AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಇನ್ನೇರಡು ತಿಂಗಳಲ್ಲಿ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕು ಅಂತ್ಯ?

Rohit Sharma's Retirement: ರೋಹಿತ್ ಶರ್ಮಾ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಅಂತ್ಯಕ್ಕೆ ಸಮೀಪಿಸುತ್ತಿದೆ ಎಂಬ ವರದಿಗಳು ಹೊರಬಿದ್ದಿವೆ. ಚಾಂಪಿಯನ್ಸ್ ಟ್ರೋಫಿ ಅವರ ಕೊನೆಯ ಟೂರ್ನಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇಂಗ್ಲೆಂಡ್ ಪ್ರವಾಸಕ್ಕೆ ಅವರ ಆಯ್ಕೆ ಇಲ್ಲದಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ. ಮಾರ್ಚ್ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಮುಗಿದ ನಂತರ ರೋಹಿತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಳ್ಳಬಹುದು.

Rohit Sharma: ಇನ್ನೇರಡು ತಿಂಗಳಲ್ಲಿ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕು ಅಂತ್ಯ?
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Jan 13, 2025 | 3:45 PM

Share

ರೋಹಿತ್ ಶರ್ಮಾ ಇನ್ನೂ ಎಷ್ಟು ದಿನ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಾರೆ? ಪ್ರಸ್ತುತ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಮನದಲ್ಲಿ ಮೂಡಿರುವ ಅತಿ ದೊಡ್ಡ ಪ್ರಶ್ನೆ ಇದು. ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದ್ದು, ಇನ್ನು ಕೇವಲ 2 ತಿಂಗಳಲ್ಲಿ ರೋಹಿತ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಅಂತ್ಯಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ. ರೋಹಿತ್ ಶರ್ಮಾ ಬಗ್ಗೆ ವರದಿಯೊಂದು ಹೊರಬಿದ್ದಿದ್ದು, ಅದರ ಪ್ರಕಾರ ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್ ಅಂತರಾಷ್ಟ್ರೀಯ ಕ್ರಿಕೆಟ್ ಆಡುವುದಿಲ್ಲ ಎಂದು ಹೇಳಲಾಗುತ್ತಿದೆ.ವಾಸ್ತವವಾಗಿ ಜನವರಿ 11ರಂದು ನಡೆದ ಬಿಸಿಸಿಐ ಆಯ್ಕೆಗಾರರ ​​ಸಭೆಯಲ್ಲಿ ರೋಹಿತ್ ಶರ್ಮಾ ಕೂಡ ಭಾಗವಹಿಸಿದ್ದು, ತಂಡಕ್ಕೆ ಮತ್ತೊಬ್ಬ ನಾಯಕ ಸಿಗುವವರೆಗೂ ಅವರನ್ನೇ ನಾಯಕನಾಗಿ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಪತ್ರಿಕೆಯೊಂದರ ಪ್ರಕಾರ ಚಾಂಪಿಯನ್ಸ್ ಟ್ರೋಫಿಯೇ ರೋಹಿತ್ ಅವರ ಕೊನೆಯ ಅಂತಾರಾಷ್ಟ್ರೀಯ ಟೂರ್ನಿಯಾಗಲಿದೆ ಎಂದು ವರದಿ ಮಾಡಿದೆ.

ಚಾಂಪಿಯನ್ಸ್ ಟ್ರೋಫಿ ಕೊನೆಯ ಪಂದ್ಯಾವಳಿ?

ದೈನಿಕ್ ಜಾಗರಣ್ ಸುದ್ದಿ ಪ್ರಕಾರ, ಜೂನ್- ಜುಲೈ ತಿಂಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸಕ್ಕೆ ರೋಹಿತ್ ಆಯ್ಕೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಮುಗಿಯುವುದರೊಂದಿಗೆ ಅವರ ಅಂತರಾಷ್ಟ್ರೀಯ ವೃತ್ತಿ ಜೀವನವೂ ಅಂತ್ಯವಾಗಲಿದೆ ಎಂದಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಮೂರು ಲೀಗ್ ಪಂದ್ಯಗಳನ್ನು ಆಡಬೇಕಿದೆ. ಕೊನೆಯ ಲೀಗ್ ಪಂದ್ಯ ಮಾರ್ಚ್ 2 ರಂದು ನಡೆಯಲಿದೆ. ಒಂದು ವೇಳೆ ತಂಡವು ಸೆಮಿಫೈನಲ್ ತಲುಪದಿದ್ದರೆ, ಮಾರ್ಚ್ 2 ರೋಹಿತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನದ ಕೊನೆಯ ದಿನವಾಗಬಹುದು. ಆದಾಗ್ಯೂ ತಂಡ ಸೆಮಿಫೈನಲ್‌ ಪ್ರವೇಶಿಸಿ, ಅಲ್ಲಿ ಸೋತರೆ, ಮಾರ್ಚ್ 4 ರೋಹಿತ್ ಶರ್ಮಾ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯವಾಗಿರಬಹುದು. ಒಂದು ವೇಳೆ ತಂಡ ಫೈನಲ್‌ಗೆ ತಲುಪಿದರೆ, ಮಾರ್ಚ್ 9 ರೋಹಿತ್ ವೃತ್ತಿಜೀವನದ ಕೊನೆಯ ದಿನವಾಗಬಹುದು ಎಂದು ವರದಿ ಮಾಡಿದೆ.

ಇಂಗ್ಲೆಂಡ್‌ ಸರಣಿಗೆ ಆಯ್ಕೆ ಅನುಮಾನ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಸಿಡ್ನಿ ಟೆಸ್ಟ್‌ಗೆ ತಂಡದಲ್ಲಿ ಆಯ್ಕೆ ಮಾಡಿರಲಿಲ್ಲ. ಹೀಗಿರುವಾಗ ಇಂಗ್ಲೆಂಡ್ ಪ್ರವಾಸಕ್ಕೆ ಅವರನ್ನು ಆಯ್ಕೆ ಮಾಡುವುದು ಕಷ್ಟ. ಚಾಂಪಿಯನ್ಸ್ ಟ್ರೋಫಿ ನಂತರ, ಟೀಂ ಇಂಡಿಯಾ 2027 ರಲ್ಲಿ ವಿಶ್ವಕಪ್ ಆಡಬೇಕಾಗಿದೆ. ಪ್ರಸ್ತುತ 38 ವರ್ಷದ ರೋಹಿತ್‌ಗೆ ಆಗ 40 ವರ್ಷವಾಗಿರಲಿದೆ. ಹೀಗಾಗಿ ಆ ವಯಸ್ಸಿನಲ್ಲಿ ವಿಶ್ವಕಪ್ ಆಡುವುದು ಕೊಂಚ ಕಷ್ಟ. ಅದಕ್ಕಾಗಿಯೇ ಚಾಂಪಿಯನ್ಸ್ ಟ್ರೋಫಿ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯಾವಳಿಯಾಗಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ