AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಭ್ಯಾಸ ಪಂದ್ಯದಲ್ಲಿ ಹೀನಾಯವಾಗಿ ಸೋತ ಬೆನ್ನಲ್ಲೇ ಮೈದಾನಕ್ಕಿಳಿದ ಕೊಹ್ಲಿ, ರೋಹಿತ್: ಯಾಕೆ ಗೊತ್ತೇ?

India vs Western Australia: ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲಿ ಸೋತ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮೈದಾನಕ್ಕಿಳಿದು ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ.

Virat Kohli: ಅಭ್ಯಾಸ ಪಂದ್ಯದಲ್ಲಿ ಹೀನಾಯವಾಗಿ ಸೋತ ಬೆನ್ನಲ್ಲೇ ಮೈದಾನಕ್ಕಿಳಿದ ಕೊಹ್ಲಿ, ರೋಹಿತ್: ಯಾಕೆ ಗೊತ್ತೇ?
Virat Kohli and Rohit Sharma
TV9 Web
| Updated By: Vinay Bhat|

Updated on:Oct 14, 2022 | 8:32 AM

Share

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್​ಗಾಗಿ (T20I World Cup) ಕಾಂಗರೂಗಳ ನಾಡಿಗೆ ತೆರಳಿರುವ ಭಾರತಕ್ಕೆ ಒಂದರ ಮೇಲೊಂದು ಆಘಾತ ಉಂಟಾಗುತ್ತಿದೆ. ಇಂಜುರಿಯಿಂದ ಬಳಲುತ್ತಿರುವ ಆಟಗಾರರು ಒಂದು ಕಡೆಯಾದರೆ ಇದೀಗ ಅಭ್ಯಾಸ ಪಂದ್ಯದಲ್ಲೇ ಹೀನಾಯ ಸೋಲು ಕಂಡಿದೆ. ವೆಸ್ಟರ್ನ್ ಆಸ್ಟ್ರೇಲಿಯಾ ವಿರುದ್ಧ ಆಡಿದ ದ್ವಿತೀಯ ವಾರ್ಮ್​-ಅಪ್ ಮ್ಯಾಚ್​ ಟೀಮ್ ಇಂಡಿಯಾ (India vs Western Australia) 36 ರನ್​ಗಳ ಸೋಲುಂಡಿತು. ನಾಯಕನ ಜವಾಬ್ದಾರಿ ಹೊತ್ತಿದ್ದ ಕೆಎಲ್ ರಾಹುಲ್ ಅರ್ಧಶತಕ ಸಿಡಿಸಿ ಗೆಲುವಿಗೆ ಹೋರಾಟ ನಡೆಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ಭಾರತ ತಂಡದ ಬಗ್ಗೆ ಕೋಚ್ ಹಾಗೂ ಮ್ಯಾನೇಜ್ಮೆಂಟ್​ಗೆ ತಲೆನೋವು ಶುರುವಾಗಿದೆ. ಇದರ ನಡುವೆ ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲಿ ಸೋತ ಬೆನ್ನಲ್ಲೇ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮೈದಾನಕ್ಕಿಳಿದು ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ.

ಮೊದಲ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದಿರಲಿಲ್ಲ. ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರು ಬ್ಯಾಟಿಂಗ್ ಮಾಡಲಿಲ್ಲ. ಕೇವಲ ಫೀಲ್ಡಿಂಗ್ ಮಾತ್ರ ಮಾಡಿದರು. ಆದರೆ, ಪಂದ್ಯ ಮುಗಿದ ಬಳಿಕ ಕೊಹ್ಲಿ ಹಾಗೂ ರೋಹಿತ್ ಬ್ಯಾಟ್ ಹಿಡಿದುಕೊಂಡು ಮೈದಾನಕ್ಕೆ ಬಂದು ಸತತವಾಗಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
SL-W vs PAK-W: ಪಾಕ್ ಮಹಿಳಾ ತಂಡದ ವಿರುದ್ಧ 1 ರನ್​ ರೋಚಕ ಜಯ ಸಾಧಿಸಿದಾಗ ಶ್ರೀಲಂಕಾ ಪ್ಲೇಯರ್ಸ್ ಏನು ಮಾಡಿದ್ರು ನೋಡಿ
Image
T20 World Cup: ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಟೀಂ ಇಂಡಿಯಾ ಸೃಷ್ಟಿಸಿರುವ ಪ್ರಮುಖ 5 ದಾಖಲೆಗಳಿವು
Image
Video: ಹೀನಾಯ ಸೋಲಿನ ಬಳಿಕ 6 ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
Image
T20 World Cup 2022: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮುಂದಿದೆ 2 ಸವಾಲು..!

ಪಶ್ಚಿಮ ಆಸ್ಟ್ರೇಲಿಯಾ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಗೆದ್ದಿದ್ದ ಭಾರತ ಎರಡನೇ ಪಂದ್ಯದಲ್ಲಿ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡಲಿಲ್ಲ. ಟಾಸ್​ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ ಭಾರತ ತಂಡವು ಎದುರಾಳಿ ಪಶ್ಚಿಮ ಆಸ್ಟ್ರೇಲಿಯಾಗೆ ಬ್ಯಾಟಿಂಗ್​ಗೆ ಆಹ್ವಾನಿಸಿತು. ಕ್ರೀಸ್​ಗೆ ಇಳಿದ ನಿಕ್ ಹಾಬ್ಸನ್ ಮತ್ತು ಡಿ’ಆರ್ಸಿ ಶಾರ್ಟ್ ಅವರ ಅರ್ಧಶತಕಗಳ ನೆರವಿನಿಂದ ಪಶ್ಚಿಮ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಆರ್. ಅಶ್ವಿನ್ ಮೂರು ವಿಕೆಟ್‌ ಪಡೆದು ಮಿಂಚಿದರೆ, ಹರ್ಷಲ್ ಪಟೇಲ್ 2 ಹಾಗೂ ಅರ್ಶ್​ದೀಪ್ ಸಿಂಗ್ 1 ವಿಕೆಟ್ ಕಿತ್ತರು.

169 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ಆರಂಭದಲ್ಲಿ ನಿಧಾನಗತಿ ಆಟ ಆಡಿದ್ದು ಕಷ್ಟಕ್ಕೆ ಸಿಲುಕಿತು. ಚೆಂಡು ಹೆಚ್ಚಾಗಿ ಟರ್ನ್ ಆಗುತ್ತಿದ್ದ ಕಾರಣ ರಿಷಭ್ ಪಂತ್ ಹಾಗೂ ಕೆಎಲ್ ರಾಹುಲ್ ಎಚ್ಚರಿಕೆ ಆಟ ಆಡಲು ಆರಂಭಿಸಿದರು. ಆದರೆ, ಹೆಚ್ಚು ಹೊತ್ತು ನಿಲ್ಲದ ಪಂತ್ 9 ರನ್​​ಗೆ ಪೆವಿಲಿಯಮ್ ತೆರಳಿದರು. ಸಿಕ್ಕ ಅವಕಾಶವನ್ನು ದೀಪಕ್ ಹೂಡ 6 ಉಪಯೋಗಿಸಿಕೊಳ್ಳಲಿಲ್ಲ. ಹಾರ್ದಿಕ್ ಪಾಂಡ್ಯ ಎರಡು ಸಿಕ್ಸ್​ ಸಿಡಿಸಿ 9 ಎಸೆತಗಳಲ್ಲಿ 17 ರನ್​ ಗಳಿಸಿ ನಿರ್ಗಮಿಸಿದರು. ಆಲ್‌ರೌಂಡರ್ ಅಕ್ಷರ್ ಪಟೇಲ್ ಆಟ2 ರನ್​ಗೆ ಅಂತ್ಯವಾಯಿತು. ಫಿನಿಶರ್ ದಿನೇಶ್ ಕಾರ್ತಿಕ್ (10) ಆಟ ಕೂಡ ನಡೆಯಲಿಲ್ಲ.

ಒಂದು ಕಡೆ ವಿಕೆಟ್ ಉರುಳುತ್ತಿದ್ದರೆ ಅತ್ತ ನಾಯಕ ಕೆಎಲ್ ರಾಹುಲ್ ತಂಡದ ಗೆಲುವಿಗೆ ಏಕಾಂಗಿ ಹೋರಾಟ ನಡೆಸುತ್ತಿದ್ದರು. ಆದರೆ, ಅರ್ಧಶತಕದ ಬಳಿಕ ಸ್ಫೋಟಕ ಆಟವಾಡಿದ ರಾಹುಲ್​ಗೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. 55 ಎಸೆತಗಳಲ್ಲಿ 9 ಬೌಂಡರಿ ಮತ್ತು ಎರಡು ಸಿಕ್ಸರ್​ನೊಂದಿಗೆ ರಾಹುಲ್ 74 ರನ್ ಗಳಿಸಿ ಔಟಾದರು. ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 8 ವಿಕೆಟ್​ ಕಳೆದುಕೊಂಡು ಕೇವಲ 132 ರನ್​ ಗಳಿಸಲು ಮಾತ್ರ ಶಕ್ತವಾಗಿ ಸೋಲಿಗೆ ಶರಣಾಯಿತು. ಅಕ್ಟೋಬರ್‌ 16 ರಿಂದ ಆರಂಭವಾಗುವ ಈ ಮಹತ್ವದ ಟೂರ್ನಿಯಲ್ಲಿ ಭಾರತ ಅ. 23 ರಂದು ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

Published On - 8:32 am, Fri, 14 October 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ