AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaipur ಇಂದು ಗೆಲ್ಲಲೇ ಬೇಕಾದ ಆರ್​ಸಿಬಿ ಪಂದ್ಯಕ್ಕೆ ಇದೆಯೇ ಮಳೆಯ ಕಾಟ?: ಹವಾಮಾನ ವರದಿ ಇಲ್ಲಿದೆ

RR vs RCB, IPL 2023: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿದೆ. ಜೈಪುರದ ಹವಾಮಾನದ ಬಗ್ಗೆ ನೋಡುವುದಾದರೆ ಪಂದ್ಯಕ್ಕೆ ಯಾವುದೇ ತೊಂದರೆ ಅಟ್ಟಿಪಡಿಸುವ ಸಾಧ್ಯತೆ ಇಲ್ಲ.

Jaipur ಇಂದು ಗೆಲ್ಲಲೇ ಬೇಕಾದ ಆರ್​ಸಿಬಿ ಪಂದ್ಯಕ್ಕೆ ಇದೆಯೇ ಮಳೆಯ ಕಾಟ?: ಹವಾಮಾನ ವರದಿ ಇಲ್ಲಿದೆ
RR vs RCB Weather Report
Follow us
Vinay Bhat
|

Updated on: May 14, 2023 | 9:39 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್​ನಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮತ್ತು ಫಾಫ್ ಡುಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಪಾಯಿಂಟ್ ಟೇಬಲ್​ನಲ್ಲಿ (Points Table) ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಎಲ್ಲಾದರು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ. ಹೀಗಾಗಿ ಜೈಪುರದಲ್ಲಿ ಇಂದು ಐಪಿಎಲ್ ಟೂರ್ನಿಯ ಪ್ರಮುಖ ಪಂದ್ಯ ನಡೆಯಲಿದೆ.

IPL 2023: ಪ್ಲೇಆಫ್ ಹಂತಕ್ಕೇರಲು ಯಾವ ತಂಡ ಎಷ್ಟೆಷ್ಟು ಪಂದ್ಯಗಳನ್ನು ಗೆಲ್ಲಬೇಕು? ಇಲ್ಲಿದೆ ಮಾಹಿತಿ

ಇದನ್ನೂ ಓದಿ
Image
RR vs RCB Pitch Report: ಆರ್​ಸಿಬಿ ಸೋತರೆ ಪ್ಲೇ ಆಫ್ ಕನಸು ಭಗ್ನ: ಸವಾಯಿ ಮಾನ್​ಸಿಂಗ್ ಪಿಚ್ ಯಾರಿಗೆ ಹೆಚ್ಚು ಸಹಕಾರಿ?
Image
RR vs RCB, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರಾಜಸ್ಥಾನ್- ಆರ್​ಸಿಬಿ ಮಧ್ಯೆ ಹೈವೋಲ್ಟೇಜ್ ಕದನ
Image
IPL 2023: RR ವಿರುದ್ಧ ಗೆದ್ದರೂ RCB ಟಾಪ್-4 ಹಂತಕ್ಕೇರುವುದಿಲ್ಲ
Image
IPL 2023: ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಹರ್ಭಜನ್ ಸಿಂಗ್

ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಜೈಪುರದ ಹವಾಮಾನದ ಬಗ್ಗೆ ನೋಡುವುದಾದರೆ ಪಂದ್ಯಕ್ಕೆ ಯಾವುದೇ ತೊಂದರೆ ಅಟ್ಟಿಪಡಿಸುವ ಸಾಧ್ಯತೆ ಇಲ್ಲ. ಇಂದು ತಾಪಮಾನವು ಸುಮಾರು 37 ಡಿಗ್ರಿ ಸೆಲ್ಸಿಯೆಷ್ಟ್​ನಷ್ಟು ಇರಲಿದೆ. ಶೇ. 24 ರಷ್ಟು ಹ್ಯುಮಿಡಿಟಿ ಮತ್ತು 10 km/h ಗಾಳಿಯ ವೇಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ. ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ. ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ವನಿಂದು ಹಸರಂಗ, ಕರ್ಣ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ