AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ

India vs Pakistan, Asia Cup: ಏಷ್ಯಾಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧದ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಈ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ
Vinay Bhat
| Updated By: Digi Tech Desk|

Updated on:Aug 29, 2022 | 1:59 PM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್​ನ (Asia Cup 2022) ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 5 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2022 ರ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಮಾಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ಆಲ್ರೌಂಡ್ ಆಟ ಇಡೀ ಪಂದ್ಯದ ಪ್ರಮುಖ ಹೈಲೇಟ್ ಆಯಿತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಕ್ಸ್ ಸಿಡಿಸಿ ಪಂದ್ಯವನ್ನು ಫಿನಿಶ್ ಮಾಡಿದ್ದು ಅಮೋಘವಾಗಿತ್ತು. ಈ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

ಮೊದಲನೆಯದಾಗಿ, ಹೆಚ್ಚು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವ ಸೂರ್ಯಕುಮಾರ್ ಯಾದವ್ ಈ ಬಾರಿ ಆ ಸ್ಥಾನದಲ್ಲಿ ಆಡಲಿಲ್ಲ. ಸೂರ್ಯ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್ ಅವರು ರವೀಂದ್ರ ಜಡೇಜಾ ಅವರನ್ನು ಕಣಕ್ಕಿಳಿಸಿದರು. ಈ ನಿರ್ಧಾರ ಆರಂಭದಲ್ಲಿ ಅನೇಕರಿಗೆ ಅಚ್ಚರಿಯುಂಟು ಮಾಡಿದ್ದು ನಿಜ. ಆದರೆ, ತಂಡದ ರನ್ ಗತಿ ಹೆಚ್ಚಿಸುವಲ್ಲಿ ಜಡೇಜಾ ಮುಖ್ಯ ಪಾತ್ರವಹಿಸಿದರು. ರೋಹಿತ್, ರಾಹುಲ್ ಔಟಾದ ಬಳಿಕ ಕೊಂಚ ನೆಮ್ಮದಿಯಲ್ಲಿದ್ದ ಪಾಕಿಸ್ತಾನ ಬೌಲರ್​ಗಳಿಗೆ ಜಡೇಜಾ ಊಹಿಸಲಾಗದ ರೀತಿಯಲ್ಲಿ ರನ್ ಕಲೆಹಾಕಿ ತಂಡಕ್ಕೆ ನೆರವಾಗಿ ಕೊನೆಯ ಓವರ್ ವರೆಗೂ ಆಡಿದರು.

ಹಾರ್ದಿಕ್ ಪಾಂಡ್ಯ ಜೊತೆಗೂಡಿ ಜಡೇಜಾ ಕೇವಲ 29 ಎಸೆತಗಳಲ್ಲಿ 52 ರನ್​ಗಳ ಕಾಣಿಕೆ ನೀಡಿದರು. ಅಲ್ಲೆ ಭಾರತದ ಜಯ ಖಚಿತವಾಯಿತು. ಇವರ ವಿಕೆಟ್​ಗೆ ಅನೇಕ ಬಾರಿ ಪಾಕ್ ಬೌಲರ್​ಗಳು ಗಾಳ ಹಾಕಿದರೂ ಅದು ಫಲಸಿಗಲಿಲ್ಲ. 29 ಎಸೆತಗಳನ್ನು ಎದುರಿಸಿದ ಜಡ್ಡು ತಲಾ 2 ಫೋರ್, ಸಿಕ್ಸರ್ ಸಿಡಿಸಿ 35 ರನ್​ ಗಳಿಸಿದರು.

ಇನ್ನು ರೋಹಿತ್ ಶರ್ಮಾ ತೆಗೆದುಕೊಂಡ ಎರಡನೇ ನಿರ್ಧಾರ ಬೌಲರ್​ಗಳ ಮೇಲಿನ ನಂಬಿಕೆ. ಈ ಪಂದ್ಯದಲ್ಲಿ ಕ್ಯಾಪ್ಟನ್ ವೇಗಿಗಳನ್ನು ಅದ್ಭುತವಾಗಿ ಉಪಯೋಗಿಸಿಕೊಂಡರು. ಭುವನೇಶ್ವರ್​ಗೆ ಪವರ್ ಪ್ಲೇಯಲ್ಲಿ ಎರಡು ಓವರ್ ಮಾತ್ರ ನೀಡಿ ನಂತರ ಡೆತ್ ಓವರ್ ಹಾಕಲೆಂದು ಆಯ್ಕೆ ಇಟ್ಟಿದ್ದರು. ದುಬಾರಿಯಾದ ಆವೇಶ್ ಖಾನ್​ಗೆ ಕೇವಲ 2 ಓವರ್ ಅಷ್ಟೇ ನೀಡಿದರು. ಶಾರ್ಟ್ ಬಾಲ್ ಮೂಲಕ ಪರಿಣಾಮ ಬೀರಿದ ಹಾರ್ದಿಕ್ ಪಾಂಡ್ಯ ಮತ್ತು ಅರ್ಶ್​ದೀಪ್ ಸಿಂಗ್ ಅವರನ್ನ ಕೂಡ ರೋಹಿತ್ ಚೆನ್ನಾಗಿ ಬಳಸಿಕೊಂಡರು.

ವಿಶೇಷ ಎಂದರೆ ಟಿ20 ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು. ಭಾರತ ತಂಡ ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್​​ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಇದರಲ್ಲಿ ಭುವಿ 4 ವಿಕೆಟ್, ಹಾರ್ದಿಕ್ 3, ಅರ್ಶ್​ದೀಪ್ 2 ಹಾಗೂ ಆವೇಶ್ 1 ವಿಕೆಟ್ ಪಡೆದರು. ಯುಜ್ವೇಂದ್ರ ಚಹಲ್ 4 ಓವರ್ ಹಾಗೂ ಜಡೇಜಾ 2 ಓವರ್ ಬೌಲಿಂಗ್ ಮಾಡಿದರೂ ಒಂದು ವಿಕೆಟ್ ಸಿಗಲಿಲ್ಲ.

Published On - 1:55 pm, Mon, 29 August 22

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್