AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಶತಕ ಸಿಡಿಸಿ ಮಿಂಚಿದ ಚೇತೇಶ್ವರ ಪೂಜಾರ

Royal London Cup 2023: ರಾಯಲ್​ ಲಂಡನ್​ ಕಪ್​ ಟೂರ್ನಿಯಲ್ಲಿ ಚೇತೇಶ್ವರ ಪೂಜಾರ ಆಕರ್ಷಕ ಶತಕ ಬಾರಿಸಿದ್ದಾರೆ. ಇದಾಗ್ಯೂ ಈ ಪಂದ್ಯದಲ್ಲಿ ಸಸೆಕ್ಸ್ ತಂಡಕ್ಕೆ ಗೆಲುವು ದಕ್ಕಲಿಲ್ಲ.

ಭರ್ಜರಿ ಶತಕ ಸಿಡಿಸಿ ಮಿಂಚಿದ ಚೇತೇಶ್ವರ ಪೂಜಾರ
Cheteshwar Pujara
TV9 Web
| Edited By: |

Updated on: Aug 06, 2023 | 10:56 PM

Share

Royal London Cup 2023: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ರಾಯಲ್ ಲಂಡನ್ ಕಪ್ ಏಕದಿನ​ ಟೂರ್ನಿಯಲ್ಲಿ ಚೇತೇಶ್ವರ ಪೂಜಾರ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ನಾರ್ಥಾಂಪ್ಟನ್ ತಂಡದ ವಿರುದ್ಧ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಸೆಕ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಟಾಮ್ ಹೈನ್ಸ್​ ಕೇವಲ 13 ರನ್​ಗಳಿಗೆ ಔಟ್ ಆದರೆ, ಟಾಮ್ ಅಲ್ಸೋಪ್ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ಚೇತೇಶ್ವರ ಪೂಜಾರ ಆಕರ್ಷಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು. ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಪೂಜಾರ ಕ್ರೀಸ್​ ಕಚ್ಚಿ ನಿಲ್ಲುತ್ತಿದ್ದಂತೆ ರನ್​ ಗಳಿಕೆ ವೇಗವನ್ನು ಹೆಚ್ಚಿಸಿದರು. ಅಲ್ಲದೆ ಭರ್ಜರಿ ಶತಕ ಸಿಡಿಸಿ ಬ್ಯಾಟ್ ಮೇಲೆತ್ತಿದರು.

ಆದರೆ ಮತ್ತೊಂದೆಡೆ ಸಸೆಕ್ಸ್ ತಂಡವು ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಇದಾಗ್ಯೂ ತಮ್ಮ ಅನುಭವವನ್ನು ಧಾರೆಯೆರದ ಚೇತೇಶ್ವರ ಪೂಜಾರಾ 119 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 106 ರನ್ ಬಾರಿಸಿದರು. ಈ ಮೂಲಕ ಮಳೆಯಿಂದಾಗಿ ನಿಗದಿತವಾಗಿದ್ದ 45 ಓವರ್​ಗಳಲ್ಲಿ ಸಸೆಕ್ಸ್​ ತಂಡದ ಮೊತ್ತವನ್ನು 7 ವಿಕೆಟ್ ನಷ್ಟಕ್ಕೆ 240 ರನ್​ಗಳಿಗೆ ತಂದು ನಿಲ್ಲಿಸಿದರು.

241 ರನ್​ಗಳ ಗುರಿ ಪಡೆದ ನಾರ್ಥಾಂಪ್ಟನ್ ತಂಡಕ್ಕೆ ಉತ್ತಮ ಆರಂಭ ಒದಗಿಸುವಲ್ಲಿ ಪೃಥ್ವಿ ಶಾ (26) ವಿಫಲರಾದರು. ಅಲ್ಲದೆ 115 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಇದನ್ನೂ ಓದಿ: Tilak Varma: ಬ್ಯಾಕ್ ಟು ಬ್ಯಾಕ್ ದಾಖಲೆ ಬರೆದ ತಿಲಕ್ ವರ್ಮಾ

ಈ ವೇಳೆ ಕಣಕ್ಕಿಳಿದ ಇನ್ನು ಲೆವಿಸ್ 36 ರನ್ ಬಾರಿಸಿದರೆ, ರಿಕಾರ್ಡೊ 37 ರನ್​ಗಳ ಕೊಡುಗೆ ನೀಡಿದರು. ಹಾಗೆಯೇ ಕೆಳಕ್ರಮಾಂಕದಲ್ಲಿ ಟಾಮ್ ಟೇಲರ್ ಅಜೇಯ 42 ರನ್​ ಬಾರಿಸಿ 43.4 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ನಾರ್ಥಾಂಪ್ಟನ್ ತಂಡವು 3 ವಿಕೆಟ್​ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ