AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಶತಕ ಸಿಡಿಸಿ ಮಿಂಚಿದ ಚೇತೇಶ್ವರ ಪೂಜಾರ

Royal London Cup 2023: ರಾಯಲ್​ ಲಂಡನ್​ ಕಪ್​ ಟೂರ್ನಿಯಲ್ಲಿ ಚೇತೇಶ್ವರ ಪೂಜಾರ ಆಕರ್ಷಕ ಶತಕ ಬಾರಿಸಿದ್ದಾರೆ. ಇದಾಗ್ಯೂ ಈ ಪಂದ್ಯದಲ್ಲಿ ಸಸೆಕ್ಸ್ ತಂಡಕ್ಕೆ ಗೆಲುವು ದಕ್ಕಲಿಲ್ಲ.

ಭರ್ಜರಿ ಶತಕ ಸಿಡಿಸಿ ಮಿಂಚಿದ ಚೇತೇಶ್ವರ ಪೂಜಾರ
Cheteshwar Pujara
TV9 Web
| Edited By: |

Updated on: Aug 06, 2023 | 10:56 PM

Share

Royal London Cup 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್ ಏಕದಿನ​ ಟೂರ್ನಿಯಲ್ಲಿ ಚೇತೇಶ್ವರ ಪೂಜಾರ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ನಾರ್ಥಾಂಪ್ಟನ್ ತಂಡದ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಸೆಕ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಟಾಮ್ ಹೈನ್ಸ್​ ಕೇವಲ 13 ರನ್​ಗಳಿಗೆ ಔಟ್ ಆದರೆ, ಟಾಮ್ ಅಲ್ಸೋಪ್ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ ಆಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಪೂಜಾರ ಕ್ರೀಸ್​ ಕಚ್ಚಿ ನಿಲ್ಲುತ್ತಿದ್ದಂತೆ ರನ್​ ಗಳಿಕೆ ವೇಗವನ್ನು ಹೆಚ್ಚಿಸಿದರು. ಅಲ್ಲದೆ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮೇಲೆತ್ತಿದರು.

ಆದರೆ ಮತ್ತೊಂದೆಡೆ ಸಸೆಕ್ಸ್ ತಂಡವು ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಇದಾಗ್ಯೂ ತಮ್ಮ ಅನುಭವವನ್ನು ಧಾರೆಯೆರದ ಚೇತೇಶ್ವರ ಪೂಜಾರಾ 119 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 106 ರನ್ ಬಾರಿಸಿದರು. ಈ ಮೂಲಕ ಮಳೆಯಿಂದಾಗಿ ನಿಗದಿತವಾಗಿದ್ದ 45 ಓವರ್​ಗಳಲ್ಲಿ ಸಸೆಕ್ಸ್​ ತಂಡದ ಮೊತ್ತವನ್ನು 7 ವಿಕೆಟ್ ನಷ್ಟಕ್ಕೆ 240 ರನ್​ಗಳಿಗೆ ತಂದು ನಿಲ್ಲಿಸಿದರು.

241 ರನ್​ಗಳ ಗುರಿ ಪಡೆದ ನಾರ್ಥಾಂಪ್ಟನ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಪೃಥ್ವಿ ಶಾ (26) ವಿಫಲರಾದರು. ಅಲ್ಲದೆ 115 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಇದನ್ನೂ ಓದಿ: Tilak Varma: ಬ್ಯಾಕ್ ಟು ಬ್ಯಾಕ್ ದಾಖಲೆ ಬರೆದ ತಿಲಕ್ ವರ್ಮಾ

ಈ ವೇಳೆ ಕಣಕ್ಕಿಳಿದ ಇನ್ನು ಲೆವಿಸ್ 36 ರನ್ ಬಾರಿಸಿದರೆ, ರಿಕಾರ್ಡೊ 37 ರನ್​ಗಳ ಕೊಡುಗೆ ನೀಡಿದರು. ಹಾಗೆಯೇ ಕೆಳಕ್ರಮಾಂಕದಲ್ಲಿ ಟಾಮ್ ಟೇಲರ್ ಅಜೇಯ 42 ರನ್​ ಬಾರಿಸಿ 43.4 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ನಾರ್ಥಾಂಪ್ಟನ್ ತಂಡವು 3 ವಿಕೆಟ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ