AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Predicted Playing XI: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

RR vs RCB Predicted Playing XI: 2008ರಿಂದ ರಾಜಸ್ಥಾನ ತಂಡ ಫೈನಲ್‌ ಆಡಿಲ್ಲ, 2016ರಿಂದ ಬೆಂಗಳೂರು ಫೈನಲ್‌ ತಲುಪಿಲ್ಲ.ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳು ಈ ಪಂದ್ಯದಲ್ಲಿ ಪ್ರಾಣಾರ್ಪಣೆ ಮಾಡಲಿವೆ.

RR vs RCB Predicted Playing XI: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
RR vs RCB
TV9 Web
| Edited By: |

Updated on: May 27, 2022 | 7:00 AM

Share

ಐಪಿಎಲ್-2022 (IPL-2022)ರ ಮೊದಲ ಫೈನಲಿಸ್ಟ್ ತಂಡ ಗುಜರಾತ್ ಟೈಟಾನ್ಸ್ (Gujarat Titans) ಆಗಿದ್ದು, ಎರಡನೇ ತಂಡ ಯಾರೆಂಬುದು ಶುಕ್ರವಾರ ನಿರ್ಧಾರವಾಗಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ (Narendra Modi Stadium)ನಲ್ಲಿ ನಡೆಯಲಿದ್ದು, ಇದರಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಭಾನುವಾರದ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನವನ್ನು ಸೋಲಿಸಿ ಗುಜರಾತ್ ಅಂತಿಮ ಟಿಕೆಟ್ ಕಾಯ್ದಿರಿಸಿತ್ತು. ಗುಜರಾತ್ ಮತ್ತು ರಾಜಸ್ಥಾನ ಲೀಗ್ ಹಂತವನ್ನು ಅಗ್ರಸ್ಥಾನದಲ್ಲಿ ಮುಗಿಸಿದವು. ಆದ್ದರಿಂದ ಈ ಎರಡೂ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡಿದವು. ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗುತ್ತದೆ. ಮತ್ತೊಂದೆಡೆ, ಎಲಿಮಿನೇಟರ್‌ನಲ್ಲಿ ಆಡುವ ತಂಡವು ಕ್ವಾಲಿಫೈಯರ್ 2 ರ ಅಡಚಣೆಯನ್ನು ದಾಟಬೇಕು. ಈ ಪಂದ್ಯವು ಇಬ್ಬರಿಗೂ ಫೈನಲ್‌ಗೆ ಪ್ರಮುಖವಾಗಿದೆ. ಆದ್ದರಿಂದ ಎರಡೂ ತಂಡಗಳು ತಮ್ಮ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿಯಬೇಕಿದೆ.

2008ರಿಂದ ರಾಜಸ್ಥಾನ ತಂಡ ಫೈನಲ್‌ ಆಡಿಲ್ಲ, 2016ರಿಂದ ಬೆಂಗಳೂರು ಫೈನಲ್‌ ತಲುಪಿಲ್ಲ.ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳು ಈ ಪಂದ್ಯದಲ್ಲಿ ಪ್ರಾಣಾರ್ಪಣೆ ಮಾಡಲಿವೆ. ರಾಜಸ್ಥಾನ ತನ್ನ ಕೊನೆಯ ಪಂದ್ಯದಲ್ಲಿ ಸೋತಿತ್ತು. ಇಂತಹ ಪರಿಸ್ಥಿತಿಯಲ್ಲಿ ಹಿಂದಿನ ಪಂದ್ಯದ ತಪ್ಪುಗಳಿಂದ ಪಾಠ ಕಲಿತು ಈ ಪಂದ್ಯವನ್ನು ಗೆದ್ದು ಫೈನಲ್ ಪ್ರವೇಶಿಸಲು ಬಯಸುತ್ತಿದೆ. ಹಾಗೆಯೇ ಲಖನೌ ವಿರುದ್ಧ ತೋರಿದ ಅದೇ ಆಟವನ್ನು ಬೆಂಗಳೂರು ಮುಂದುವರಿಸಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ:RCB vs RR Qualifier 2: ಈ ಒಂದು ವಿಕೆಟ್ ಸಿಕ್ಕರೆ RCB ಅರ್ಧ ಪಂದ್ಯ ಗೆದ್ದಂತೆ..!

ಇದನ್ನೂ ಓದಿ
Image
ಆರ್​ಸಿಬಿಯಿಂದ ಅನಿರೀಕ್ಷಿತ ಕರೆ; ಐಪಿಎಲ್​ಗಾಗಿ ತನ್ನ ಮದುವೆಯನ್ನೇ ಮುಂದೂಡಿದ ರಜತ್ ಮ್ಯಾರೇಜ್​ ಸ್ಟೋರಿಯಿದು
Image
RR vs RCB Head to Head Records: ಫೈನಲ್ ರೇಸ್​ನಲ್ಲಿ ಗೆಲುವು ಯಾರಿಗೆ? ಹಿಂದಿನ ಪಂದ್ಯಗಳ ಅಂಕಿಅಂಶ ಹೇಳಿದ ಕಥೆಯಿದು
Image
RR vs RCB Qualifier 2 Live Streaming: ಗೆದ್ದವರಿಗೆ ಫೈನಲ್ ಟಿಕೆಟ್! ಸೋತವರಿಗೆ ಗೇಟ್​ಪಾಸ್; ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ

ಆರ್​ಸಿಬಿಯಲ್ಲಿ ಬದಲಾವಣೆಯಿಲ್ಲ

ಕಳೆದ ಪಂದ್ಯ ಬೆಂಗಳೂರಿಗೆ ಅತ್ಯುತ್ತಮವಾಗಿತ್ತು. ಪ್ರಬಲ ಆಟ ಪ್ರದರ್ಶಿಸಿದ ರಜತ್ ಪಾಟಿದಾರ್ ಶತಕ ಹಾಗೂ ಅಜೇಯ 112 ರನ್ ಗಳಿಸಿದರು. ಪ್ಲೇಆಫ್‌ನಲ್ಲಿ ಅನ್‌ಕ್ಯಾಪ್ ಆಗಿರುವ ಭಾರತೀಯರ ಮೊದಲ ಶತಕ ಇದಾಗಿದೆ. ಬೌಲಿಂಗ್‌ನಲ್ಲೂ ಈ ತಂಡ ಉತ್ತಮ ಪ್ರದರ್ಶನ ನೀಡಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ತಂಡವು ತನ್ನ ಪ್ಲೇಯಿಂಗ್-11 ರಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಕಡಿಮೆ. ತಂಡವು ತನ್ನ ಗೆಲುವಿನ ಸಂಯೋಜನೆಯನ್ನು ಕಾಯ್ದುಕೊಳ್ಳಲು ಬಯಸುತ್ತದೆ.

ಬದಲಾಗಲಿದೆಯೇ ರಾಜಸ್ಥಾನ ತಂಡ?

ರಾಜಸ್ತಾನದ ಕೊನೆಯ ಪಂದ್ಯದಲ್ಲಿ ತಂಡದ ಬೌಲಿಂಗ್ ಪರಿಣಾಮಕಾರಿಯಾಗಿರಲಿಲ್ಲ. ಯುಜುವೇಂದ್ರ ಚಹಾಲ್ ಮತ್ತು ರವಿಚಂದ್ರನ್ ಅಶ್ವಿನ್ ವಿಫಲರಾಗಿದ್ದರು. ಒಬೆಡ್ ಮೆಕಾಯ್ ಕೂಡ ಪರಿಣಾಮಕಾರಿಯಾಗಲಿಲ್ಲ. ಆದರೆ ಈ ತಂಡದಲ್ಲಿ ಬದಲಾವಣೆಯ ಸಾಧ್ಯತೆಗಳು ತೀರ ಕಡಿಮೆ ಎಂದು ತೋರುತ್ತದೆ. ಇದಕ್ಕೂ ಮುನ್ನ ಉತ್ತಮ ಇನ್ನಿಂಗ್ಸ್ ಆಡಿರುವ ಕಾರಣ ತಂಡವು ಯಶಸ್ವಿ ಜೈಸ್ವಾಲ್​ಗೆ ಮತ್ತೊಂದು ಅವಕಾಶ ನೀಡಲಿದೆ.

ಎರಡೂ ತಂಡಗಳ ಸಂಭಾವ್ಯ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್​ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು