AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ

India vs Pakistan, Asia Cup: ಏಷ್ಯಾಕಪ್ 2022 ರಲ್ಲಿ ಪಾಕಿಸ್ತಾನ ವಿರುದ್ಧದ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಈ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

Rohit Sharma: ಇಡೀ ಪಂದ್ಯದ ಗತಿಯನ್ನೇ ಬದಲಾಯಿಸಿತು ರೋಹಿತ್ ಶರ್ಮಾ ತೆಗೆದುಕೊಂಡ 2 ನಿರ್ಧಾರ
Vinay Bhat
| Edited By: |

Updated on:Aug 29, 2022 | 1:59 PM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್​ನ (Asia Cup 2022) ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 5 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿತು. ಬ್ಯಾಟಿಂಗ್ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ 2022 ರ ಮೊದಲ ಪಂದ್ಯದಲ್ಲೇ ಗೆದ್ದು ಶುಭಾರಂಭ ಮಾಡಿದೆ. ಹಾರ್ದಿಕ್ ಪಾಂಡ್ಯ (Hardik Pandya) ಆಲ್ರೌಂಡ್ ಆಟ ಇಡೀ ಪಂದ್ಯದ ಪ್ರಮುಖ ಹೈಲೇಟ್ ಆಯಿತು. ಅದರಲ್ಲೂ ಕೊನೆಯ ಓವರ್​ನಲ್ಲಿ ಸಿಕ್ಸ್ ಸಿಡಿಸಿ ಪಂದ್ಯವನ್ನು ಫಿನಿಶ್ ಮಾಡಿದ್ದು ಅಮೋಘವಾಗಿತ್ತು. ಈ ರೋಚಕ ಕಾದಾಟದಲ್ಲಿ ಭಾರತ ಗೆಲುವು ಸಾಧಿಸಲು ನಾಯಕ ರೋಹಿತ್ ಶರ್ಮಾ (Rohit Sharma) ತೆಗೆದುಕೊಂಡ ಎರಡು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

ಮೊದಲನೆಯದಾಗಿ, ಹೆಚ್ಚು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವ ಸೂರ್ಯಕುಮಾರ್ ಯಾದವ್ ಈ ಬಾರಿ ಆ ಸ್ಥಾನದಲ್ಲಿ ಆಡಲಿಲ್ಲ. ಸೂರ್ಯ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್ ಅವರು ರವೀಂದ್ರ ಜಡೇಜಾ ಅವರನ್ನು ಕಣಕ್ಕಿಳಿಸಿದರು. ಈ ನಿರ್ಧಾರ ಆರಂಭದಲ್ಲಿ ಅನೇಕರಿಗೆ ಅಚ್ಚರಿಯುಂಟು ಮಾಡಿದ್ದು ನಿಜ. ಆದರೆ, ತಂಡದ ರನ್ ಗತಿ ಹೆಚ್ಚಿಸುವಲ್ಲಿ ಜಡೇಜಾ ಮುಖ್ಯ ಪಾತ್ರವಹಿಸಿದರು. ರೋಹಿತ್, ರಾಹುಲ್ ಔಟಾದ ಬಳಿಕ ಕೊಂಚ ನೆಮ್ಮದಿಯಲ್ಲಿದ್ದ ಪಾಕಿಸ್ತಾನ ಬೌಲರ್​ಗಳಿಗೆ ಜಡೇಜಾ ಊಹಿಸಲಾಗದ ರೀತಿಯಲ್ಲಿ ರನ್ ಕಲೆಹಾಕಿ ತಂಡಕ್ಕೆ ನೆರವಾಗಿ ಕೊನೆಯ ಓವರ್ ವರೆಗೂ ಆಡಿದರು.

ಹಾರ್ದಿಕ್ ಪಾಂಡ್ಯ ಜೊತೆಗೂಡಿ ಜಡೇಜಾ ಕೇವಲ 29 ಎಸೆತಗಳಲ್ಲಿ 52 ರನ್​ಗಳ ಕಾಣಿಕೆ ನೀಡಿದರು. ಅಲ್ಲೆ ಭಾರತದ ಜಯ ಖಚಿತವಾಯಿತು. ಇವರ ವಿಕೆಟ್​ಗೆ ಅನೇಕ ಬಾರಿ ಪಾಕ್ ಬೌಲರ್​ಗಳು ಗಾಳ ಹಾಕಿದರೂ ಅದು ಫಲಸಿಗಲಿಲ್ಲ. 29 ಎಸೆತಗಳನ್ನು ಎದುರಿಸಿದ ಜಡ್ಡು ತಲಾ 2 ಫೋರ್, ಸಿಕ್ಸರ್ ಸಿಡಿಸಿ 35 ರನ್​ ಗಳಿಸಿದರು.

ಇನ್ನು ರೋಹಿತ್ ಶರ್ಮಾ ತೆಗೆದುಕೊಂಡ ಎರಡನೇ ನಿರ್ಧಾರ ಬೌಲರ್​ಗಳ ಮೇಲಿನ ನಂಬಿಕೆ. ಈ ಪಂದ್ಯದಲ್ಲಿ ಕ್ಯಾಪ್ಟನ್ ವೇಗಿಗಳನ್ನು ಅದ್ಭುತವಾಗಿ ಉಪಯೋಗಿಸಿಕೊಂಡರು. ಭುವನೇಶ್ವರ್​ಗೆ ಪವರ್ ಪ್ಲೇಯಲ್ಲಿ ಎರಡು ಓವರ್ ಮಾತ್ರ ನೀಡಿ ನಂತರ ಡೆತ್ ಓವರ್ ಹಾಕಲೆಂದು ಆಯ್ಕೆ ಇಟ್ಟಿದ್ದರು. ದುಬಾರಿಯಾದ ಆವೇಶ್ ಖಾನ್​ಗೆ ಕೇವಲ 2 ಓವರ್ ಅಷ್ಟೇ ನೀಡಿದರು. ಶಾರ್ಟ್ ಬಾಲ್ ಮೂಲಕ ಪರಿಣಾಮ ಬೀರಿದ ಹಾರ್ದಿಕ್ ಪಾಂಡ್ಯ ಮತ್ತು ಅರ್ಶ್​ದೀಪ್ ಸಿಂಗ್ ಅವರನ್ನ ಕೂಡ ರೋಹಿತ್ ಚೆನ್ನಾಗಿ ಬಳಸಿಕೊಂಡರು.

ವಿಶೇಷ ಎಂದರೆ ಟಿ20 ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ ವೇಗದ ಬೌಲರ್‌ಗಳು ಎಲ್ಲ 10 ವಿಕೆಟ್‌ಗಳನ್ನು ಕಬಳಿಸಿದ್ದು ಇದೇ ಮೊದಲು. ಭಾರತ ತಂಡ ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಅರ್ಶ್​​ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿತ್ತು. ಇದರಲ್ಲಿ ಭುವಿ 4 ವಿಕೆಟ್, ಹಾರ್ದಿಕ್ 3, ಅರ್ಶ್​ದೀಪ್ 2 ಹಾಗೂ ಆವೇಶ್ 1 ವಿಕೆಟ್ ಪಡೆದರು. ಯುಜ್ವೇಂದ್ರ ಚಹಲ್ 4 ಓವರ್ ಹಾಗೂ ಜಡೇಜಾ 2 ಓವರ್ ಬೌಲಿಂಗ್ ಮಾಡಿದರೂ ಒಂದು ವಿಕೆಟ್ ಸಿಗಲಿಲ್ಲ.

Published On - 1:55 pm, Mon, 29 August 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!