AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಹಿರಿಯ ಆಟಗಾರರಿಗೆ ಮತ್ತೆ ವಿಶ್ರಾಂತಿ..! ಲಂಕಾ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ನಾಯಕ

IND vs SL: ಜನವರಿಯಲ್ಲಿ ನಡೆಯಲಿರುವ 3 ಟಿ20 ಪಂದ್ಯಗಳ ಸರಣಿಯಿಂದ ರೋಹಿತ್, ವಿರಾಟ್ ವಿಶ್ರಾಂತಿ ಪಡೆಯಲಿದ್ದಾರೆ. ವೈಸ್ ಕ್ಯಾಪ್ಟನ್ ಕೆಎಲ್ ರಾಹುಲ್ ಮದುವೆಯ ಕಾರಣದಿಂದ ಈ ಸರಣಿಯಿಂದ ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.

IND vs SL: ಹಿರಿಯ ಆಟಗಾರರಿಗೆ ಮತ್ತೆ ವಿಶ್ರಾಂತಿ..! ಲಂಕಾ ವಿರುದ್ಧದ ಟಿ20 ಸರಣಿಗೆ ಹಾರ್ದಿಕ್ ನಾಯಕ
team india
TV9 Web
| Edited By: |

Updated on:Dec 01, 2022 | 1:27 PM

Share

ಟಿ20 ವಿಶ್ವಕಪ್ (T20 World Cup) ಬಳಿಕ ತಂಡದಿಂದ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾದ (Team India) ಹಿರಿಯ ಆಟಗಾರರು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗಾಗಿ ತಂಡ ಸೇರಿಕೊಂಡಿದ್ದಾರೆ. ಬಾಂಗ್ಲಾ ಪ್ರವಾಸದಲ್ಲಿ 3 ಏಕದಿನ ಹಾಗೂ 3 ಟೆಸ್ಟ್ ಪಂದ್ಯಗಳನ್ನು ಆಡಲಿರುವ ಟೀಂ ಇಂಡಿಯಾ ಈ ಪ್ರವಾಸದ ಬಳಿಕ ಜನವರಿಯಲ್ಲಿ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಗಳನ್ನು ತವರಿನಲ್ಲಿ ಆಡಲಿದೆ. ಆದರೆ ಈ ಸರಣಿಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ (Rohit Sharma, Virat Kohli and KL Rahul) ಅಲಭ್ಯರಾಗಲಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ, ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾದ ತಂಡದಿಂದ ಈ ಮೂವರು ಆಟಗಾರರಿಗೆ ವಿಶ್ರಾಂತಿ ನೀಡಲಾಗುವುದು. ಹಾಗೆಯೇ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ (Hardik Pandya) ವಹಿಸಲಾಗುವುದು ಎಂದು ಇನ್‌ಸೈಡ್‌ಸ್ಪೋರ್ಟ್‌ ವರದಿ ಮಾಡಿದೆ.

ಶ್ರೀಲಂಕಾ ವಿರುದ್ಧ ಮುಂದಿನ ವರ್ಷ ಜನವರಿಯಲ್ಲಿ ನಡೆಯಲಿರುವ 3 ಟಿ20 ಪಂದ್ಯಗಳ ಸರಣಿಯಿಂದ ರೋಹಿತ್, ವಿರಾಟ್ ವಿಶ್ರಾಂತಿ ಪಡೆಯಲಿದ್ದಾರೆ. ವೈಸ್ ಕ್ಯಾಪ್ಟನ್ ಕೆಎಲ್ ರಾಹುಲ್ ಮದುವೆಯ ಕಾರಣದಿಂದ ಈ ಸರಣಿಯಿಂದ ದೂರ ಉಳಿಯಲಿದ್ದಾರೆ. ಇವರಲ್ಲದೆ, ದಿನೇಶ್ ಕಾರ್ತಿಕ್, ಆರ್. ಅಶ್ವಿನ್, ಮೊಹಮ್ಮದ್ ಶಮಿ ಕೂಡ ಈ ಸರಣಿಯಿಂದ ಬ್ರೇಕ್ ಪಡೆಯಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಇನ್‌ಸೈಡ್‌ಸ್ಪೋರ್ಟ್‌ ತನ್ನ ವರದಿಯಲ್ಲಿ ಹೇಳಿಕೊಂಡಿದೆ.

ಇದನ್ನೂ ಓದಿ: KL Rahul Wedding: ಜನವರಿಯಲ್ಲಿ ರಾಹುಲ್- ಅಥಿಯಾ ಮದುವೆ? ತಂಡದಿಂದ ಬ್ರೇಕ್ ಕೇಳಿದ ಕನ್ನಡಿಗ

ಡಿಸೆಂಬರ್​ನಲ್ಲಿ ನೂತನ ಆಯ್ಕೆ ಮಂಡಳಿ

ವರದಿಯ ಪ್ರಕಾರ, ಡಿಸೆಂಬರ್‌ನಲ್ಲಿ ಹೊಸ ಆಯ್ಕೆ ಸಮಿತಿಯನ್ನು ರಚಿಸಲಾಗುವುದು. ಬಳಿಕ ನೂತನ ಆಯ್ಕೆ ಮಂಡಳಿ ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡುವ ಜವಬ್ದಾರಿ ತೆಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಈಗಾಗಲೇ ರೋಹಿತ್, ವಿರಾಟ್ ಅವರಿಗೆ ತಿಳಿಸಲಾಗಿದೆ. ಅಲ್ಲದೆ ಈ ವಿಚಾರದಲ್ಲಿ ಈ ಇಬ್ಬರು ಬಿಸಿಸಿಐ ಜೊತೆಗಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಟಿ20 ವಿಶ್ವಕಪ್​ಗೆ ಈಗಿನಿಂದಲೇ ತಯಾರಿ

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್, ವಿರಾಟ್ ಅವರಂತಹ ಹಿರಿಯರು ಆಡದಿರುವುದು ಟೀಮ್ ಇಂಡಿಯಾದ ಮುಂದಿನ ಟಿ20 ವಿಶ್ವಕಪ್ ತಯಾರಿಯ ಭಾಗವಾಗಿದೆ. ವಾಸ್ತವವಾಗಿ, ಬಿಸಿಸಿಐ ಮುಂದಿನ ಟಿ20 ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಹೊಸ ತಂಡವನ್ನು ಸಿದ್ಧಪಡಿಸುವ ಉತ್ಸಾಹದಲ್ಲಿದೆ. ರೋಹಿತ್, ವಿರಾಟ್ ಅಥವಾ ಇತರ ಹಿರಿಯ ಆಟಗಾರರನ್ನು ಮುಂದಿನ ಟಿ20 ವಿಶ್ವಕಪ್‌ ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ಎಲ್ಲಾ ಹಿರಿಯ ಆಟಗಾರರು ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:27 pm, Thu, 1 December 22

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ