AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Won IPL Trophy: ಗರ್ವದಿಂದ ಹೇಳಿ ‘ಈ ಸಲ ಕಪ್ ನಮ್ದೆ’: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ

ಬಳಿಕ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸ್ಫೋಟಕ ಆರಂಭ ಪಡೆದುಕೊಂಡಿತು. ಆರ್ಸಿಬಿ ಎದುರಾಳಿಯ ವಿಕೆಟ್ಗೆ ಮೊದಲಿಗೆ ಪರದಾಡಿತು. ಆದರೆ, 5ನೇ ಓವರ್ನಲ್ಲಿ ಹ್ಯಾಜಲ್ವುಡ್ ತಂಡಕ್ಕೆ ಮೊದಲ ಬ್ರೇಕ್ ತಂದುಕೊಟ್ಟರು. 24 ರನ್ ಗಳಿಸಿದ ಪ್ರಿಯಾಂಶ್ ಔಟಾದರು. ಬಳಿಕ ಪ್ರಭ್ ಸಿಮ್ರಾನ್ (26) ಹಾಗೂ ಜೋಶ್ ಇಂಗ್ಲಿಸ್ (39) ತಂಡಕ್ಕೆ ನೆರವಾಗಿ ಗೆಲುವಿನತ್ತ ಕೊಂಡೊಯ್ಯಿದರು. ಆದರೆ, ಇವರ ಆಟಕ್ಕೆ ಕ್ರುನಾಲ್ ಬ್ರೇಕ್ ಹಾಕಿದರು.

RCB Won IPL Trophy: ಗರ್ವದಿಂದ ಹೇಳಿ ‘ಈ ಸಲ ಕಪ್ ನಮ್ದೆ’: ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್​ಸಿಬಿ
Rcb Champion
Vinay Bhat
|

Updated on:Jun 03, 2025 | 11:39 PM

Share

ಬೆಂಗಳೂರು (ಜೂ. 03): ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಕೊನೆಗೂ ಟ್ರೋಫಿ ಎತ್ತಿ ಹಿಡಿದಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಫೈನಲ್ ಕಾದಾಟದಲ್ಲಿ ಆರ್​ಸಿಬಿ 6 ರನ್​ಗಳ ಜಯ ಸಾಧಿಸಿ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಶ್ರೇಯಸ್ ಪಡೆಗೆ ಗೆಲ್ಲಲು ಆರ್​ಸಿಬಿ 191 ರನ್​ಗಳ ಟಾರ್ಗೆಟ್ ನೀಡಿತ್ತು. ಆದರೆ, ರಜತ್ ಪಡೆಯ ಬೌಲಿಂಗ್ ದಾಳಿಗೆ ತತ್ತರಿಸಿದ ಪಂಜಾಬ್ ಕೇವಲ 155 ರನ್​ಗಳಿಗೆ ಸರ್ವಪತನ ಕಂಡು ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿ ಪಡೆದುಕೊಂಡಿತು.

ಈ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಕೈಲ್ ಜೇಮಿಸನ್ ಫಿಲ್ ಸಾಲ್ಟ್ ಅವರನ್ನು ಔಟ್ ಮಾಡುವ ಮೂಲಕ ಪಂಜಾಬ್‌ನ ನಿರ್ಧಾರವನ್ನು ಸರಿಯೆಂದು ಸಾಬೀತುಪಡಿಸಿದರು. ಸಾಲ್ಟ್ 16 ರನ್ ಗಳಿಸಿ ಔಟಾದರು, ವಿರಾಟ್ ಕೊಹ್ಲಿ ತಂಡಕ್ಕಾಗಿ 43 ರನ್ ಗಳಿಸಿದರೆ, ಮಾಯಾಂಕ್ ಅಗರ್ವಾಲ್ 17 ಎಸೆತಗಳಲ್ಲಿ 24 ರನ್ ಗಳಿಸಿದರು, ಇದರಲ್ಲಿ 2 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿದ್ದವು. ಜಿತೇಶ್ ಶರ್ಮಾ (24) ಹಾಗೂ ರೊಮಾರಿಯೊ ಶೆಫರ್ಡ್ (17) ಅಂತಿಮ ಹಂತದಲ್ಲಿ ತಂಡಕ್ಕೆ ಆಸರೆಯಾದರು. ಕೈಲ್ ಜೇಮಿಸನ್ ಮತ್ತು ಅರ್ಶ್ದೀಪ್ ಸಿಂಗ್ ತಲಾ 3-3 ವಿಕೆಟ್‌ಗಳನ್ನು ಪಡೆದರು.

ಬಳಿಕ ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸ್ಫೋಟಕ ಆರಂಭ ಪಡೆದುಕೊಂಡಿತು. ಆರ್​ಸಿಬಿ ಎದುರಾಳಿಯ ವಿಕೆಟ್​ಗೆ ಮೊದಲಿಗೆ ಪರದಾಡಿತು. ಆದರೆ, 5ನೇ ಓವರ್​ನಲ್ಲಿ ಹ್ಯಾಜಲ್​ವುಡ್ ತಂಡಕ್ಕೆ ಮೊದಲ ಬ್ರೇಕ್ ತಂದುಕೊಟ್ಟರು. 24 ರನ್ ಗಳಿಸಿದ ಪ್ರಿಯಾಂಶ್ ಔಟಾದರು. ಬಳಿಕ ಪ್ರಭ್​ ಸಿಮ್ರಾನ್ (26) ಹಾಗೂ ಜೋಶ್ ಇಂಗ್ಲಿಸ್ (39) ತಂಡಕ್ಕೆ ನೆರವಾಗಿ ಗೆಲುವಿನತ್ತ ಕೊಂಡೊಯ್ಯಿದರು. ಆದರೆ, ಇವರ ಆಟಕ್ಕೆ ಕ್ರುನಾಲ್ ಬ್ರೇಕ್ ಹಾಕಿದರು.

RCB vs PBKS, IPL 2025 Final: 1 W 1 W 1 W…: ಕೊನೆಯ ಓವರ್‌ನಲ್ಲಿ ಬೆಂಕಿಯ ಚೆಂಡೆಸೆದ ಅರ್ಶ್‌ದೀಪ್ ಸಿಂಗ್

ಎರಡನೇ ಎಲಿಮಿನೇಟರ್​ನಲ್ಲಿ ಹೀರೋ ಆಗಿದ್ದ ನಾಯಕ ಶ್ರೇಯಸ್ ಅಯ್ಯರ್ ಈ ಬಾರಿ ಕೇವಲ 1 ರನ್​ಗೆ ನಿರ್ಗಮಿಸಿದರು. ಬಳಿಕ ಬಂದ ಬ್ಯಾಟರ್​ಗಳ ಪೈಕಿ ಕೊನೆಯ ಹಂತದವರೆಗೆ ಶಶಾಂಕ್ ಸಿಂಗ್ (ಅಜೇಯ 61) ಹೋರಾಡಿದ್ದು ಬಿಟ್ಟರೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಕೊನೆಯ 6 ಎಸೆತಗಳಲ್ಲಿ ಪಂಜಾಬ್ ಗೆಲುವಿಗೆ 29 ರನ್​ಗಳ ಅವಶ್ಯಕತೆಯಿತ್ತು. ಆದರೆ, ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 pm, Tue, 3 June 25