ಆಸ್ಟ್ರೇಲಿಯಾ ಸರಣಿಗೂ ಮೊಹಮ್ಮದ್ ಶಮಿ ಡೌಟ್: ಬಿಗ್ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

ಆಸ್ಟ್ರೇಲಿಯಾ ಸರಣಿಗೂ ಮೊಹಮ್ಮದ್ ಶಮಿ ಡೌಟ್: ಬಿಗ್ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
Mohammed Shami
Follow us
|

Updated on: Oct 15, 2024 | 2:25 PM

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ. ಏಕೆಂದರೆ ಶಮಿ ಇನ್ನೂ ಸಹ ಸಂಪೂರ್ಣ ಫಿಟ್​ನೆಸ್ ಸಾಧಿಸಿಲ್ಲ. ಹೀಗಾಗಿ ಅವರ ಪುನರಾಗಮನ ಮತ್ತಷ್ಟು ವಿಳಂಬವಾಗಲಿದೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ಅವರ ಫಿಟ್​ನೆಸ್ ಕುರಿತಾದ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯೊಂದಿಗೆ ಅವರು ಮುಂಬರುವ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಆಸ್ಟ್ರೇಲಿಯಾ ಸರಣಿಗೆ ಶಮಿ ಅವರನ್ನು ಕರೆಯುವುದು ಕಷ್ಟಸಾಧ್ಯ. ಏಕೆಂದರೆ ಅವರ ಮೊಣಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಇದೇ ಈಗ ಅವರಿಗೆ ಹಿನ್ನಡೆಯನ್ನುಂಟು ಮಾಡಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಈ ಹಿಂದೆಯೇ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಬೇಕಿತ್ತು. ಆದರೆ ಮೊಣಕಾಲಿನಲ್ಲಿ ಕಾಣಿಸಿಕೊಂಡ ಊತದ ಪರಿಣಾಮ ಇದೀಗ ಮತ್ತೆ ಆರಂಭದಿಂದಲೇ ಅವರ ರಿಹ್ಯಾಬ್ ಶುರು ಮಾಡಬೇಕು. ಹೀಗಾಗಿ ಅವರ ಮರಳುವಿಕೆ ಮತ್ತಷ್ಟು ವಿಳಂಬವಾಗಬಹುದು ಎಂದು ಟೀಮ್ ಇಂಡಿಯಾ ನಾಯಕ ತಿಳಿಸಿದ್ದಾರೆ.

ನಾವೆಲ್ಲರೂ ಮೊಹಮ್ಮದ್ ಶಮಿ ಆದಷ್ಟು ಬೇಗ 100% ಫಿಟ್​ ಆಗಲಿ ಎಂದು ಬಯಸುತ್ತಿದ್ದೇವೆ. ಆದರೆ ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಅವರನ್ನು ಆಸ್ಟ್ರೇಲಿಯಾ ಟೆಸ್ಟ್ ಸರಣಿಗೆ ಕರೆದೊಯ್ಯಲು ಸಾಧ್ಯವಾಗುವುದಿಲ್ಲ.  ಇದೀಗ ಶಮಿ ಅವರ ಫಿಟ್​ನೆಸ್​ಗಾಗಿ ಫಿಸಿಯೋಗಳು, ತರಬೇತುದಾರರು, ವೈದ್ಯರು ಕೆಲ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ.

ಇನ್ನು ಫಿಟ್​ನೆಸ್ ಸಾಧಿಸಿದರೂ ಮೊಹಮ್ಮದ್ ಶಮಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಮರಳುವ ಮುನ್ನ ಒಂದೆರಡು (ಅಭ್ಯಾಸ) ಪಂದ್ಯಗಳನ್ನಾಡಬೇಕಿದೆ. ಹೀಗಾಗಿ ಅವರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಪರ 64 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ವೇಳೆ 27.71 ಸರಾಸರಿಯಲ್ಲಿ 229 ವಿಕೆಟ್ ಪಡೆದಿದ್ದಾರೆ. ಇದೀಗ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರು ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಿಂದ ಹೊರಗುಳಿದರೆ, ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯಾಗಬಹುದು.

ಮೊಹಮ್ಮದ್ ಶಮಿಗೆ ಏನಾಗಿದೆ?

ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ರೀನ್​ಗೆ ಗೇಟ್​ ಪಾಸ್..!

ಇತ್ತೀಚೆಗಷ್ಟೇ ಬೌಲಿಂಗ್ ಅಭ್ಯಾಸ ಆರಂಭಿಸಿದ್ದ ಶಮಿಗೆ ಅವರ ಮೊಣಕಾಲಿನಲ್ಲಿ ಊತ ಕಾಣಿಸಿಕೊಂಡಿದೆ. ಹೀಗಾಗಿ ಅವರು ಇದೀಗ ಮತ್ತೆ ಫಿಟ್​ನೆಸ್​ನತ್ತ ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿಯೇ ಅವರು ನವೆಂಬರ್ 22 ರಿಂದ ಶುರುವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಅಲಭ್ಯರಾಗುವ ಸಾಧ್ಯತೆಯಿದೆ.

ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಮೈಸೂರು ದಸರಾ: ವಿಜಯಪುರ ಸತ್ತಿಗೆ ಕುಣಿತ ಕಲಾ ತಂಡಕ್ಕೆ ಮೊದಲ ಬಹುಮಾನ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗೆ ಮನವಿ: ಬಿವೈ ವಿಜಯೇಂದ್ರ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಹುಲಿ ಸೆರೆಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಾದ್ಯಂತ ಭಾರೀ ಮಳೆ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ವಕ್ಫ್ ಜಮೀನು: ಸಚಿವ ಜಮೀರ್ ಅಹ್ಮದ್​ರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ಓಕಳೀಪುರ ರೈಲ್ವೆ ಅಂಡರ್​ಪಾಸ್​ನಲ್ಲಿ ನೀರು ನಿಂತು ಜನರ ಪರದಾಟ
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ತನಿಖೆಯ ನಂತರ ಪೂರ್ಣ ಮಾಹಿತಿ ನೀಡುತ್ತೇವೆ: ಡಾ ಶರಣಪ್ಪ, ಪೊಲೀಸ್ ಕಮೀಶನರ್
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಧಾರಾಕಾರ ಮಳೆ: ಬೆಳ್ಳಂಬೆಳಗ್ಗೆಯೇ ಶುರುವಾಯ್ತು ರಗಳೆ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ