AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಮೆಲ್ಬೋರ್ನ್ ತಲುಪಿದ ಟೀಮ್ ಇಂಡಿಯಾ: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಅಭ್ಯಾಸ ಆರಂಭ

India vs Zimbabwe, T20 World Cup: ನವೆಂಬರ್ 6 ಭಾನುವಾರದಂದು ಭಾರತ ತಂಡ ಜಿಂಬಾಬ್ವೆ ವಿರುದ್ಧ ಸೂಪರ್ 12 ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಮುಂದಿನ ಪಂದ್ಯಕ್ಕಾಗಿ ಇಂದಿನಿಂದ ಅಭ್ಯಾಸ ಶುರು ಮಾಡಲಿದೆ.

IND vs ZIM: ಮೆಲ್ಬೋರ್ನ್ ತಲುಪಿದ ಟೀಮ್ ಇಂಡಿಯಾ: ಗೆಲ್ಲಲೇ ಬೇಕಾದ ಪಂದ್ಯಕ್ಕೆ ಅಭ್ಯಾಸ ಆರಂಭ
Team India
TV9 Web
| Edited By: |

Updated on: Nov 04, 2022 | 8:17 AM

Share

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿ (T20 World Cup) ತನ್ನ ಕೊನೆಯ ಪಂದ್ಯವನ್ನಾಡಲು ಟೀಮ್ ಇಂಡಿಯಾ ಮೆಲ್ಬೋರ್ನ್​ಗೆ (Melbourne) ಬಂದಿಳಿದಿದೆ. ಬಾಂಗ್ಲಾದೇಶ ವಿರುದ್ಧ 5 ರನ್​ಗಳ ರೋಚಕ ಗೆಲುವು ಸಾಧಿಸಿ ಗುರುವಾರ ಮೆಲ್ಬೋರ್ನ್​ಗೆ ಬಂದಿದ್ದು ಮುಂದಿನ ಪಂದ್ಯಕ್ಕಾಗಿ ಇಂದಿನಿಂದ ಅಭ್ಯಾಸ ಶುರು ಮಾಡಲಿದೆ. ಮೊಹಮ್ಮದ್​ ಸಿರಾಜ್​, ರಿಷಭ್​ ಪಂತ್​, ಯುಜ್ವೇಂದ್ರ ಚಹಲ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು ‘ಟ್ರಾವೆಲ್​ ಟು ಮೆಲ್ಬೋರ್ನ್​’ ಎಂದು ಬರೆದುಕೊಂಡಿದ್ದಾರೆ. ಇಂದು ನೆಟ್​ನಲ್ಲಿ ವಿರಾಟ್ ಕೊಹ್ಲಿ (Virat Kohli), ಸೂರ್ಯಕುಮಾರ್, ರೋಹಿತ್ ಕಠಿಣ ಬ್ಯಾಟಿಂಗ್ ಅಭ್ಯಾಸ ನಡೆಸಲಿದ್ದರೆ.

ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ ಪರಿಣಾಮ ಭಾರತದ ಸೆಮಿ ಫೈನಲ್ ಹಾದಿ ಕೂಡ ಕಠಿಣವಾಗಿದ್ದು ಉಳಿದ ಒಂದು ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ನವೆಂಬರ್ 6 ಭಾನುವಾರದಂದು ಭಾರತ ತಂಡ ಜಿಂಬಾಬ್ವೆ ವಿರುದ್ಧ ಸೂಪರ್ 12 ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ಈ ಪಂದ್ಯ ಆಯೋಜಿಸಲಾಗಿದ್ದು, ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ. ಭಾರತ ಸೆಮಿಫೈನಲ್ ತಲುಪಲು ಜಿಂಬಾಬ್ವೆ ವಿರುದ್ಧ ಗೆಲುವು ಮುಖ್ಯವಾಗಿದೆ.

ಪಾಯಿಂಟ್ ಟೇಬಲ್ ಗಮನಿಸುವುದಾದರೆ ಗ್ರೂಪ್ 2 ರಲ್ಲಿ ಎಲ್ಲ ತಂಡಗಳು ನಾಲ್ಕು ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ಮೂರು ಪಂದ್ಯದಲ್ಲಿ ಗೆದ್ದರೆ ಒಂದು ಪಂದ್ಯ ಸೋತು 6 ಅಂಕ ಸಂಪಾದಿಸಿದೆ. +0.730 ರನ್​ರೇಟ್ ಹೊಂದಿದೆ. ಎರಡು ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ 5 ಪಡೆದುಕೊಂಡಿದೆ. ಆದರೆ, ರನ್​ರೇಟ್​ನಲ್ಲಿ (+1.441) ಭಾರತಕ್ಕಿಂತ ಮುಂದಿದೆ. ಪಾಕಿಸ್ತಾನ ಮೂರನೇ ಸ್ಥಾನದಲ್ಲಿದ್ದು ಎರಡು ಗೆಲುವು ಎರಡು ಸೋಲುಂಡು 4 ಅಂಕ ಪಡೆದು +1.117 ರನ್​ರೇಟ್ ಹೊಂದಿದೆ. ಬಾಂಗ್ಲಾದೇಶ ಕೂಡ ಪಾಕ್ ರೀತಿಯಲ್ಲಿದ್ದು ಆದರೆ ರನ್​ರೇಟ್​ -1.276 ಇದೆ. ಜಿಂಬಾಬ್ವೆ ಹಾಗೂ ನೆದರ್​ಲೆಂಡ್ಸ್ ತಂಡ ಈಗಗಲೇ ಟೂರ್ನಿಯಿಂದ ಹೊರಬಿದ್ದಿದೆ.

ಇದನ್ನೂ ಓದಿ
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
ಬ್ಯಾಟಿಗೆ ಒಂದೂ ಬಾಲ್ ತಾಗಲಿಲ್ಲ; ಕೋಪದಿಂದ ಬ್ಯಾಟ್ ಬೀಸಾಡಿದ ಪಾಕ್ ಬ್ಯಾಟ್ಸ್​ಮನ್..! ವಿಡಿಯೋ
Image
ಕೇವಲ ಎರಡೇ ಬೌಂಡರಿ..! 0, 4, 4, 6.. ಇದು ಬಾಬರ್ ಕಳಪೆ ಫಾರ್ಮ್​ನ ಕರುಣಾಜನಕ ಕಥೆ
Image
PAK vs SA: ಪಾಕ್ ಎದುರು ಸೋತ ಆಫ್ರಿಕಾ; ಸೇಮಿಸ್ ತಲುಪಲು ಕೊನೆಯ ಪಂದ್ಯ ಗೆಲ್ಲಲೇಬೇಕು ಭಾರತ..!

ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಕೆಎಲ್ ರಾಹುಲ್ ಕೂಡ ಲಯ ಕಂಡುಕೊಂಡಿರುವುದು ಸಂತಸದ ವಿಚಾರ. ಕಳೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಇವರು ಅರ್ಧಶತಕ ಸಿಡಿಸಿ ಮಿಂಚಿದ್ದರು. ಆದರೆ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟ್ ಸದ್ದು ಮಡುತ್ತಿಲ್ಲ. ದಿನೇಶ್ ಕಾರ್ತಿಕ್ ಕೂಡ ಪದೇ ಪದೇ ವೈಫಲ್ಯ ಅನುಭವಿಸುತ್ತಿದ್ದಾರೆ. ಅರ್ಶ್​ದೀಪ್ ಸಿಂಗ್ ಪ್ರಮುಖ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ. ಭುವನೇಶ್ವರ್, ಶಮಿ ಕೂಡ ಇವರಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ