AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಹಿತ್​ಗೆ ಟೀಂ ಇಂಡಿಯಾದ ನಾಯಕತ್ವವಹಿಸಿಕೊಳ್ಳಲು ಇಷ್ಟವಿರಲಿಲ್ಲ’; ಗಂಗೂಲಿ ಶಾಕಿಂಗ್ ಹೇಳಿಕೆ

sourav Ganguly: ಟೀಂ ಇಂಡಿಯಾವನ್ನು ಅತ್ಯಂತ ಯಶಸ್ವಿಯಾಗಿ ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ ಅವರ ಬಗ್ಗೆ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

‘ರೋಹಿತ್​ಗೆ ಟೀಂ ಇಂಡಿಯಾದ ನಾಯಕತ್ವವಹಿಸಿಕೊಳ್ಳಲು ಇಷ್ಟವಿರಲಿಲ್ಲ’; ಗಂಗೂಲಿ ಶಾಕಿಂಗ್ ಹೇಳಿಕೆ
ಸೌರವ್ ಗಂಗೂಲಿ
ಪೃಥ್ವಿಶಂಕರ
|

Updated on:Nov 10, 2023 | 6:17 PM

Share

2023ರ ವಿಶ್ವಕಪ್‌ನಲ್ಲಿ (ICC World Cup 2023) ಉತ್ತಮ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ ಇದುವರೆಗೆ ಆಡಿದ 8 ಪಂದ್ಯಗಳಲ್ಲಿ ಅಜೇಯರಾಗಿ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ದೃಷ್ಟಿಕೋನದಿಂದ ನೋಡಿದರೆ, ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಬಲಿಷ್ಠವಾಗಿ ಕಾಣುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ವಿಶ್ವಕಪ್​ನಲ್ಲಿ ಒಂದೇ ಒಂದು ಸೋಲು ಕಾಣದೆ ಸೆಮಿಫೈನಲ್‌ಗೇರಿದ ಮೊದಲ ತಂಡ ಎನಿಸಿಕೊಂಡಿರುವ ಟೀಂ ಇಂಡಿಯಾ ಇದೇ ಭಾನುವಾರ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನೆದರ್ಲೆಂಡ್ಸ್ (India vs Netherlands) ತಂಡವನ್ನು ಎದುರಿಸಲಿದೆ. ಆದರೆ ಈ ನಡುವೆ ಟೀಂ ಇಂಡಿಯಾವನ್ನು ಅತ್ಯಂತ ಯಶಸ್ವಿಯಾಗಿ ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಬಗ್ಗೆ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಸ್ಫೋಟಕ ಹೇಳಿಕೆಯೊಂದನ್ನು ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ.

ನಾಯಕನಾಗಲು ರೋಹಿತ್​ಗೆ ಇಷ್ಟವಿರಲಿಲ್ಲ

ವಾಸ್ತವವಾಗಿ ಟೀಂ ಇಂಡಿಯಾದ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿದ ಬಳಿಕ ರೋಹಿತ್ ಶರ್ಮಾಗೆ ತಂಡದ ನಾಯಕನ ಪಟ್ಟಕಟ್ಟಲಾಯಿತು. ರೋಹಿತ್ ಈ ಅಧಿಕಾರವನ್ನು ವಹಿಸಿಕೊಳ್ಳುವುದಕ್ಕೂ ಮುನ್ನವೇ, ಕೊಹ್ಲಿ ನಂತರ ತಂಡದ ನಾಯಕನಾಗಲು ಯಾರು ಅರ್ಹನೆಂಬ ಪ್ರಶ್ನೆಗೆ ಎಲ್ಲರೂ ರೋಹಿತ್​ ಕಡೆ ಬೆರಳು ಮಾಡುತ್ತಿದ್ದರು. ಇದಕ್ಕೆ ಸೂಕ್ತವೆಂಬಂತೆ ರೋಹಿತ್ ಕೂಡ ಐಪಿಎಲ್​ನಲ್ಲಾಗಲಿ ಅಥವಾ ಅವಕಾಶ ಸಿಕ್ಕಾಗ ಟೀಂ ಇಂಡಿಯಾದಲ್ಲಾಗಲಿ ನಾಯಕನಾಗಿ ಅದ್ಭುತ ಫಲಿತಾಂಶ ತಂದುಕೊಟ್ಟಿದ್ದರು. ಹೀಗಾಗಿ ಕೊಹ್ಲಿ ಬಳಿಕ ರೋಹಿತ್ ಅವರನ್ನೇ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಆದರೆ ಟೀಂ ಇಂಡಿಯಾದ ನಾಯಕನಾಗಲು ರೋಹಿತ್​ಗೆ ಇಷ್ಟವಿರಲಿಲ್ಲ ಎಂಬ ಶಾಕಿಂಗ್ ಹೇಳಿಕೆಯನ್ನು ಬಿಸಿಸಿಐ ಮಾಜಿ ಮುಖ್ಯಸ್ಥ ಸೌರವ್ ಗಂಗೂಲಿ ಹೊರಹಾಕಿದ್ದಾರೆ.

ಉತ್ತಮ ಆರಂಭದ ನಂತರ ಎಡವುತ್ತಿರುವ ರಾಹುಲ್; ರೋಹಿತ್​ಗೆ ಹೊಸ ತಲೆನೋವು

ಆ ಬಳಿಕ ರೋಹಿತ್ ಒಪ್ಪಿಗೆ ಸೂಚಿಸಿದರು

ಕೋಲ್ಕತ್ತಾದ ಸ್ಥಳೀಯ ಸುದ್ದಿ ವಾಹಿನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಕುರಿತು ಮಾತನಾಡಿದ ಮಾಜಿ ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ, ‘ರೋಹಿತ್ ಶರ್ಮಾಗೆ ಟೀಂ ಇಂಡಿಯಾದ ನಾಯಕನಾಗಲು ಇಷ್ಟವಿರಲಿಲ್ಲ. ಏಕೆಂದರೆ ಆ ಸಮಯದಲ್ಲಿ ಅವರು ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲೂ ಆಡುತ್ತಿದ್ದರು. ಹೀಗಾಗಿ ಹೆಚ್ಚಿನ ಒತ್ತಡವನ್ನು ತೆಗೆದುಕೊಳ್ಳಲು ರೋಹಿತ್​ಗೆ ಇಷ್ಟವಿರಲಿಲ್ಲ. ಆದರೆ ನಾನು ರೋಹಿತ್ ಅವರನ್ನು ಒಪ್ಪಿಸಿದೆ. ರೋಹಿತ್ ಬಳಿ ಈ ಬಗ್ಗೆ ಮಾತನಾಡಿದ ನಾನು ‘ರೋಹಿತ್ ನೀವೇ ಹೌದು ಎಂದು ಹೇಳಬೇಕು ಅಥವಾ ನಾನು ನಾಯಕನಾಗಿ ನಿಮ್ಮ ಹೆಸರನ್ನು ಘೋಷಿಸುತ್ತೇನೆ ಎಂದು ನಾನು ಅವರಿಗೆ ಹೇಳಿದೆ. ಆ ಬಳಿಕ ರೋಹಿತ್ ಒಪ್ಪಿಗೆ ಸೂಚಿಸಿದರು. ಈಗ ರೋಹಿತ್ ತಂಡವನ್ನು ಮುಂಚೂಣಿಯಿಂದ ಮುನ್ನಡೆಸುತ್ತಿರುವುದು ನನಗೆ ಖುಷಿ ತಂದಿದೆ ಎಂದಿದ್ದಾರೆ.

ನಾಯಕನಾಗಿ ರೋಹಿತ್ ದಾಖಲೆ

ನಾಯಕನಾಗಿ ರೋಹಿತ್ ಶರ್ಮಾ ಅವರ ದಾಖಲೆ ಅತ್ಯುತ್ತಮವಾಗಿದೆ. ಅದು ಐಪಿಎಲ್​ ಆಗಿರಲಿ ಅಥವಾ ಅಂತರಾಷ್ಟ್ರೀಯ ಕ್ರಿಕೆಟ್ ಆಗಿರಲಿ. ರೋಹಿತ್ ಎಲ್ಲೆಡೆ ತಮ್ಮ ನಾಯಕತ್ವದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ. ಅವರ ನಾಯಕತ್ವದಲ್ಲಿ, ರೋಹಿತ್ ಮುಂಬೈ ತಂಡವನ್ನು 5 ಬಾರಿ (2013, 2015, 2017, 2019, 2020) ಐಪಿಎಲ್ ಚಾಂಪಿಯನ್ ಮಾಡಿದ್ದಾರೆ. ಇದಲ್ಲದೆ, ಅವರ ನಾಯಕತ್ವದಲ್ಲಿ ಭಾರತ ತಂಡ ಏಷ್ಯಾಕಪ್ ಗೆದ್ದು ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ ಒನ್ ಆಗಿದೆ.

ವಿಶ್ವಕಪ್​ನಲ್ಲಿ ರೋಹಿತ್ ಪ್ರದರ್ಶನ

ನಾಯಕನಾಗಿ ರೋಹಿತ್ ಶರ್ಮಾ ತಂಡವನ್ನು ಮುಂಚೂಣಿಯಿಂದ ಮುನ್ನಡೆಸಿದ್ದಾರೆ. ವಿಶ್ವಕಪ್​ನಲ್ಲಿ ಇದುವರೆಗೆ ಆಡಿರುವ 8 ಇನ್ನಿಂಗ್ಸ್‌ಗಳಲ್ಲಿ ರೋಹಿತ್ 442 ರನ್ ಗಳಿಸಿದ್ದಾರೆ. ಅಲ್ಲದೆ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ನಂತರ ಭಾರತದ ಎರಡನೇ ಅತಿ ಹೆಚ್ಚು ಸ್ಕೋರರ್ ಎನಿಸಿಕೊಂಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Fri, 10 November 23

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ