AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ

India vs Pakistan, Asia Cup: ಏಷ್ಯಾಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧದ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಈ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ
Vinay Bhat
| Edited By: |

Updated on:Aug 29, 2022 | 1:59 PM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್​ನ (Asia Cup 2022) ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 5 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2022 ರ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಮಾಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ಆಲ್ರೌಂಡ್ ಆಟ ಇಡೀ ಪಂದ್ಯದ ಪ್ರಮುಖ ಹೈಲೇಟ್ ಆಯಿತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಕ್ಸ್ ಸಿಡಿಸಿ ಪಂದ್ಯವನ್ನು ಫಿನಿಶ್ ಮಾಡಿದ್ದು ಅಮೋಘವಾಗಿತ್ತು. ಈ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

ಮೊದಲನೆಯದಾಗಿ, ಹೆಚ್ಚು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವ ಸೂರ್ಯಕುಮಾರ್ ಯಾದವ್ ಈ ಬಾರಿ ಆ ಸ್ಥಾನದಲ್ಲಿ ಆಡಲಿಲ್ಲ. ಸೂರ್ಯ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್ ಅವರು ರವೀಂದ್ರ ಜಡೇಜಾ ಅವರನ್ನು ಕಣಕ್ಕಿಳಿಸಿದರು. ಈ ನಿರ್ಧಾರ ಆರಂಭದಲ್ಲಿ ಅನೇಕರಿಗೆ ಅಚ್ಚರಿಯುಂಟು ಮಾಡಿದ್ದು ನಿಜ. ಆದರೆ, ತಂಡದ ರನ್ ಗತಿ ಹೆಚ್ಚಿಸುವಲ್ಲಿ ಜಡೇಜಾ ಮುಖ್ಯ ಪಾತ್ರವಹಿಸಿದರು. ರೋಹಿತ್, ರಾಹುಲ್ ಔಟಾದ ಬಳಿಕ ಕೊಂಚ ನೆಮ್ಮದಿಯಲ್ಲಿದ್ದ ಪಾಕಿಸ್ತಾನ ಬೌಲರ್​ಗಳಿಗೆ ಜಡೇಜಾ ಊಹಿಸಲಾಗದ ರೀತಿಯಲ್ಲಿ ರನ್ ಕಲೆಹಾಕಿ ತಂಡಕ್ಕೆ ನೆರವಾಗಿ ಕೊನೆಯ ಓವರ್ ವರೆಗೂ ಆಡಿದರು.

ಹಾರ್ದಿಕ್ ಪಾಂಡ್ಯ ಜೊತೆಗೂಡಿ ಜಡೇಜಾ ಕೇವಲ 29 ಎಸೆತಗಳಲ್ಲಿ 52 ರನ್​ಗಳ ಕಾಣಿಕೆ ನೀಡಿದರು. ಅಲ್ಲೆ ಭಾರತದ ಜಯ ಖಚಿತವಾಯಿತು. ಇವರ ವಿಕೆಟ್​ಗೆ ಅನೇಕ ಬಾರಿ ಪಾಕ್ ಬೌಲರ್​ಗಳು ಗಾಳ ಹಾಕಿದರೂ ಅದು ಫಲಸಿಗಲಿಲ್ಲ. 29 ಎಸೆತಗಳನ್ನು ಎದುರಿಸಿದ ಜಡ್ಡು ತಲಾ 2 ಫೋರ್, ಸಿಕ್ಸರ್ ಸಿಡಿಸಿ 35 ರನ್​ ಗಳಿಸಿದರು.

ಇನ್ನು ರೋಹಿತ್ ಶರ್ಮಾ ತೆಗೆದುಕೊಂಡ ಎರಡನೇ ನಿರ್ಧಾರ ಬೌಲರ್​ಗಳ ಮೇಲಿನ ನಂಬಿಕೆ. ಈ ಪಂದ್ಯದಲ್ಲಿ ಕ್ಯಾಪ್ಟನ್ ವೇಗಿಗಳನ್ನು ಅದ್ಭುತವಾಗಿ ಉಪಯೋಗಿಸಿಕೊಂಡರು. ಭುವನೇಶ್ವರ್​ಗೆ ಪವರ್ ಪ್ಲೇಯಲ್ಲಿ ಎರಡು ಓವರ್ ಮಾತ್ರ ನೀಡಿ ನಂತರ ಡೆತ್ ಓವರ್ ಹಾಕಲೆಂದು ಆಯ್ಕೆ ಇಟ್ಟಿದ್ದರು. ದುಬಾರಿಯಾದ ಆವೇಶ್ ಖಾನ್​ಗೆ ಕೇವಲ 2 ಓವರ್ ಅಷ್ಟೇ ನೀಡಿದರು. ಶಾರ್ಟ್ ಬಾಲ್ ಮೂಲಕ ಪರಿಣಾಮ ಬೀರಿದ ಹಾರ್ದಿಕ್ ಪಾಂಡ್ಯ ಮತ್ತು ಅರ್ಶ್​ದೀಪ್ ಸಿಂಗ್ ಅವರನ್ನ ಕೂಡ ರೋಹಿತ್ ಚೆನ್ನಾಗಿ ಬಳಸಿಕೊಂಡರು.

ವಿಶೇಷ ಎಂದರೆ ಟಿ20 ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು. ಭಾರತ ತಂಡ ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್​​ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಇದರಲ್ಲಿ ಭುವಿ 4 ವಿಕೆಟ್, ಹಾರ್ದಿಕ್ 3, ಅರ್ಶ್​ದೀಪ್ 2 ಹಾಗೂ ಆವೇಶ್ 1 ವಿಕೆಟ್ ಪಡೆದರು. ಯುಜ್ವೇಂದ್ರ ಚಹಲ್ 4 ಓವರ್ ಹಾಗೂ ಜಡೇಜಾ 2 ಓವರ್ ಬೌಲಿಂಗ್ ಮಾಡಿದರೂ ಒಂದು ವಿಕೆಟ್ ಸಿಗಲಿಲ್ಲ.

Published On - 1:55 pm, Mon, 29 August 22

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ