AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ಸಿಕ್ಸರ್‌, 6 ಬೌಂಡರಿ, 13 ಎಸೆತಗಳಲ್ಲಿ 66 ರನ್; ಕೆರಿಬಿಯನ್ ಲೀಗ್‌ನಲ್ಲಿ ಸುನಾಮಿ ಸೃಷ್ಟಿಸಿದ ರೋಸ್ಟನ್ ಚೇಸ್

79 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿದ ಚೇಸ್ 50 ಎಸೆತಗಳನ್ನು ಎದುರಿಸಿ 85 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳು ಸೇರಿದ್ದವು.

7 ಸಿಕ್ಸರ್‌, 6 ಬೌಂಡರಿ, 13 ಎಸೆತಗಳಲ್ಲಿ 66 ರನ್; ಕೆರಿಬಿಯನ್ ಲೀಗ್‌ನಲ್ಲಿ ಸುನಾಮಿ ಸೃಷ್ಟಿಸಿದ ರೋಸ್ಟನ್ ಚೇಸ್
ರೋಸ್ಟನ್ ಚೇಸ್
TV9 Web
| Edited By: |

Updated on: Sep 03, 2021 | 10:32 PM

Share

ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಸುನಾಮಿಯನ್ನು ಸೃಷ್ಟಿಸುತ್ತಿದ್ದಾರೆ. ಈಗಾಗಲೇ ಈ ಲೀಗ್‌ನಲ್ಲಿ ಅನೇಕ ಪಂದ್ಯಗಳು ರಸಭರಿತವಾಗಿವೆ. ಇದೇ ವಿಭಾಗದಲ್ಲಿ ಇತ್ತೀಚಿನ ಪಂದ್ಯವು ನೋಡುಗರಿಗೆ ಸಾಕಷ್ಟು ಮನೋರಂಜನೆ ನೀಡಿತು. 29 ವರ್ಷದ ಯುವ ಬ್ಯಾಟ್ಸ್‌ಮನ್ ಸೃಷ್ಟಿಸಿದ ಚಂಡಮಾರುತ ಇಡೀ ಪಂದ್ಯದ ಇನ್ನಿಂಗ್ಸ್ ಅನ್ನು ಆಳಿತು. ಈ ಆಟದಿಂದಾಗಿ ಆತ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಆತ ಮತ್ತ್ಯಾರು ಅಲ್ಲ, ವೆಸ್ಟ್ ಇಂಡೀಸ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ರೋಸ್ಟನ್ ಚೇಸ್. ಸೇಂಟ್ ಲೂಸಿಯಾ ಕಿಂಗ್ಸ್ ಮತ್ತು ಗಯಾನ ವಾರಿಯರ್ಸ್ ನಡುವಿನ ಪಂದ್ಯದಲ್ಲಿ ಚೇಸ್ ಆಲ್ ರೌಂಡ್ ಪ್ರದರ್ಶನ ನೀಡಿದರು.

7 ಸಿಕ್ಸರ್‌ ಮತ್ತು 6 ಬೌಂಡರಿ ಸೇಂಟ್ ಲೂಸಿಯಾ ಕಿಂಗ್ಸ್ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿತು. ಅವರು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಗೆ 149 ರನ್ ಗಳಿಸಿದರು. ಆರಂಭಿಕರು ಮೊದಲ ಎರಡು ಓವರ್‌ಗಳಲ್ಲಿ ಪೆವಿಲಿಯನ್ ಸೇರಿಕೊಂಡರು. ಆದರೆ, ಆ ನಂತರ ಕ್ರೀಸ್ ಗೆ ಬಂದ ರೋಸ್ಟನ್ ಚೇಸ್ ಇಡೀ ಬ್ಯಾಟಿಂಗ್ ಅನ್ನು ಆಳಿದರು. ಅವರು ಮೊದಲ ಎಸೆತದಿಂದಲೇ ಬೌಲರ್‌ಗಳನ್ನು ಹೆಡೆಮುರಿ ಕಟ್ಟಲು ಆರಂಭಿಸಿದರು. ಮೂರನೇ ವಿಕೆಟ್ ಗೆ ಮಾರ್ಕ್ ದಯಾಳ್ ಜೊತೆ ಅರ್ಧ ಶತಕದ ಜೊತೆಯಾಟವನ್ನು ರೂಪಿಸಿದರು. 79 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿದ ಚೇಸ್ 50 ಎಸೆತಗಳನ್ನು ಎದುರಿಸಿ 85 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್‌ಗಳು ಮತ್ತು 6 ಬೌಂಡರಿಗಳು ಸೇರಿದ್ದವು. ಅಂದರೆ, ರಾಸ್ಟನ್ ಚೇಸ್ ಕೇವಲ 13 ಎಸೆತಗಳಲ್ಲಿ 500 ಸ್ಟ್ರೈಕ್ ಔಟ್ ಗಳೊಂದಿಗೆ 66 ರನ್ ಗಳಿಸಿದರು. ಇದು ಲೂಸಿಯಾ ಕಿಂಗ್ಸ್‌ಗೆ ನಿಗದಿತ ಓವರ್‌ಗಳಲ್ಲಿ 149 ಸ್ಕೋರ್ ಮಾಡಲು ಅವಕಾಶ ಮಾಡಿಕೊಟ್ಟಿತು.

ಗಯಾನ ವಾರಿಯರ್ಸ್ ಕೇವಲ 98 ರನ್ ಗಳಿಗೆ ಆಲೌಟ್ ಆಯಿತು. ಗಯಾನ ವಾರಿಯರ್ಸ್ ಬ್ಯಾಟ್ಸ್‌ಮನ್‌ಗಳು ಲೂಸಿಯಾ ಕಿಂಗ್ಸ್ ಬೌಲರ್‌ಗಳೆದುರು ಅಬ್ಬರಿಸಲು ಸಾಧ್ಯವಾಗಲಿಲ್ಲ. ನಾಯಕ ನಿಕೋಲಸ್ ಪೂರನ್ (41) ಅತಿ ಹೆಚ್ಚು ಸ್ಕೋರರ್ ಆಗಿದ್ದಾರೆ. ಲೂಸಿಯಾ ಕಿಂಗ್ಸ್ ಬೌಲರ್‌ಗಳಲ್ಲಿ, ಜ್ಯುವೆಲರ್ ರಾಯಲ್ ಮೂರು ವಿಕೆಟ್ ಪಡೆದರು. ಬ್ಯಾಟಿನಿಂದ ಅವಾಂತರ ಸೃಷ್ಟಿಸಿದ ರೋಸ್ಟನ್ ಚೇಸ್ ಕೂಡ ಚೆಂಡಿನೊಂದಿಗೆ ಮಿಂಚಿದರು. 3 ಓವರ್ ಗಳಲ್ಲಿ 16 ರನ್ ನೀಡಿ 1 ವಿಕೆಟ್ ಪಡೆದರು. ಅವರು ಆಲ್ ರೌಂಡ್ ಶೋನಿಂದಾಗಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಗೆದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ