ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ

ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
|

Updated on: Oct 19, 2024 | 10:31 AM

India vs New Zealand, 1st Test: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಪೈಪೋಟಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕೇವಲ 46 ರನ್​ಗಳಿಗೆ ಆಲೌಟ್ ಆದರೆ, ನ್ಯೂಝಿಲೆಂಡ್ 402 ರನ್​ ಕಲೆಹಾಕಿತು. ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದುರಾದೃಷ್ಟಕರ ರೀತಿಯಲ್ಲಿ ಔಟ್ ಆಗಿದ್ದಾರೆ. ಅದು ಸಹ ಮೂರನೇ ದಿನದಾಟದ ಅಂತಿಮ ಓವರ್​ನ ಕೊನೆಯ ಎಸೆತದಲ್ಲಿ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 46 ರನ್​ಗಳಿಗೆ ಆಲೌಟ್ ಆಗಿದ್ದರು.

ಅತ್ತ ಮೂರನೇ ದಿನದಾಟದ ಅಂತಿಮ ಎಸೆತದಲ್ಲಿ ವಿರಾಟ್ ಕೊಹ್ಲಿ ಔಟ್ ಆಗುತ್ತಿದ್ದಂತೆ ಇತ್ತ ಡ್ರೆಸ್ಸಿಂಗ್ ರೂಮ್ ಬಳಿ ಕೂತಿದ್ದ ರೋಹಿತ್ ಶರ್ಮಾ ಬೇಸರದಲ್ಲಿ ಹಿಂದಕ್ಕೆ ಕುಸಿದರು. ಅತ್ಯಮೂಲ್ಯವಾಗಿದ್ದ ವಿಕೆಟ್ ಪತನಗೊಂಡಾಗ ಟೀಮ್ ಇಂಡಿಯಾ ನಾಯಕ ನೀಡಿದ ಈ ಪ್ರತಿಕ್ರಿಯೆಯು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದೆ. ತಂಡದ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಸರ್ಫರಾಝ್ ಖಾನ್ 110 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಹಾಗೆಯೇ ಉತ್ತಮ ಸಾಥ್ ನೀಡುವ ಮೂಲಕ ರಿಷಭ್ ಪಂತ್ (23) ಕೂಡ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಅದರಂತೆ 64 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 3 ವಿಕೆಟ್ ಕಳೆದುಕೊಂಡು 302 ರನ್​ ಕಲೆಹಾಕಿದೆ.

 

 

Follow us
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ