AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ
ಆರ್​ಸಿಬಿ
ರಾಜೇಶ್ ದುಗ್ಗುಮನೆ
|

Updated on:Apr 16, 2024 | 7:48 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಆರು ಮ್ಯಾಚ್​ಗಳನ್ನು ಸೋಲುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಗೆಲುವು ಕಂಡು ಎರಡು ಅಂಕ ಪಡೆದಿದೆ. ರನ್​ ರೇಟ್ ಕೂಡ ಹೀನಾಯ ಸ್ಥಿತಿಯಲ್ಲಿದ್ದು -1.185 ಇದೆ. ಇನ್ನು ಉಳಿದಿರೋದು ಕೇವಲ ಏಳು ಪಂದ್ಯಗಳು ಮಾತ್ರ. ಅಂಕಿ ಅಂಶಗಳನ್ನು ನೋಡಿದರೆ ಆರ್​ಸಿಬಿ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಚಮತ್ಕಾರ ನಡೆದರೆ ಮಾತ್ರ ಆರ್​ಸಿಬಿ ಪ್ಲೇಆಫ್ ತಲುಪಬಹುದು.

ಆರ್​ಸಿಬಿಗೆ ಉಳಿದಿರೋದು ಏಳು ಪಂದ್ಯಗಳು ಮಾತ್ರ. ಇದರಲ್ಲಿ ಏಳೂ ಪಂದ್ಯಗಳನ್ನು ಗೆಲ್ಲಬೇಕು. ಜೊತೆಗೆ ಈಗಿರುವ ಮೈನಸ್ ರನ್​ರೇಟ್​ನ ಪ್ಲಸ್​ಗೆ ತಂದುಕೊಳ್ಳಬೇಕು. ಇದರ ಜೊತೆಗೆ ಉಳಿದ ತಂಡಗಳ ಮ್ಯಾಚ್ ರಿಸಲ್ಟ್ ಕೂಡ ಆರ್​ಸಿಬಿ ಪ್ಲೇಆಫ್ ಮೇಲೆ ಪ್ರಭಾವ ಬೀರಲಿದೆ.

ಇದನ್ನೂ ಓದಿ: IPL 2024: 102, 67 ರನ್; ಆರ್​ಸಿಬಿಗೆ ಕಂಟಕವಾದ ಮಾಜಿ ಆರ್​ಸಿಬಿ ಆಟಗಾರರು..!

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್​ಗಳ ಸೋಲು ಕಂಡಿತು. ಸದ್ಯದ ಪರಿಸ್ಥಿತಿಯಲ್ಲಿ ಆರ್​ಸಿಬಿ ಪ್ಲೇಆಫ್ ಕನಸು ಅಷ್ಟು ಸುಲಭದಲ್ಲಿ ಇಲ್ಲ. ಆರ್​ಸಿಬಿ ಪ್ಲೇಆಫ್ ತಲುಪಬೇಕು ಎನ್ನುವ ಕನಸು ಕನಸಾಗಿಯೇ ಉಳಿಯೋ ಸಾಧ್ಯತೆ ಇದೆ.  ‘ಈ ವರ್ಷ ಕಪ್ ನಮ್ಮದೇ’ ಎನ್ನುವ ಸ್ಲೋಗನ್ ಮತ್ತೆ ಮುಂದುವರಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Tue, 16 April 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ