AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ
ಆರ್​ಸಿಬಿ
ರಾಜೇಶ್ ದುಗ್ಗುಮನೆ
|

Updated on:Apr 16, 2024 | 7:48 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಆರು ಮ್ಯಾಚ್​ಗಳನ್ನು ಸೋಲುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಗೆಲುವು ಕಂಡು ಎರಡು ಅಂಕ ಪಡೆದಿದೆ. ರನ್​ ರೇಟ್ ಕೂಡ ಹೀನಾಯ ಸ್ಥಿತಿಯಲ್ಲಿದ್ದು -1.185 ಇದೆ. ಇನ್ನು ಉಳಿದಿರೋದು ಕೇವಲ ಏಳು ಪಂದ್ಯಗಳು ಮಾತ್ರ. ಅಂಕಿ ಅಂಶಗಳನ್ನು ನೋಡಿದರೆ ಆರ್​ಸಿಬಿ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಚಮತ್ಕಾರ ನಡೆದರೆ ಮಾತ್ರ ಆರ್​ಸಿಬಿ ಪ್ಲೇಆಫ್ ತಲುಪಬಹುದು.

ಆರ್​ಸಿಬಿಗೆ ಉಳಿದಿರೋದು ಏಳು ಪಂದ್ಯಗಳು ಮಾತ್ರ. ಇದರಲ್ಲಿ ಏಳೂ ಪಂದ್ಯಗಳನ್ನು ಗೆಲ್ಲಬೇಕು. ಜೊತೆಗೆ ಈಗಿರುವ ಮೈನಸ್ ರನ್​ರೇಟ್​ನ ಪ್ಲಸ್​ಗೆ ತಂದುಕೊಳ್ಳಬೇಕು. ಇದರ ಜೊತೆಗೆ ಉಳಿದ ತಂಡಗಳ ಮ್ಯಾಚ್ ರಿಸಲ್ಟ್ ಕೂಡ ಆರ್​ಸಿಬಿ ಪ್ಲೇಆಫ್ ಮೇಲೆ ಪ್ರಭಾವ ಬೀರಲಿದೆ.

ಇದನ್ನೂ ಓದಿ: IPL 2024: 102, 67 ರನ್; ಆರ್​ಸಿಬಿಗೆ ಕಂಟಕವಾದ ಮಾಜಿ ಆರ್​ಸಿಬಿ ಆಟಗಾರರು..!

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್​ಗಳ ಸೋಲು ಕಂಡಿತು. ಸದ್ಯದ ಪರಿಸ್ಥಿತಿಯಲ್ಲಿ ಆರ್​ಸಿಬಿ ಪ್ಲೇಆಫ್ ಕನಸು ಅಷ್ಟು ಸುಲಭದಲ್ಲಿ ಇಲ್ಲ. ಆರ್​ಸಿಬಿ ಪ್ಲೇಆಫ್ ತಲುಪಬೇಕು ಎನ್ನುವ ಕನಸು ಕನಸಾಗಿಯೇ ಉಳಿಯೋ ಸಾಧ್ಯತೆ ಇದೆ.  ‘ಈ ವರ್ಷ ಕಪ್ ನಮ್ಮದೇ’ ಎನ್ನುವ ಸ್ಲೋಗನ್ ಮತ್ತೆ ಮುಂದುವರಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Tue, 16 April 24

Follow Us
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ