AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Retire: ಟಿ20 ಬಳಿಕ ಟೆಸ್ಟ್ ಕ್ರಿಕೆಟ್​ಗೂ ವಿದಾಯ ಹೇಳಿದ ರೋಹಿತ್ ಶರ್ಮಾ

ohit Sharma Retires from Test Cricket: ಐಪಿಎಲ್ ನಡುವೆ ಭಾರತದ ಟೆಸ್ಟ್ ನಾಯಕ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಆಯ್ಕೆ ಸಮಿತಿಯ ಅವರನ್ನು ಈ ಮಾದರಿಯ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸುತ್ತಿದೆ ಎಂಬ ಸುದ್ದಿ ಹೊರಬಿದ್ದ ನಂತರ ಈ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Rohit Sharma Retire: ಟಿ20 ಬಳಿಕ ಟೆಸ್ಟ್ ಕ್ರಿಕೆಟ್​ಗೂ ವಿದಾಯ ಹೇಳಿದ ರೋಹಿತ್ ಶರ್ಮಾ
Rohit Sharma
Follow us
ಪೃಥ್ವಿಶಂಕರ
|

Updated on:May 07, 2025 | 8:18 PM

ಐಪಿಎಲ್‌ (IPL 2025) ನಡುವೆ ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ (ICC) ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಾಸ್ತವವಾಗಿ ಆಯ್ಕೆ ಸಮಿತಿಯು ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ರೋಹಿತ್ ಶರ್ಮಾ ಈ ಮಾದರಿಗೆ ವಿದಾಯ ಹೇಳಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿದಾಯ ಘೋಷಿಸಿದ ರೋಹಿತ್

ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಸ್ಟೋರಿ ಪೋಸ್ಟ್ ಮಾಡಿದ್ದು ಅದರಲ್ಲಿ ಅವರು ತಮ್ಮ ಟೆಸ್ಟ್ ಕ್ಯಾಪ್ ಸಂಖ್ಯೆ 280 ರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ತಮ್ಮ ನಿವೃತ್ತಿಯನ್ನು ಘೋಷಿಸಿದ್ದು, ‘ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ನಿಮಗೆಲ್ಲರಿಗೂ ಹೇಳಲು ಬಯಸುತ್ತೇನೆ. ನನ್ನ ದೇಶವನ್ನು ಬಿಳಿ ಬಟ್ಟೆ ಧರಿಸಿ ಪ್ರತಿನಿಧಿಸುವುದು ನನಗೆ ದೊಡ್ಡ ಗೌರವವಾಗಿದೆ. ಇಷ್ಟು ವರ್ಷಗಳ ಕಾಲ ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ಏಕದಿನ ಮಾದರಿಯಲ್ಲಿ ದೇಶವನ್ನು ಪ್ರತಿನಿಧಿಸುವುದನ್ನು ಮುಂದುವರೆಸುತ್ತೇನೆ’ ಎಂದು ರೋಹಿತ್ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಟೆಸ್ಟ್ ನಿವೃತ್ತಿ

ಕಳೆದ ವರ್ಷವೇ ನಿವೃತ್ತಿ ಊಹಾಪೋಹ

ವಾಸ್ತವವಾಗಿ ಕಳೆದ ಕೆಲವು ತಿಂಗಳುಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಕಳೆದ ವರ್ಷ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲೇ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮುಖಭಂಗಕ್ಕೊಳಗಾಗಿತ್ತು. ಆ ನಂತರ ಆಸ್ಟ್ರೇಲಿಯಾ ಪ್ರವಾಸದಲ್ಲಿಯೂ ಹೀನಾಯ ಪ್ರದರ್ಶನ ನೀಡಿತ್ತು. ಈ ಎರಡು ಸೋಲುಗಳು ತಂಡವನ್ನು ಡಬ್ಲ್ಯುಟಿಸಿ ಫೈನಲ್​ನಿಂದ ಹೊರಹಾಕಿತ್ತು. ಅಂದಿನಿಂದ ರೋಹಿತ್​ರನ್ನು ಟೆಸ್ಟ್ ತಂಡದಿಂದ ಹೊರಗಿಡುವ ಜೊತೆಗೆ ಅವರನ್ನು ನಾಯಕತ್ವದಿಂದಲೂ ಕೆಳಗಿಳಿಸಬೇಕು ಎಂಬು ಕೂಗು ಜೋರಾಗಿ ಕೇಳಿಬರುತ್ತಿತ್ತು.

ಆದರೆ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ರೋಹಿತ್ ಇಂಗ್ಲೆಂಡ್ ಪ್ರವಾಸದಲ್ಲೂ ತಂಡವನ್ನು ಮುನ್ನಡೆಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಮೇ 6 ರಂದು, ಆಯ್ಕೆ ಸಮಿತಿಯು ರೋಹಿತ್ ಅವರನ್ನು ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಿದ್ದು, ಅದರ ಬಗ್ಗೆ ಬಿಸಿಸಿಐಗೂ ತಿಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು. ಇದರ ಬೆನ್ನಲ್ಲೇ ರೋಹಿತ್ ನಿವೃತ್ತಿ ಘೋಷಿಸಿದ್ದಾರೆ.

ರೋಹಿತ್ ಟೆಸ್ಟ್ ವೃತ್ತಿಜೀವನ

2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದ ರೋಹಿತ್, ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಮುಂದಿನ ಟೆಸ್ಟ್‌ನಲ್ಲೂ ಶತಕ ಗಳಿಸುವ ಮೂಲಕ ಅವರು ವಿಶೇಷ ಸಾಧನೆ ಮಾಡಿದ್ದರು. ಆದಾಗ್ಯೂ ಮುಂದಿನ 6 ವರ್ಷಗಳ ಕಾಲ ಈ ಸ್ವರೂಪದಲ್ಲಿ ರೋಹಿತ್​ಗೆ ಖಾಯಂ ಸ್ಥಾನ ಎಂಬುದು ಇರಲಿಲ್ಲ. ಆದರೆ 2019 ರಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ, ರೋಹಿತ್ ಅವರನ್ನು ಈ ಸ್ವರೂಪದಲ್ಲಿ ಮೊದಲ ಬಾರಿಗೆ ಆರಂಭಿಕ ಆಟಗಾರನನ್ನಾಗಿ ಕಣಕ್ಕಿಳಿಸಲಾಯಿತು. ಇಲ್ಲಿಂದ ಅವರ ವೃತ್ತಿಜೀವನ ಬದಲಾಯಿತು.

IND vs ENG: ಟೆಸ್ಟ್ ನಾಯಕತ್ವದಿಂದ ರೋಹಿತ್​ ಶರ್ಮಾಗೆ ಗೇಟ್​ಪಾಸ್; ಇಂಗ್ಲೆಂಡ್ ಪ್ರವಾಸಕ್ಕೆ ನೂತನ ನಾಯಕ

ಮೊದಲ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದ ರೋಹಿತ್, ಮೂರನೇ ಟೆಸ್ಟ್‌ನಲ್ಲಿಯೂ ದ್ವಿಶತಕ ಸಿಡಿಸಿದ್ದರು. ಅಂದಿನಿಂದ, ರೋಹಿತ್ ತಂಡದ ಆರಂಭಿಕ ಆಟಗಾರರಾಗಿ ಅನೇಕ ಅತ್ಯುತ್ತಮ ಇನ್ನಿಂಗ್ಸ್‌ಗಳನ್ನು ಆಡಿದ್ದರು. ನಂತರ 2022 ರಲ್ಲಿ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ ನಂತರ, ರೋಹಿತ್ ಅವರನ್ನು ಟೀಂ ಇಂಡಿಯಾದ ನಾಯಕರನ್ನಾಗಿ ನೇಮಿಲಾಯಿತು. ರೋಹಿತ್ ಒಟ್ಟು 67 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 4301 ರನ್ ಗಳಿಸಿದ್ದಾರೆ. ಅವರು 40.57 ರ ಸರಾಸರಿಯಲ್ಲಿ ರನ್ ಗಳಿಸಿರುವ ರೋಹಿತ್ 12 ಶತಕ ಮತ್ತು 18 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲಿ 2 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Wed, 7 May 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ