AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ನಿಂಗೆ ಬುದ್ಧಿ ಇಲ್ವಾ? ಸಹೋದರನ ವಿರುದ್ಧ ರೋಹಿತ್ ಶರ್ಮಾ ಗರಂ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ರೋಹಿತ್ ಶರ್ಮಾ ಪಾಲಿಗೆ ವಿಶೇಷ. ಏಕೆಂದರೆ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಅನಾವರಣಗೊಂಡಿದ್ದು, ಈ ವಿಶೇಷ ಗೌರವದ ಬಳಿಕ ನಡೆಯುವ ಮೊದಲ ಪಂದ್ಯ ಇದಾಗಿದೆ.

VIDEO: ನಿಂಗೆ ಬುದ್ಧಿ ಇಲ್ವಾ? ಸಹೋದರನ ವಿರುದ್ಧ ರೋಹಿತ್ ಶರ್ಮಾ ಗರಂ
Rohit Sharma
ಝಾಹಿರ್ ಯೂಸುಫ್
|

Updated on: May 17, 2025 | 9:04 AM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಏಕದಿನ ತಂಡದ ನಾಯಕ ರೋಹಿತ್ ಶರ್ಮಾಗೆ (Rohit Sharma) ವಿಶೇಷ ಗೌರವ ನೀಡಲಾಗಿದೆ. ಅದು ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿ ಹೊಸ ಸ್ಟ್ಯಾಂಡ್​ ಅನ್ನು ಅನಾವರಣಗೊಳಿಸುವ ಮೂಲಕ ಎಂಬುದು ವಿಶೇಷ. ಶುಕ್ರವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಿದ್ದ ಕಾರ್ಯಕ್ರಮದ ಮೂಲಕ ಸ್ಟ್ಯಾಂಡ್​ವೊಂದಕ್ಕೆ ರೋಹಿತ್ ಶರ್ಮಾ ಹೆಸರಿಡಲಾಗಿದೆ. ಈ ವಿಶೇಷ ಕಾರ್ಯಕ್ರಮದ ರೋಹಿತ್ ಶರ್ಮಾ ಅವರ ಕುಟುಂಬಸ್ಥರು ಮತ್ತು ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ, ರೋಹಿತ್ ಶರ್ಮಾ ಅವರು ಸಹೋದರ ವಿಶಾಲ್ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಕೂಡ ನಡೆದಿದೆ. ಅದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ, ರೋಹಿತ್ ತನ್ನ ಕಿರಿಯ ಸಹೋದರನನ್ನು ಗದರಿಸುತ್ತಿರುವುದು ಕಾಣಬಹುದು.

ತರಾಟೆ ತೆಗೆದುಕೊಂಡ ಹಿಟ್​ಮ್ಯಾನ್:

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ರೋಹಿತ್ ಶರ್ಮಾ ವಿಶಾಲ್ ಗೆ ತನ್ನ ಕಾರಿನ ಕಡೆಗೆ ಬೆರಳು ತೋರಿಸುತ್ತಾ, ಏನು ಇದು ಎಂದು ಡೆಂಟ್​ ಆಗಿರುವುದನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿಶಾಲ್ ರಿವರ್ಸ್ ತೆಗೆಯುವಾಗ ತಾಗಿದೆ ಎಂದು ಉತ್ತರಿಸಿದ್ದಾರೆ.

ಯಾರಿಂದ? ನಿನ್ನಿಂದನಾ? ಎಂದು ರೋಹಿತ್ ಶರ್ಮಾ ಮರು ಪ್ರಶ್ನಿಸಿದರು. ಅತ್ತ ವಿಶಾಲ್ ಕಡೆಯಿಂದ ಉತ್ತರ ಬರುತ್ತಿದ್ದಂತೆ, ಹಿಟ್​ಮ್ಯಾನ್, ನಿನಗೇನು ಬುದ್ದಿ ಇಲ್ವಾ? ಎಂದು ಕೋಪಗೊಂಡಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವಿಡಿಯೋಗೆ ಪರ – ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಕೆಲವರು ರೋಹಿತ್ ಶರ್ಮಾ ಅವರ ವರ್ತನೆಯನ್ನು ಸಮರ್ಥಿಸಿದರೆ ಮತ್ತೆ ಕೆಲವರು ಸಾರ್ವಜನಿಕ ಸ್ಥಳದಲ್ಲಿ ಸಹೋದರನನ್ನು ತರಾಟೆಗೆ ತೆಗೆದುಕೊಳ್ಳಬಾರದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ – ವಿಶಾಲ್ ವಿಡಿಯೋ:

ಮುಂಬೈನಲ್ಲಿ ಮೊದಲ ಮ್ಯಾಚ್:

ರೋಹಿತ್ ಶರ್ಮಾ ಹೆಸರು ಹೊಂದಿರುವ ವಾಂಖೆಡೆ ಸ್ಟೇಡಿಯಂನಲ್ಲೇ ಮುಂಬೈ ಇಂಡಿಯನ್ಸ್ ತಂಡವು ಮೇ 21 ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿದ್ದು, ಹೀಗಾಗಿ ಈ ಮ್ಯಾಚ್​ನಲ್ಲಿ ಗೆಲ್ಲಬೇಕಾದ ಒತ್ತಡದಲ್ಲಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ