AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ಹೆಸರು ಬದಲಾವಣೆ ಪಕ್ಕಾ? ಇಲ್ಲಿದೆ ಕಾರಣ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಆದಿತ್ಯ ಬಿರ್ಲಾ ಸಮೂಹವು ಸುಮಾರು 16,706 ಕೋಟಿ ರೂ.ಗೆ ಖರೀದಿಸಿದೆ. ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (ಯುಎಸ್‌ಎಲ್‌) ನಿಂದ ಈ ಮಾರಾಟ ನಡೆದಿದೆ. ಮದ್ಯ ಬ್ರ್ಯಾಂಡ್ ಪ್ರಚಾರಕ್ಕೆ ತಂಡದ ಹೆಸರನ್ನು ಬಳಸಿದ್ದ ಕಾರಣ, ಹೊಸ ಮಾಲೀಕರು ಹೆಸರು ಬದಲಾಯಿಸುವ ಸಾಧ್ಯತೆ ಇದೆ.

ಆರ್​​ಸಿಬಿ ಹೆಸರು ಬದಲಾವಣೆ ಪಕ್ಕಾ? ಇಲ್ಲಿದೆ ಕಾರಣ
ಆರ್​​​ಸಿಬಿ
ರಾಜೇಶ್ ದುಗ್ಗುಮನೆ
|

Updated on:Mar 25, 2026 | 7:48 AM

Share

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು ನಡೆದಿದೆ.

ಆರ್​​ಸಿಬಿ ಒಡೆತನವು ಈ ಮೊದಲು ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (ಯುಎಸ್‌ಎಲ್‌) ಬಳಿ ಇತ್ತು. ಈ ಕಂಪನಿಯು ಲಂಡನ್ ಮೂಲದ ಯುಕೆ–ಡಿಯಾಜಿಯೊದ ಅಂಗಸಂಸ್ಥೆಯಾಗಿದೆ. ಯುಎಸ್‌ಎಲ್‌ ಮದ್ಯ ತಯಾರಿಕಾ ಕಂಪನಿ. ಹೀಗಾಗಿ, ತಮ್ಮ ವಿಸ್ಕಿ ಬ್ರ್ಯಾಂಡ್ ರಾಯಲ್ ಚಾಲೆಂಜ್ ಅಥವಾ ಆರ್​​ಸಿ ಪ್ರಮೋಷನ್ ಮಾಡುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಎಂದು ತಂಡಕ್ಕೆ ಹೆಸರನ್ನು ಇಟ್ಟಿದ್ದರು ವಿಜಯ್ ಮಲ್ಯ. ಈಗ ಐಪಿಎಲ್ ತಂಡ ಬೇರೆಯವರ ತೆಕ್ಕೆಗೆ ಹೋಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರೇ ಇದ್ದರೆ ಈಗಲೂ ರಾಯಲ್ ಚಾಲೆಂಜ್ ಬ್ರ್ಯಾಂಡ್ ಪ್ರಮೋಷನ್ ಮಾಡಿದಂತೆ ಆಗುತ್ತದೆ. ಈ ಕಾರಣದಿಂದ ಆದಿತ್ಯ ಬಿರ್ಲಾ ಗ್ರೂಪ್ ಹೆಸರು ಬದಲಾವಣೆ ಮಾಡುವ ನಿರ್ಧಾರಕ್ಕೆ ಬರಬಹುದು. ಈ ಮೊದಲು ಸಾಕಷ್ಟು ಐಪಿಎಲ್ ತಂಡಗಳ ಹೆಸರು ಬದಲಾದ ಉದಾಹರಣೆ ಇದೆ. ಸದ್ಯ ಆರ್​​ಸಿಬಿಯ ಪುರುಷ ಹಾಗೂ ಮಹಿಳಾ ತಂಡ ಎರಡನ್ನೂ ಆದಿತ್ಯ ಬಿರ್ಲಾ ಖರೀದಿ ಮಾಡಿದೆ.

ಇದನ್ನೂ ಓದಿ: ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬುದು ಈಗ ಕೇವಲ ಹೆಸರಾಗಿ ಉಳಿದುಕೊಂಡಿಲ್ಲ, ಅದೊಂದು ಭಾವನೆ ಆಗಿದೆ. ಅದರಲ್ಲೂ ಆರ್​​​ಸಿಬಿ ಎಂಬ ಶಬ್ದಕ್ಕೆ ತೂಕ ಹೆಚ್ಚು. ಮುಂದಿನ ದಿನಗಳಲ್ಲಿ ಆರ್​​​ಸಿಬಿ ಎಂಬ ಶಾರ್ಟ್​ಫಾರ್ಮ್ ಬರುವಂತೆ ಆದಿತ್ಯ ಬಿರ್ಲಾ ಗ್ರೂಪ್ ಹೆಸರನ್ನು ಬದಲಿಸುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಈ ಮೊದಲು ಡಿಯಾಜಿಯೊ ತನ್ನ ಹೇಳಿಕೆಯಲ್ಲಿ ಆರ್​​​ಸಿಬಿ ಮಾರಾಟ ವಿಷಯವನ್ನು ಉಲ್ಲೇಖ ಮಾಡಿತ್ತು. ತಮ್ಮ ಕಂಪನಿಗೂ, ಕ್ರಿಕೆಟ್ ಕ್ಷೇತ್ರಕ್ಕೂ ಯಾವುದೇ ಸಂಬಂಧ ಇಲ್ಲದ ಕಾರಣ ಮಾರ್ಚ್ 31ರೊಳಗೆ ತಂಡವನ್ನು ಮಾರುವುದಾಗಿ ಡಿಯಾಜಿಯೊ ಕಳೆದ ನವೆಂಬರ್​​​ನಲ್ಲಿ ಹೇಳಿತ್ತು.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:45 am, Wed, 25 March 26

Follow Us
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು