AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದೇ ಮೈದಾನದಲ್ಲಿ ಅತಿ ಹೆಚ್ಚು ಸೋಲು; ತವರಿನಲ್ಲಿ ಬೇಡದ ದಾಖಲೆ ಬರೆದ ಆರ್​ಸಿಬಿ

RCB Home Losses: 2025ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಿನಲ್ಲಿ ಸತತ ಸೋಲುಗಳನ್ನು ಎದುರಿಸುತ್ತಿದೆ. ಹೊಸ ನಾಯಕ ರಜತ್ ಪಟಿದಾರ್ ಅವರ ನೇತೃತ್ವದಲ್ಲಿ ತಂಡವು ತವರಿನಲ್ಲಿ ಗೆಲುವಿಗಾಗಿ ಹೋರಾಟ ನಡೆಸುತ್ತಿದೆ. ಈ ಮೂಲಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಒಂದೇ ಮೈದಾನದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ದಾಖಲೆ ಬರೆದಿದೆ.

IPL 2025: ಒಂದೇ ಮೈದಾನದಲ್ಲಿ ಅತಿ ಹೆಚ್ಚು ಸೋಲು; ತವರಿನಲ್ಲಿ ಬೇಡದ ದಾಖಲೆ ಬರೆದ ಆರ್​ಸಿಬಿ
Rcb
Follow us
ಪೃಥ್ವಿಶಂಕರ
|

Updated on:Apr 11, 2025 | 4:52 PM

2025 ರ ಐಪಿಎಲ್ (IPL 2025) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಏರಿಳಿತಗಳಿಂದ ಕೂಡಿದೆ. ಹೊಸ ನಾಯಕ ರಜತ್ ಪಟಿದಾರ್ ಅವರ ನಾಯಕತ್ವದಲ್ಲಿ, ಬೆಂಗಳೂರು ತಂಡವು ತವರಿನಿಂದ ಹೊರಗೆ ನಡೆದ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ತವರಿನಲ್ಲಿ ತಂಡವು ಆಡಿದ ಎರಡೂ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ತವರಿನಲ್ಲಿ ಮೊದಲ ಪಂದ್ಯವನ್ನಾಡಿದ್ದ ಆರ್​ಸಿಬಿಗೆ ಹೀನಾಯ ಸೋಲು ಎದುರಾಗಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ಏಕಪಕ್ಷೀಯ ಸೋಲಿಗೆ ಕೊರಳೊಡ್ಡಿದೆ. ಇದರೊಂದಿಗೆ ಆರ್​ಸಿಬಿ ತನ್ನ ಖಾತೆಗೆ ಮುಜುಗರದ ದಾಖಲೆಯೊಂದನ್ನು ಹಾಕಿಕೊಂಡಿದ್ದು, ಒಂದೇ ಮೈದಾನದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ತಂಡ ಎಂಬ ಕುಖ್ಯಾತಿ ಆರ್​ಸಿಬಿ ಪಾಲಾಗಿದೆ.

ಏಪ್ರಿಲ್ 10 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 163 ರನ್‌ಗಳನ್ನು ಮಾತ್ರ ಕಲೆಹಾಕಿತು. ಇದಕ್ಕುತ್ತರವಾಗಿ, ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಹಿನ್ನಡೆಯಿಂದ ಚೇತರಿಸಿಕೊಂಡು 18 ಓವರ್‌ಗಳಲ್ಲಿ ಗುರಿ ತಲುಪಿತು. ಡೆಲ್ಲಿ ಪರ ಗೆಲುವಿನ ಇನ್ನಿಂಗ್ಸ್ ಆಡಿದ ಕನ್ನಡಿಗ ಕೆ.ಎಲ್. ರಾಹುಲ್ 93 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು.

ಒಂದೇ ಮೈದಾನದಲ್ಲಿ ಅತಿ ಹೆಚ್ಚು ಸೋಲು

ಈ ಆವೃತ್ತಿಯಲ್ಲಿ ಆರ್​ಸಿಬಿ ತವರಿನಲ್ಲಿ ಅನುಭವಿಸಿದ ಸತತ ಎರಡನೇ ಸೋಲು ಇದು. ಇದಕ್ಕೂ ಮೊದಲು ಗುಜರಾತ್ ಟೈಟಾನ್ಸ್ ಕೂಡ ಏಕಪಕ್ಷೀಯ ರೀತಿಯಲ್ಲಿ ಸೋಲಿಸಿತ್ತು. ಇದರೊಂದಿಗೆ ಬೆಂಗಳೂರು ತಂಡ ತವರಿನಲ್ಲಿ 45ನೇ ಬಾರಿ ಸೋಲನ್ನು ಅನುಭವಿಸಿದೆ. ಇದು ಐಪಿಎಲ್ ಇತಿಹಾಸದಲ್ಲಿ ಒಂದೇ ಕ್ರೀಡಾಂಗಣದಲ್ಲಿ ಯಾವುದೇ ತಂಡ ಅನುಭವಿಸಿದ ಅತಿ ಹೆಚ್ಚು ಸೋಲುಗಳಾಗಿದೆ. ಕುತೂಹಲಕಾರಿ ವಿಷಯವೆಂದರೆ ಈ ಸೋಲಿಗೆ ಮುನ್ನ, ದೆಹಲಿ ಮತ್ತು ಬೆಂಗಳೂರು ಜಂಟಿಯಾಗಿ ಅಗ್ರಸ್ಥಾನದಲ್ಲಿದ್ದವು. ಉಭಯ ತಂಡಗಳು ಒಂದೇ ಮೈದಾನದಲ್ಲಿ 44 ಸೋಲುಗಳನ್ನು ಕಂಡಿದ್ದವು. ಆದರೆ ಈಗ ದೆಹಲಿ ಬೆಂಗಳೂರನ್ನು ಸೋಲಿಸುವ ಮೂಲಕ ಈ ದಾಖಲೆಯಿಂದ ತನ್ನನ್ನು ತಾನು ರಕ್ಷಿಸಿಕೊಂಡಿದೆ.

ಇದನ್ನೂ ಓದಿ
Image
ಒಂದಲ್ಲ, ಎರಡಲ್ಲ.. 32 ರನೌಟ್​ಗಳಿಗೆ ಕೊಹ್ಲಿಯೇ ಕಾರಣ
Image
ಆರ್​ಸಿಬಿಗೆ ಸೋಲಿನ ಶಾಕ್ ನೀಡಿದ ಕನ್ನಡಿಗ ಕೆಎಲ್ ರಾಹುಲ್
Image
1000 ಬೌಂಡರಿಗಳು; ಕೊಹ್ಲಿ ದಾಖಲೆಯ ಸಮೀಪ ಯಾರೂ ಇಲ್ಲ..!
Image
ತವರಿನಲ್ಲಿ ಮತ್ತೊಮ್ಮೆ ಮುಗ್ಗರಿಸಿದ ಆರ್​ಸಿಬಿ ಬ್ಯಾಟಿಂಗ್‌ ವಿಭಾಗ

IPL 2025: ಬರೋಬ್ಬರಿ 32 ರನ್​ ಔಟ್; ಆರ್​ಸಿಬಿಗೆ ಕೊಹ್ಲಿಯ ಅನಗತ್ಯ ಆತುರವೇ ಅಪಾಯಕಾರಿ

ತನ್ನ ಇತಿಹಾಸವನ್ನು ಬದಲಾಯಿಸುತ್ತಾ ದೆಹಲಿ?

ಈ ಆವೃತ್ತಿಯಲ್ಲಿ ಆರ್​ಸಿಬಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನೂ 5 ಪಂದ್ಯಗಳನ್ನು ಆಡಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಅಂಕಿ ಅಂಶವು ಹೆಚ್ಚಾಗುವುದನ್ನು ಕಾಣಬಹುದು. ಅಂದಹಾಗೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ 2025 ರಲ್ಲಿ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಒಂದೇ ಒಂದು ಪಂದ್ಯವನ್ನು ಆಡಿಲ್ಲದ ಕಾರಣ ಮತ್ತೆ ಈ ರೇಸ್‌ಗೆ ಮರಳಬಹುದು. ಈ ತಂಡವು ತನ್ನ ತವರು ಮೈದಾನದಲ್ಲಿ 5 ಪಂದ್ಯಗಳನ್ನು ಆಡಬೇಕಾಗಿದೆ. ಆದಾಗ್ಯೂ, ದೆಹಲಿಯ ಅತ್ಯುತ್ತಮ ಫಾರ್ಮ್ ಅನ್ನು ಗಮನಿಸಿದರೆ, ತಂಡವು ತನ್ನ ತವರಿನಲ್ಲಿ ಸೋಲುತ್ತದೆ ಎಂದು ಹೇಳುವುದು ಕಷ್ಟ. ಈ ಋತುವಿನಲ್ಲಿ ಡೆಲ್ಲಿ ತಂಡವು ಆಡಿರುವ ನಾಲ್ಕೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಜೆಟ್ಲಿ ಕ್ರೀಡಾಂಗಣದಲ್ಲಿ ದೆಹಲಿಯ ಮೊದಲ ಪಂದ್ಯ ಏಪ್ರಿಲ್ 13 ರ ಭಾನುವಾರದಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 11 April 25

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್