AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs LSG Playing XI: ಪ್ರಮುಖ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ 11

IPL Rajasthan Royals vs Lucknow Super Giants in Kannada Playing XI: ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ 2 ಬಾರಿ ಗೆಲುವು ದಾಖಲಿಸಿದೆ. ಇದೀಗ ಜೈಪುರದ ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಉಭಯ ತಂಡಗಳು ಎಂಟನೇ ಬಾರಿ ಮುಖಾಮುಖಿಯಾಗಿದೆ.

RR vs LSG Playing XI: ಪ್ರಮುಖ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ 11
RR vs LSG
ಝಾಹಿರ್ ಯೂಸುಫ್
|

Updated on: May 19, 2026 | 7:12 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ  ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇನ್ನು ಈ ಪಂದ್ಯದಿಂದ ಆರ್​ಆರ್ ತಂಡದ ಕ್ಯಾಪ್ಟನ್ ರಿಯಾನ್ ಪರಾಗ್ ಹೊರಗುಳಿದಿದ್ದಾರೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೊಹಮ್ಮದ್ ಶಮಿ ಹಾಗೂ ಐಡೆನ್ ಮಾರ್ಕ್ರಾಮ್ ಕಾಣಿಸಿಕೊಂಡಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್ (ನಾಯಕ), ಲುವಾನ್-ಡ್ರೆ ಪ್ರಿಟೋರಿಯಸ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಡೊನೊವನ್ ಫೆರೇರಾ, ಶುಭಂ ದುಬೆ, ದಸುನ್ ಶಾನಕ, ಜೋಫ್ರಾ ಆರ್ಚರ್, ಸುಶಾಂತ್ ಮಿಶ್ರಾ, ಸಂದೀಪ್ ಶರ್ಮಾ, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪುಂಜಾ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್, ನಿಕೋಲಸ್ ಪೂರನ್, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ, ಅಬ್ದುಲ್ ಸಮದ್, ಶಹಬಾಝ್ ಅಹ್ಮದ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.

ನಿರ್ಣಾಯಕ ಪಂದ್ಯ:

ಈ ಮ್ಯಾಚ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನಿರ್ಣಾಯಕ. ಏಕೆಂದರೆ ಇಂದಿನ ಪಂದ್ಯದಲ್ಲಿ ಗೆದ್ದರೆ ರಾಜಸ್ಥಾನ್ ರಾಯಲ್ಸ್ ತಂಡದ ಪ್ಲೇಆಫ್ ಸುಲಭವಾಗಲಿದೆ. ಏಕೆಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಆರ್​ ಪಡೆ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಹೊಂದಲಿದೆ.

ಅಲ್ಲದೆ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲು ಅವಕಾಶ ದೊರೆಯಲಿದೆ. ಅಂದರೆ ನೇರವಾಗಿ ಪ್ಲೇಆಫ್​ಗೇರಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡವು ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಹೀಗಾಗಿ ಒಂದಾರ್ಥದಲ್ಲಿ ಈ ಮ್ಯಾಚ್ ಆರ್​ಆರ್​ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಹೆಡ್ ಟು ಹೆಡ್:

ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್​ ಜೈಂಟ್ಸ್ ತಂಡಗಳು ಈವರೆಗೆ 7 ಪಂದ್ಯಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಈ ವೇಳೆ ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನುಳಿದ 5 ಮ್ಯಾಚ್​ಗಳಲ್ಲೂ ರಾಜಸ್ಥಾನ್ ರಾಯಲ್ಸ್ ತಂಡ ಜಯಭೇರಿ ಬಾರಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್​ಆರ್​ ಪಡೆ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ.

ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್​, ಕುಲದೀಪ್ ಸೇನ್.

ಇದನ್ನೂ ಓದಿ: RR vs LSG IPL 2026 Live Score: ರಾಯಲ್ಸ್​ vs ಸೂಪರ್ ಜೈಂಟ್ಸ್

ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ (ನಾಯಕ), ಅಬ್ದುಲ್ ಸಮದ್, ಆಯುಷ್ ಬದೋನಿ, ಐಡೆನ್ ಮರ್ಕ್ರಾಮ್, ಮ್ಯಾಥ್ಯೂ ಬ್ರೀಟ್ಝ್ಕ್​, ಹಿಮ್ಮತ್ ಸಿಂಗ್,  ನಿಕೋಲಸ್ ಪೂರನ್, ಮಿಚೆಲ್ ಮಾರ್ಷ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್, ಆಕಾಶ್ ಸಿಂಗ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ವನಿಂದು ಹಸರಂಗ, ಅನ್ರಿಕ್ ನೋಕಿಯ, ಮುಕುಲ್ ಚೌಧರಿ, ನಮನ್ ತಿವಾರಿ, ಅಕ್ಷತ್ ರಘುವಂಶಿ, ಜೋಶ್ ಇಂಗ್ಲಿಸ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ