ನೆಗಳ ಮಳೆ ಸುರಿಯಲಿದೆ.

Rohit Sharma: ಇಂದು ಮಧ್ಯಾಹ್ನ 1 ಗಂಟೆಗೆ ರೋಹಿತ್ ಶರ್ಮಾ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ
Rohit Sharma press conference IND vs SL 1st Test
TV9 Web
| Updated By: Vinay Bhat|

Updated on:Mar 03, 2022 | 12:10 PM

Share

ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮಾರ್ಚ್ 4 ರಂದು ಕ್ವಿಕ್ ಸ್ಟಾರ್ಟ್ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರಥಮ ಟೆಸ್ಟ್ ನಡೆಯಲಿದ್ದು, ಭಾರತ ತಂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಪ್ರಮುಖವಾಗಿ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಆಟಕ್ಕೆ ಇಡೀ ಭಾರತವೇ ಕಾದುಕುಳಿತಿದೆ. ಕೊಹ್ಲಿ ಆಟದ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಿಸಿಸಿಐ ವಿಶೇಷವಾಗಿ ಅಭಿಮಾನಿಗಳಿಗೂ ಅವಕಾಶ ನೀಡಿದೆ. ಇದರ ನಡುವೆ ರಿಷಭ್ ಪಂತ್, ಮೊಹಮ್ಮದ್ ಶಮಿ ಸೇರಿದಂತೆ ವಿಶ್ರಾಂತಿಯಲ್ಲಿದ್ದ ಕೆಲ ಆಟಗಾರರು ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ. ಇದೀಗ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಹಿಟ್​ಮ್ಯಾನ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದರಲ್ಲಿ ರೋಹಿತ್​ಗೆ ಪ್ರಶ್ನೆಗಳ ಮಳೆ ಸುರಿಯಲಿದೆ.

ರೋಹಿತ್ ಶರ್ಮಾ ಅವರಿಗೆ ಈ ಟೆಸ್ಟ್ ತುಂಬಾನೆ ಮುಖ್ಯವಾಗಿದೆ. ಯಾಕಂದ್ರೆ ಕೊಹ್ಲಿ ನಾಯಕತ್ವ ತ್ಯಜಿಸಿದ ಬಳಿಕ ಮೊದಲ ಬಾರಿಗೆ ಟೆಸ್ಟ್​ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸೀಮಿತ ಓವರ್​ಗಳ ಸರಣಿಯಲ್ಲಿ ಸತತ ಗೆಲುವನ್ನು ಕಂಡಿರುವ ರೋಹಿತ್ ಅವರ ಟೆಸ್ಟ್​ ಆರಂಭ ಹೇಗಿರಲಿದೆ ಎಂಬುದು ಕುತೂಹಲ. ಅಲ್ಲದೆ ನಾಯಕನಾಗಿ ಭಾರತದ ಮಧ್ಯಮ ಕ್ರಮಾಂಕವನ್ನು ಯಾವರೀತಿ ನಿಭಾಹಿಸುತ್ತಾರೆ ಎಂದು ನೋಡಬೇಕಿದೆ. ಯಾಕೆಂದರೆ ಹಿರಿಯ ಆಟಗಾರರಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಅವರನ್ನು ಟೆಸ್ಟ್ ಸರಣಿಯಿಂದ ಕೈಬಿಡಲಾಗಿದೆ. ಹೀಗಾಗಿ ಯುವ ಆಟಗಾರರನ್ನು ರೋಹಿತ್ ಯಾವರೀತಿ ಉಪಯೋಗಿಸಬೇಕೆಂದು ಆಲೋಚಿಸಬೇಕಿದೆ.

ರೋಹಿತ್ ಶರ್ಮಾಗೆ ಸುದ್ದಿಗೋಷ್ಠಿಯಲ್ಲಿ ಎದುರಾಗಬಹುದಾದ ಪ್ರಮುಖ ಪ್ರಶ್ನೆಗಳು:

  • ಟೆಸ್ಟ್ ನಾಯಕತ್ವಕ್ಕೆ ಪದಾರ್ಪಣೆ ಮಾಡಲಿರುವ ಬಗ್ಗೆ ಏನು ಹೇಳಲು ಬಯಸುತ್ತೀರಿ?
  • ವಿರಾಟ್ ಕೊಹ್ಲಿ 100ನೇ ಟೆಸ್ಟ್​ ಬಗ್ಗೆ ನಿಮ್ಮ ಮಾತು
  • ಹನುಮಾ ವಿಹಾರಿ, ಶ್ರೇಯಸ್ ಅಯ್ಯರ್ ಮತ್ತು ಶುಭ್ಮನ್ ಗಿಲ್ ಪೈಕಿ ಯಾರಿಗೆ ಸ್ಥಾನ?
  • ಆರ್. ಅಶ್ವಿನ್ ಇಂಜುರಿಯಿಂದ ಗುಣಮುಖರಾಗಿ ಫಿಟ್ ಆಗಿದ್ದಾರಾ?
  • ಮೊದಲ ಟೆಸ್ಟ್​ಗೆ ಭಾರತದ ಬೌಲಿಂಗ್ ಪಡೆ ಹೇಗಿರಲಿದೆ?

ಮುಖ್ಯವಾಗಿ ರೋಹಿತ್ ಅವರು ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಆಡುವ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಮಯಾಂಕ್ ಇನ್ನಿಂಗ್ಸ್ ಆರಂಭಿಸಿದರೆ ಗಿಲ್ ಮತ್ತು ಅಯ್ಯರ್ ಮಧ್ಯಮ ಕ್ರಮಾಂಕದಲ್ಲಿ ಟೀಮ್ ಇಂಡಿಯಾಕ್ಕೆ ಬಲ ತುಂಬಲಿದ್ದಾರೆ. ಇನ್ನು ಉಪ ನಾಯಕನಾಗಿರುವ ಜಸ್​ಪ್ರೀತ್ ಬುಮ್ರಾ ಅವರು ಈಗಾಗಲೇ ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ನೆಟ್​ನಲ್ಲಿ ಅತ್ಯುತ್ತಮ ಅಭ್ಯಾಸ ನಡೆಸುತ್ತಿದ್ದಾರೆ ಎಂದು ಹೇಳುವ ಮೂಲಕ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹಿಂಟ್ ಕೊಟ್ಟಿದ್ದಾರೆ.

ಪಂದ್ಯ ಎಷ್ಟು ಗಂಟೆಗೆ ಆರಂಭ?:

ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9:30ಕ್ಕೆ ಮ್ಯಾಚ್ ಶುರುವಾಗಲಿದ್ದು, ಸರಿಯಾಗಿ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ. ಆನ್​ಲೈನ್​ನಲ್ಲಾದರೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

IND vs SL: ಬಲಿಷ್ಠವಾಗಿದೆ ಭಾರತ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ XI ಹೇಗಿರಲಿದೆ?

IND vs SL Test: ಭಾರತ- ಶ್ರೀಲಂಕಾ ಮೊದಲ ಟೆಸ್ಟ್ ಯಾವಾಗ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

Published On - 12:10 pm, Thu, 3 March 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ