MI vs RR: ಹಾರ್ದಿಕ್​ರನ್ನು ಗೇಲಿ ಮಾಡದಂತೆ ಫ್ಯಾನ್ಸ್ ಬಳಿ ಕೇಳಿಕೊಂಡ ರೋಹಿತ್ ಶರ್ಮಾ: ಇಲ್ಲಿದೆ ವಿಡಿಯೋ

Rohit Sharma-Hardik Pandya: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಫೀಲ್ಡಿಂಗ್ ಮಾಡುತ್ತಿರುವ ಸಂದರ್ಭ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರನ್ನು ಬೊಬ್ಬೆ ಹೊಡೆದು ಗೇಲಿ ಮಾಡುತ್ತಿದ್ದರು. ಆಗ ರೋಹಿತ್ ಬೊಬ್ಬೆ ಹೊಡೆಯವುದನ್ನು ನಿಲ್ಲಿಸುವಂತೆ ಅಭಿಮಾನಿಗಳ ಬಳಿ ಹೇಳಿದ್ದಾರೆ.

MI vs RR: ಹಾರ್ದಿಕ್​ರನ್ನು ಗೇಲಿ ಮಾಡದಂತೆ ಫ್ಯಾನ್ಸ್ ಬಳಿ ಕೇಳಿಕೊಂಡ ರೋಹಿತ್ ಶರ್ಮಾ: ಇಲ್ಲಿದೆ ವಿಡಿಯೋ
Rohit Sharma and Hardik Pandya
Follow us
|

Updated on: Apr 02, 2024 | 7:58 AM

2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನ ಮುಂಬೈ ಇಂಡಿಯನ್ಸ್‌ನ ಕಳಪೆ ಪ್ರದರ್ಶನ ಮುಂದುವರೆದಿದೆ. ಜೊತೆಗೆ ಹಾರ್ದಿಕ್ ಪಾಂಡ್ಯ (Hardik Pandya) ವಿರುದ್ಧ ಅಭಿಮಾನಿಗಳ ಕೋಪ ಕೂಡ ತಣ್ಣಗಾಗಿಲ್ಲ. ಇದು ಸೋಮವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲೂ ಕಂಡುಬಂತು. ಹಾರ್ದಿಕ್ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪುನಃ ಕೆಟ್ಟ ಅನುಭವವನ್ನು ಪಡೆದರು. ಆದರೆ, ಈ ಸಂದರ್ಭ ಎಂಐ ಮಾಜಿ ನಾಯಕ ರೋಹಿತ್ ಶರ್ಮಾ ಈರೀತಿ ಮಾಡದಂತೆ ಅಭಿಮಾನಿಗಳನ್ನು ಕೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ.

ಮುಂಬೈ ಫೀಲ್ಡಿಂಗ್ ಮಾಡುತ್ತಿರುವ ಸಂದರ್ಭ ಅಭಿಮಾನಿಗಳು ಹಾರ್ದಿಕ್ ಪಾಂಡ್ಯ ಅವರನ್ನು ಬೊಬ್ಬೆ ಹೊಡೆದು ಗೇಲಿ ಮಾಡುತ್ತಿದ್ದರು. ಆಗ ರೋಹಿತ್ ಬೊಬ್ಬೆ ಹೊಡೆಯವುದನ್ನು ನಿಲ್ಲಿಸುವಂತೆ ಅಭಿಮಾನಿಗಳ ಬಳಿ ಹೇಳಿದ್ದಾರೆ. ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿರುವಾಗ ಕೈಸನ್ನೆ ಮೂಲಕ ಹಾರ್ದಿಕ್ ವಿರುದ್ಧ ಗೇಲಿ ಮಾಡುವುದನ್ನು ನಿಲ್ಲಿಸುವಂತೆ ಹೇಳಿದರು.

ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಗೆಲ್ಲಬೇಕಾದರೆ ಬದಲಾವಣೆ ಅನಿವಾರ್ಯ

ಅಭಿಮಾನಿಗಳ ಬಳಿ ರೋಹಿತ್ ಶರ್ಮಾ ಮನವಿ ಮಾಡಿರುವುದು:

ವೇಗಿ ಟ್ರೆಂಟ್ ಬೌಲ್ಟ್ ಅವರ ಡೈನಾಮಿಕ್ ಸ್ಪೆಲ್ ಮತ್ತು ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರ ಸ್ಪಿನ್ ಬೌಲಿಂಗ್‌ನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಆತಿಥೇಯ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್‌ನ ವಾಂಖೆಡೆ ಸ್ಟೇಡಿಯಂನಲ್ಲಿ ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ರಾಯಲ್ಸ್ ಟಾಸ್ ಗೆದ್ದು ಬೌಲ್ ಆಯ್ಕೆ ಮಾಡಿಕೊಂಡರು. ಮುಂಬೈ ಅನ್ನು 125/9 ಗೆ ಯಶಸ್ವಿಯಾಗಿ ನಿರ್ಬಂಧಿಸಿತು. ರಿಯಾನ್ ಪರಾಗ್ ಅವರ ಅಜೇಯ 54 (39 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸೇರಿದಂತೆ) ರನ್​ಗಳ ನೆರವಿನಿಂದ ಆರ್​ಆರ್​ 15.3 ಓವರ್‌ಗಳಲ್ಲಿ ಗುರಿಯನ್ನು ಬೆನ್ನಟ್ಟಿತು.

ಬೆಂಗಳೂರಿನಲ್ಲಿ ಟಾಸ್ ಗೆದ್ದವನೇ ಬಾಸ್; ಪಿಚ್ ಯಾರಿಗೆ ಸಹಕಾರಿ?

ರಾಜಸ್ಥಾನ್ ರಾಯಲ್ಸ್ ತಂಡದ ಸತತ ಮೂರನೇ ಗೆಲುವಿನೊಂದಿಗೆ, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನಕ್ಕೇರಿದೆ. ಆದರೆ ಮುಂಬೈ ಇಂಡಿಯನ್ಸ್ ತಮ್ಮ ಮೂರನೇ ಸತತ ಸೋಲನ್ನು ಅನುಭವಿಸಿದ್ದು, ರನ್​ರೇಟ್​ನಲ್ಲಿ ಕೂಡ ಪಾತಾಳಕ್ಕೆ ಕುಸಿದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು