Champions Trophy: ರೋಹಿತ್ ಶರ್ಮಾ ನಿವೃತ್ತಿಗೆ ಗಡುವು..!

Rohit Sharma: ರೋಹಿತ್ ಶರ್ಮಾ ಅವರಿಗೆ ಈಗ 37 ವರ್ಷ. 2027ರ ಏಕದಿನ ವಿಶ್ವಕಪ್ ವೇಳೆಗೆ ಅವರಿಗೆ 39 ವರ್ಷ ಪ್ರಾಯವಾಗಲಿದೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯೊಂದಿಗೆ ವಿದಾಯ ಹೇಳುವಂತೆ ಹಿಟ್​ಮ್ಯಾನ್ ಅವರನ್ನು ಕೋರಲಾಗಿದೆ. ಒಂದು ವೇಳೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸದಿದ್ದರೆ, ಮುಂಬರುವ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿಲ್ಲ.

Champions Trophy: ರೋಹಿತ್ ಶರ್ಮಾ ನಿವೃತ್ತಿಗೆ ಗಡುವು..!
Rohit Sharma
Follow us
ಝಾಹಿರ್ ಯೂಸುಫ್
|

Updated on: Feb 05, 2025 | 2:24 PM

ಚಾಂಪಿಯನ್ಸ್ ಟ್ರೋಫಿ ಮುಕ್ತಾಯದೊಂದಿಗೆ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳುವುದು ಬಹುತೇಕ ಖಚಿತ. ಏಕೆಂದರೆ ಈ ಟೂರ್ನಿಯ ಬಳಿಕ ಭಾರತ ಏಕದಿನ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ಬಯಸಿದೆ.  ಇದೇ ಕಾರಣದಿಂದಾಗಿ ಚಾಂಪಿಯನ್ಸ್ ಟ್ರೋಫಿಯ ಬಳಿಕ ನಿವೃತ್ತಿ ಘೋಷಿಸುವಂತೆ ರೋಹಿತ್ ಶರ್ಮಾಗೆ ಸೂಚಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ.

ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ಅಂತಿಮ ಪಂದ್ಯವೇ ರೋಹಿತ್ ಶರ್ಮಾ ಪಾಲಿನ ಕೊನೆಯ ಅಂತಾರಾಷ್ಟ್ರೀಯ ಏಕದಿನ ಮ್ಯಾಚ್ ಆಗಿರಲಿದೆ. ಆ ಬಳಿಕ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದ ಆಯ್ಕೆಗೆ ಪರಿಗಣಿಸುವ ಸಾಧ್ಯತೆಯಿಲ್ಲ.

2027ರ ಏಕದಿನ ವಿಶ್ವಕಪ್​​ಗೆ ಪ್ಲ್ಯಾನ್:

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಟೀಮ್ ಇಂಡಿಯಾದ ಆಯ್ಕೆದಾರರು 2027 ರ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲು ಬಯಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಅವರ ನಿಲುವು ಕೂಡ ಸ್ಪಷ್ಟವಾಗಿರಬೇಕು.

ಚಾಂಪಿಯನ್ಸ್ ಟ್ರೋಫಿಯಂತಹ ದೊಡ್ಡ ಟೂರ್ನಮೆಂಟ್ ನಂತರ, ಟೀಮ್ ಇಂಡಿಯಾದಲ್ಲಿ ಬದಲಾವಣೆ ಕಂಡು ಬರುವುದು ಖಚಿತ. ಹೀಗಾಗಿ ರೋಹಿತ್ ಶರ್ಮಾ ಅವರ ಭವಿಷ್ಯವೂ ಮುಂಬರುವ ಚಾಂಪಿಯನ್ಸ್ ಟ್ರೋಫಿಯನ್ನು ಅವಲಂಬಿಸಿದೆ.

ಈ ಪಂದ್ಯಾವಳಿಯಲ್ಲಿ ಅವರು ಅತ್ಯದ್ಭುತ ಪ್ರದರ್ಶನ ನೀಡಿದರೆ ಮಾತ್ರ ತಂಡದಲ್ಲೇ ಉಳಿದುಕೊಳ್ಳಬಹುದು. ಇದಾಗ್ಯೂ 37 ವರ್ಷದ ಹಿಟ್​ಮ್ಯಾನ್ ಅವರನ್ನು ಮುಂದಿನ ಏಕದಿನ ವಿಶ್ವಕಪ್​ಗಾಗಿ ತಂಡದಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿಲ್ಲ ಎನ್ನಬಹುದು.

ಹೀಗಾಗಿಯೇ ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ರೋಹಿತ್ ಶರ್ಮಾಗೆ ಬಿಸಿಸಿಐ ಕಡೆಯಿಂದ ನಿವೃತ್ತಿ ಸೂಚನೆ ದೊರೆತಿದ್ದು, ಈ ಬಾರಿಯ ಟೂರ್ನಿಯ ಬಳಿಕ ಅವರು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ಆಯ್ಕೆ ಸಭೆಯ ಸಮಯದಲ್ಲಿ ಆಯ್ಕೆದಾರರು ಮತ್ತು ಮಂಡಳಿಯ ಸದಸ್ಯರು ರೋಹಿತ್ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ನಂತರ ಅವರು ತಮ್ಮ ಭವಿಷ್ಯದ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕೆಂದು ಇದೇ ವೇಳೆ ತಿಳಿಸಲಾಗಿದೆ.

ಇದನ್ನೂ ಓದಿ: ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಈಗಾಗಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಕಡೆಯಿಂದ ಏಕದಿನದಿಂದಲೂ ಬಿಸಿಸಿಐ ನಿವೃತ್ತಿ ಬಯಸುತ್ತಿರುವುದು ಸ್ಪಷ್ಟ. ಅತ್ತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸಂಪೂರ್ಣ ವಿಫಲರಾಗಿರುವ ಕಾರಣ ಅವರನ್ನು ಮುಂಬರುವ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿಯುವ ಮೂಲಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಬಹುದು.

ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ರಾಜಕೀಯ ಪಂಡಿತ ರಾಹುಲ್​ ಗಾಂಧಿ EVM​ ಬಗ್ಗೆ ಮಾತನಾಡುತ್ತಾರೆ: ಜೋಶಿ ವ್ಯಂಗ್ಯ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು