AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಭಾರತದ ಸರಣಿ ಗೆಲುವನ್ನು ವಿಶೇಷವಾಗಿ ಆಚರಿಸಿದ ರೋಹಿತ್ ಶರ್ಮಾ: ಏನು ಮಾಡಿದ್ರು ನೋಡಿ

India vs West Indies 4th T20I: ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದ ನಂತರ ರೋಹಿತ್ ಶರ್ಮಾ ಭಾರತದ ಅಭಿಮಾನಿಗಳಿದ್ದ ಸ್ಟೇಡಿಯಂ ಕಡೆ ತೆರಳಿದ್ದಾರೆ.

Rohit Sharma: ಭಾರತದ ಸರಣಿ ಗೆಲುವನ್ನು ವಿಶೇಷವಾಗಿ ಆಚರಿಸಿದ ರೋಹಿತ್ ಶರ್ಮಾ: ಏನು ಮಾಡಿದ್ರು ನೋಡಿ
Rohit Sharma IND vs WI 4th T20I
TV9 Web
| Edited By: |

Updated on:Aug 07, 2022 | 9:38 AM

Share

ಕೆರಿಬಿಯನ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಏಕದಿನ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿದ್ದ ಟೀಮ್ ಇಂಡಿಯಾ (Team India) ಇದೀಗ ಟಿ20 ಸರಣಿಯನ್ನು ಕೂಡ ವಶಪಡಿಸಿಕೊಂಡಿದೆ. ಫ್ಲೋರಿಡಾದ ಸೆಂಟ್ರಲ್ ಬ್ರೊವಾರ್ಡ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ರೋಹಿತ್ ಪಡೆ 59 ರನ್​ಗಳ ಅಮೋಘ ಗೆಲುವು ಕಾಣುವ ಮೂಲಕ 3-1 ಅಂತರದಿಂದ ಸರಣಿ ತನ್ನದಾಗಿಸಿಕೊಂಡಿದೆ. ರಿಷಭ್ ಪಂತ್ ಹಾಗೂ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಒಂದುಕಡೆಯಾದರೆ, ಟೀಮ್ ಇಂಡಿಯಾ ಬೌಲರ್​ಗಳು ಮತ್ತೊಮ್ಮೆ ಸಂಘಟಿತ ಪ್ರದರ್ಶನ ತೋರಿದರು. ಮಳೆಯಿಂದಾಗಿ ಪಂದ್ಯ ಕೊಂಚ ತಡವಾಗಿ ಆರಂಭವಾದರೂ ಸಾಕಷ್ಟು ರೋಚಕತೆಯಿಂದ ಕೂಡಿತ್ತು. ಅದರಲ್ಲೂ ಪಂದ್ಯ ಮುಗಿದ ಬಳಿಕ ಭಾರತದ ನಾಯಕ ರೋಹಿತ್ ಶರ್ಮಾ (Rohit Sharma) ಗೆಲುವನ್ನು ವಿಶೇಷವಾಗಿ ಸಂಭ್ರಮಿಸಿದರು.

ಟೀಮ್ ಇಂಡಿಯಾ ಜಯ ಸಾಧಿಸಿದ ನಂತರ ರೋಹಿತ್ ಶರ್ಮಾ ಭಾರತದ ಅಭಿಮಾನಿಗಳಿದ್ದ ಸ್ಟೇಡಿಯಂ ಕಡೆ ತೆರಳಿದ್ದಾರೆ. ಬ್ಯಾರಿಕೇಡ್ ಹತ್ತಿರಬಂದು ಅಲ್ಲಿದ್ದ ಭಾರತದ ಅಭಿಮಾನಿಗಳ ಕೈ ಮುಟ್ಟುತ್ತಾ ವಿಶೇಷವಾಗಿ ಗೆಲುವನ್ನು ಸಂಭ್ರಮಾಚರಣೆ ಮಾಡಿದ್ದಾರೆ. ಇದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಹಿಟ್​​ಮ್ಯಾನ್ ನಡೆಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.

ಇದನ್ನೂ ಓದಿ
Image
CWG 2022: ಆಫ್ರಿಕಾ ವಿರುದ್ಧ ರೋಚಕ ಜಯ: ಫೈನಲ್​ಗೆ ಲಗ್ಗೆಯಿಟ್ಟ ಭಾರತ ಪುರುಷರ ಹಾಕಿ ತಂಡ
Image
CWG 2022: ಕಾಮನ್​ವೆಲ್ತ್​ನಲ್ಲಿ ಭಾರತಕ್ಕೆ 13ನೇ ಚಿನ್ನ: ಬಂಗಾರಕ್ಕೆ ಕೊರಳೊಡ್ಡಿದ ಭವಿನಾ ಪಟೇಲ್
Image
CWG 2022: ಫೈನಲ್​ನಲ್ಲಿ ಪಾಕಿಸ್ತಾನದ ಕುಸ್ತಿಪಟುವನ್ನು ಉಸಿರುಗಟ್ಟಿಸಿ ಭಾರತಕ್ಕೆ ಚಿನ್ನ ಗೆದ್ದ ನವೀನ್..!
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ 5ನೇ ಚಿನ್ನ; 53 ಕೆಜಿ ವಿಭಾಗದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ವಿನೇಶ್ ಫೋಗಟ್

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಪವರ್ ಪ್ಲೇಯಲ್ಲಿ ಮನಬಂದಂತೆ ಬ್ಯಾಟ್ ಬೀಸಿದರು. ಎಷ್ಟರ ಮಟ್ಟಿಗೆ ಎಂದರೆ 5 ಓವರ್​​ಗು ಮುನ್ನವೇ ತಂಡದ ಮೊತ್ತ 50ರ ಗಡಿ ದಾಟಿತು. ಹಿಟ್​ಮ್ಯಾನ್ ಕೇವಲ 16 ಎಸೆತಗಳಲ್ಲಿ 2 ಫೋರ್, 3 ಸಿಕ್ಸರ್ ಸಿಡಿಸಿ 33 ರನ್ ಚಚ್ಚಿದರೆ, ಸೂರ್ಯಕುಮಾರ್ 14 ಎಸೆತಗಳಲ್ಲಿ 1 ಫೋರ್, 2 ಸಿಕ್ಸರ್​ನೊಂದಿಗೆ 24 ರನ್ ಬಾರಿಸಿದರು.

ದೀಪಕ್ ಹೂಡ 19 ಎಸೆತಗಳಲ್ಲಿ 21 ರನ್​ಗಳ ಕಾಣಿಕೆ ನೀಡಿದರು. ರಿಷಭ್ ಪಂತ್ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್ ಮೂಡಿಬಂತು. 31 ಎಸೆತಗಳಲ್ಲಿ 6 ಫೋರ್ ಬಾರಿಸಿ 30 ರನ್ ಗಳಿಸಿದರು. ಅಕ್ಷರ್ ಪಟೇಲ್ 8 ಎಸೆತಗಳಲ್ಲಿ ಅಜೇಯ 20 ರನ್ ಸಿಡಿಸಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿತು. ವಿಂಡೀಸ್ ಪರ ಒಬೆಡ್ ಮೆಕಾಯ್ ಹಾಗೂ ಅಲ್ಜರಿ ಜೋಸೆಫ್ ತಲಾ 2 ವಿಕೆಟ್ ಪಡೆದರು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಈ ಬಾರಿ ಕೂಡ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಕುಸಿಯಿತು. ತಂಡದ ಪರ ನಾಯಕ ನಿಕೋಲಸ್ ಪೂರನ್ ಹಾಗೂ ರೋಮನ್ ಪೋವೆಲ್ ತಲಾ 24 ರನ್ ಗಳಿಸಿದ್ದೇ ಹೆಚ್ಚು. 19.1 ಓವರ್​ನಲ್ಲಿ 132 ರನ್​ಗೆ ಕೆರಿಬಿಯನ್ನರು ಆಲೌಟ್ ಆದರು. ಭಾರತ ಪರ ಆವೇಶ್ ಖಾನ್ 4 ಓವರ್​ಗೆ 17 ರನ್ ನೀಡಿ 2 ವಿಕೆಟ್ ಕಿತ್ತರೆ, ಅರ್ಶ್​​ದೀಪ್ ಸಿಂಗ್ 3.1 ಓವರ್​ನಲ್ಲಿ 12 ನೀಡಿ 3 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಹಾಗೂ ರವಿ ಬಿಷ್ಟೋಯ್ ಕೂಡ ತಲಾ 2 ವಿಕೆಟ್ ಬಾಜಿಕೊಂಡರು.

Published On - 9:38 am, Sun, 7 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?