AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಬರೇ ಸಾಕು… ರೋಹಿತ್, ಕೊಹ್ಲಿ ನಿವೃತ್ತಿಗೆ ಗೌತಮ್ ಗಂಭೀರ್ ಕಾರಣ?

Rohit Sharma - Virat Kohli: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಇನ್ಮುಂದೆ ಈ ಇಬ್ಬರು ದಿಗ್ಗಜರು ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಚುಟುಕು ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಹೊಸಬರೇ ಸಾಕು... ರೋಹಿತ್, ಕೊಹ್ಲಿ ನಿವೃತ್ತಿಗೆ ಗೌತಮ್ ಗಂಭೀರ್ ಕಾರಣ?
Virat - Gambhir - Rohit
ಝಾಹಿರ್ ಯೂಸುಫ್
|

Updated on: May 13, 2025 | 3:03 PM

Share

ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli)  ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಲು ಯಾರು ಕಾರಣ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಭಾರತ ತಂಡದ ಮುಖ್ಯ ಕೋಚ್ ಅವರ ಸೂಚನೆಯ ಮೇರೆಗೆ ಆಯ್ಕೆ ಸಮಿತಿಯು ಗಟ್ಟಿ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಅಂದರೆ ಇಲ್ಲಿ ಗೌತಮ್ ಗಂಭೀರ್ ಹೊಸ ಮುಖಗಳಿಗೆ ಪ್ರಾಧಾನ್ಯ ನೀಡಬೇಕೆಂದು ಆಯ್ಕೆ ಸಮಿತಿ ಮುಂದೆ ಬೇಡಿಕೆಯಿಟ್ಟಿದ್ದಾರೆ. ಇದೇ ಕಾರಣದಿಂದಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯನ್ನು ಕೈ ಬಿಡಲು ಆಯ್ಕೆ ಸಮಿತಿ ಮುಂದಾಗಿತ್ತು ಪಿಟಿಐ ವರದಿ ಮಾಡಿದೆ.

ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಅತ್ಯಂತ ಕೆಟ್ಟ ಪ್ರದರ್ಶನ ನೀಡಿದೆ. ಅದರಲ್ಲೂ ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ನಲ್ಲಿ ಭಾರತ ತಂಡ ಹೀನಾಯವಾಗಿ ಸೋಲನುಭವಿಸಿದೆ. ಈ ಸೋಲುಗಳಿಗೆ ಉತ್ತರ ಕಂಡುಕೊಳ್ಳಲು ಗಂಭೀರ್ ಹೊಸ ತಂಡ ಕಟ್ಟಲು ಮುಂದಾಗಿದ್ದಾರೆ.

ಅದರಲ್ಲೂ 2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯು ಇಂಗ್ಲೆಂಡ್ ವಿರುದ್ಧದ ಸರಣಿಯೊಂದಿಗೆ ಶುರುವಾಗುತ್ತಿದೆ. ಈ ಸರಣಿಗೆ ಹೊಸ ಆಟಗಾರರಿಗೆ ಪ್ರಾಧಾನ್ಯ ನೀಡಬೇಕೆಂದು ಗಂಭೀರ್ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತ ತಂಡದಲ್ಲಿ ಸ್ಟಾರ್ ಸಂಸ್ಕೃತಿಯನ್ನು ಕೊನೆಗಾಣಿಸುವುದು ಅವರ ಮೊದಲ ಗುರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇತ್ತ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಕೂಡ ತಂಡದಲ್ಲಿನ ಸ್ಟಾರ್ ಸಂಸ್ಕೃತಿಯನ್ನು ಕೊನೆಗೊಳಿಸುವ ಇರಾದೆಯಲ್ಲಿದ್ದರು. ಇಲ್ಲಿ ಗಂಭೀರ್ ಹಾಗೂ ಅಗರ್ಕರ್ ಅವರ ಉದ್ದೇಶಗಳು ಹೊಂದಿಕೆಯಾಗಿರುವ ಕಾರಣ, ದೃಢ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಅದರ ಮೊದಲ ಹೆಜ್ಜೆಯಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿತ್ತು. ಇದೇ ಕಾರಣದಿಂದಾಗಿ ಇಬ್ಬರು ದಿಗ್ಗಜರು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಗೌತಮ್ ಗಂಭೀರ್ ಯುಗ ಆರಂಭವಾಗುತ್ತಿದೆ. ಮುಂದಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಆವೃತ್ತಿಯಲ್ಲಿ ಭಾರತ ಹೊಸ ಮುಖಗಳನ್ನು ಹೊಂದಿರಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದರು. ಹೀಗಾಗಿಯೇ ತಂಡದಿಂದ ಹಿರಿಯ ಆಟಗಾರರನ್ನು ಕೈ ಬಿಡಲು ನಿರ್ಧರಿಸಲಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಬಿಸಿಸಿಐನ ವ್ಯಕ್ತಿಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಇದು ತಂಡದೊಳಗೆ ಹೆಚ್ಚುತ್ತಿರುವ ಗೌತಮ್ ಗಂಭೀರ್ ಅವರ ಪ್ರಭಾವವನ್ನು ಸೂಚಿಸುತ್ತಿದೆ. ಹೀಗಾಗಿಯೇ ಇನ್ಮುಂದೆ ಟೀಮ್ ಇಂಡಿಯಾದಲ್ಲಿ ಗಂಭೀರ್ ಅವರ ನಿರ್ಧಾರಗಳೇ ಫೈನಲ್ ಆಗಲಿವೆ. ಈ ನಿರ್ಧಾರಗಳೊಂದಿಗೆ ಇಂಗ್ಲೆಂಡ್​ನಲ್ಲಿ  ಟೀಮ್ ಇಂಡಿಯಾ ಹೇಗೆ  ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ