AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಮುಗಿದ ಕೆಲವೇ ಗಂಟೆಗಳಲ್ಲಿ ಭಾರತಕ್ಕೆ ಬಂದ ಟೀಮ್ ಇಂಡಿಯಾ: ವಿಡಿಯೋ

Team India arrives in Mumbai: ಏಷ್ಯಾಕಪ್ ಮುಗಿದು ಹೆಚ್ಚು ಸಮಯ ಭಾರತೀಯ ಆಟಗಾರರು ಶ್ರೀಲಂಕಾದಲ್ಲಿ ಸಮಯ ಕಳೆಯದೆ ನೇರವಾಗಿ ಏರ್​ಪೋರ್ಟ್​ಗೆ ಬಂದು ಭಾರತಕ್ಕೆ ಮರಳಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ. ಇಲ್ಲಿದೆ ನೋಡಿ ಆಟಗಾರರು ಆಗಮಿಸುತ್ತಿರುವ ವಿಡಿಯೋ.

ಏಷ್ಯಾಕಪ್ ಮುಗಿದ ಕೆಲವೇ ಗಂಟೆಗಳಲ್ಲಿ ಭಾರತಕ್ಕೆ ಬಂದ ಟೀಮ್ ಇಂಡಿಯಾ: ವಿಡಿಯೋ
Team India in Mumbai
Vinay Bhat
|

Updated on: Sep 18, 2023 | 10:00 AM

Share

ಏಷ್ಯಾಕಪ್ 2023 ಟೂರ್ನಿ (Asia Cup 2023) ಮುಕ್ತಾಯಗೊಂಡಿದ್ದು, ಭಾರತ ತಂಡ ಎಂಟನೇ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದ ಸಾಧನೆ ಮಾಡಿದೆ. ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್ ಬಿರುಗಾಳಿಗೆ ತತ್ತರಿಸಿದ ಶ್ರೀಲಂಕಾ ಬ್ಯಾಟರ್​ಗಳು 50 ರನ್​ಗೆ ಆಲೌಟ್ ಆದರು. ಭಾರತ 6.1 ಓವರ್​ನಲ್ಲಿ ಗುರಿ ಮುಟ್ಟಿ ಎರಡು ಗಂಟೆಗಳ ಒಳಗೆ ಫೈನಲ್ ಪಂದ್ಯವೇ ಮುಗಿದು ಹೋಯಿತು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರರು ತವರಿಗೆ ಹೊರಟರು.

ಏಷ್ಯಾಕಪ್ ಮುಗಿದು ಹೆಚ್ಚು ಸಮಯ ಭಾರತೀಯ ಆಟಗಾರರು ಶ್ರೀಲಂಕಾದಲ್ಲಿ ಸಮಯ ಕಳೆಯದೆ ನೇರವಾಗಿ ಏರ್​ಪೋರ್ಟ್​ಗೆ ಬಂದು ಭಾರತಕ್ಕೆ ಮರಳಿದ್ದಾರೆ. ಇಂದು ಮುಂಜಾನೆ ಹೊತ್ತಿಗೆ ಟೀಮ್ ಇಂಡಿಯಾ ಪ್ಲೇಯರ್ಸ್ ಮುಂಬೈ ತಲುಪಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಇತರರು ಇಂದು (ಸೆಪ್ಟೆಂಬರ್ 18) ಖಾಸಗಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಬಳಿಕ ತಮ್ಮ ಮನೆಗೆ ತೆರಳಿದರು.

ಇದನ್ನೂ ಓದಿ
Image
ಏಕದಿನ ವಿಶ್ವಕಪ್​ಗೆ ಪರಿಷ್ಕೃತ ಇಂಗ್ಲೆಂಡ್ ತಂಡ ಪ್ರಕಟ
Image
ಕಿಂಗ್ ಕೊಹ್ಲಿಯ ನಡಿಗೆಯನ್ನು ಅಣಕಿಸಿದ ಕಿಶನ್; ವಿಡಿಯೋ ನೋಡಿ
Image
ಐದೇ ದಿನದಲ್ಲಿ ಭಾರತಕ್ಕೆ ಮತ್ತೊಂದು ಪಂದ್ಯ: ಯಾರ ವಿರುದ್ಧ?
Image
ಟ್ರೋಫಿ ಎತ್ತಿ ಹಿಡಿಯುವ ಮುನ್ನ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಹೇಳಿದ್ದೇನು?

ಏರ್​ಪೋರ್ಟ್​ನಿಂದ ಆಗಮನಿಸುತ್ತಿರುವ ಟೀಮ್ ಇಂಡಿಯಾ ಆಟಗಾರರ ವಿಡಿಯೋ:

ಏಷ್ಯಾಕಪ್ 2023 ಫೈನಲ್ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಮೊದಲ ಓವರ್​ನಿಂದ ವಿಕೆಟ್ ಕಳೆದುಕೊಂಡು ಸಾಗಿತು. ಕೇವಲ 15.2 ಓವರ್​ಗಳಲ್ಲಿ 50 ರನ್​ಗೆ ಸರ್ವಪತನ ಕಂಡಿತು. ತಂಡದ ಪರ ಕುಸಲ್ ಮೆಂಡಿಸ್ 17 ರನ್ ಗಳಿಸಿದ್ದು ಗರಿಷ್ಠ ಸ್ಕೋರ್. 5 ಬ್ಯಾಟರ್​ಗಳು ಸೊನ್ನೆ ಸುತ್ತಿದರು. ಭಾರತ ಪರ ಸಿರಾಜ್ 6 ವಿಕೆಟ್ ಹಾಗೂ ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದರು. ಭಾರತವನ್ನು ಇಶಾನ್ ಕಿಶನ್ (23*) ಹಾಗೂ ಶುಭ್​ಮನ್ ಗಿಲ್ (27*) 6.1 ಓವರ್​ನಲ್ಲಿ ಗುರಿ ಮುಟ್ಟಿಸಿ 10 ವಿಕೆಟ್​ಗಳ ಜಯ ಸಾಧಿಸುವಂತೆ ಮಾಡಿದರು.

ICC ODI Ranking: ಏಷ್ಯಾಕಪ್ ಗೆದ್ದ ಭಾರತ; ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ..!

ಭಾರತದ ಮುಂದಿನ ಟಾರ್ಗೆಟ್ ಆಸ್ಟ್ರೇಲಿಯಾ:

ಭಾರತ ಕ್ರಿಕೆಟ್ ತಂಡ ಸೆಪ್ಟೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯು ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯಗಳು ಕ್ರಮವಾಗಿ ಸೆ. 22, ಸೆಪ್ಟೆಂಬರ್ 24 ಮತ್ತು ಸೆಪ್ಟೆಂಬರ್ 27 ರಂದು ನಡೆಯಲಿದೆ. ಈ ಏಕದಿನ ಸರಣಿಯನ್ನು ಸ್ಪೋರ್ಟ್ಸ್ 18 ಇಂಗ್ಲಿಷ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಪಂದ್ಯವನ್ನು JioCinema ದಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು