RR vs RCB Predicted Playing XI: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

RR vs RCB Predicted Playing XI: 2008ರಿಂದ ರಾಜಸ್ಥಾನ ತಂಡ ಫೈನಲ್‌ ಆಡಿಲ್ಲ, 2016ರಿಂದ ಬೆಂಗಳೂರು ಫೈನಲ್‌ ತಲುಪಿಲ್ಲ.ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳು ಈ ಪಂದ್ಯದಲ್ಲಿ ಪ್ರಾಣಾರ್ಪಣೆ ಮಾಡಲಿವೆ.

RR vs RCB Predicted Playing XI: ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
RR vs RCB
Follow us
| Updated By: Vinay Bhat

Updated on: May 27, 2022 | 7:00 AM

ಐಪಿಎಲ್-2022 (IPL-2022)ರ ಮೊದಲ ಫೈನಲಿಸ್ಟ್ ತಂಡ ಗುಜರಾತ್ ಟೈಟಾನ್ಸ್ (Gujarat Titans) ಆಗಿದ್ದು, ಎರಡನೇ ತಂಡ ಯಾರೆಂಬುದು ಶುಕ್ರವಾರ ನಿರ್ಧಾರವಾಗಲಿದೆ. ಎರಡನೇ ಕ್ವಾಲಿಫೈಯರ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ (Narendra Modi Stadium)ನಲ್ಲಿ ನಡೆಯಲಿದ್ದು, ಇದರಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಭಾನುವಾರದ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫೈಯರ್‌ನಲ್ಲಿ ರಾಜಸ್ಥಾನವನ್ನು ಸೋಲಿಸಿ ಗುಜರಾತ್ ಅಂತಿಮ ಟಿಕೆಟ್ ಕಾಯ್ದಿರಿಸಿತ್ತು. ಗುಜರಾತ್ ಮತ್ತು ರಾಜಸ್ಥಾನ ಲೀಗ್ ಹಂತವನ್ನು ಅಗ್ರಸ್ಥಾನದಲ್ಲಿ ಮುಗಿಸಿದವು. ಆದ್ದರಿಂದ ಈ ಎರಡೂ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವನ್ನು ಆಡಿದವು. ಮೊದಲ ಕ್ವಾಲಿಫೈಯರ್‌ನಲ್ಲಿ ಸೋತ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗುತ್ತದೆ. ಮತ್ತೊಂದೆಡೆ, ಎಲಿಮಿನೇಟರ್‌ನಲ್ಲಿ ಆಡುವ ತಂಡವು ಕ್ವಾಲಿಫೈಯರ್ 2 ರ ಅಡಚಣೆಯನ್ನು ದಾಟಬೇಕು. ಈ ಪಂದ್ಯವು ಇಬ್ಬರಿಗೂ ಫೈನಲ್‌ಗೆ ಪ್ರಮುಖವಾಗಿದೆ. ಆದ್ದರಿಂದ ಎರಡೂ ತಂಡಗಳು ತಮ್ಮ ಅತ್ಯುತ್ತಮ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿಯಬೇಕಿದೆ.

2008ರಿಂದ ರಾಜಸ್ಥಾನ ತಂಡ ಫೈನಲ್‌ ಆಡಿಲ್ಲ, 2016ರಿಂದ ಬೆಂಗಳೂರು ಫೈನಲ್‌ ತಲುಪಿಲ್ಲ.ಇಂತಹ ಪರಿಸ್ಥಿತಿಯಲ್ಲಿ ಎರಡೂ ತಂಡಗಳು ಈ ಪಂದ್ಯದಲ್ಲಿ ಪ್ರಾಣಾರ್ಪಣೆ ಮಾಡಲಿವೆ. ರಾಜಸ್ಥಾನ ತನ್ನ ಕೊನೆಯ ಪಂದ್ಯದಲ್ಲಿ ಸೋತಿತ್ತು. ಇಂತಹ ಪರಿಸ್ಥಿತಿಯಲ್ಲಿ ಹಿಂದಿನ ಪಂದ್ಯದ ತಪ್ಪುಗಳಿಂದ ಪಾಠ ಕಲಿತು ಈ ಪಂದ್ಯವನ್ನು ಗೆದ್ದು ಫೈನಲ್ ಪ್ರವೇಶಿಸಲು ಬಯಸುತ್ತಿದೆ. ಹಾಗೆಯೇ ಲಖನೌ ವಿರುದ್ಧ ತೋರಿದ ಅದೇ ಆಟವನ್ನು ಬೆಂಗಳೂರು ಮುಂದುವರಿಸಲು ಪ್ರಯತ್ನಿಸುತ್ತದೆ.

ಇದನ್ನೂ ಓದಿ:RCB vs RR Qualifier 2: ಈ ಒಂದು ವಿಕೆಟ್ ಸಿಕ್ಕರೆ RCB ಅರ್ಧ ಪಂದ್ಯ ಗೆದ್ದಂತೆ..!

ಇದನ್ನೂ ಓದಿ
Image
ಆರ್​ಸಿಬಿಯಿಂದ ಅನಿರೀಕ್ಷಿತ ಕರೆ; ಐಪಿಎಲ್​ಗಾಗಿ ತನ್ನ ಮದುವೆಯನ್ನೇ ಮುಂದೂಡಿದ ರಜತ್ ಮ್ಯಾರೇಜ್​ ಸ್ಟೋರಿಯಿದು
Image
RR vs RCB Head to Head Records: ಫೈನಲ್ ರೇಸ್​ನಲ್ಲಿ ಗೆಲುವು ಯಾರಿಗೆ? ಹಿಂದಿನ ಪಂದ್ಯಗಳ ಅಂಕಿಅಂಶ ಹೇಳಿದ ಕಥೆಯಿದು
Image
RR vs RCB Qualifier 2 Live Streaming: ಗೆದ್ದವರಿಗೆ ಫೈನಲ್ ಟಿಕೆಟ್! ಸೋತವರಿಗೆ ಗೇಟ್​ಪಾಸ್; ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ

ಆರ್​ಸಿಬಿಯಲ್ಲಿ ಬದಲಾವಣೆಯಿಲ್ಲ

ಕಳೆದ ಪಂದ್ಯ ಬೆಂಗಳೂರಿಗೆ ಅತ್ಯುತ್ತಮವಾಗಿತ್ತು. ಪ್ರಬಲ ಆಟ ಪ್ರದರ್ಶಿಸಿದ ರಜತ್ ಪಾಟಿದಾರ್ ಶತಕ ಹಾಗೂ ಅಜೇಯ 112 ರನ್ ಗಳಿಸಿದರು. ಪ್ಲೇಆಫ್‌ನಲ್ಲಿ ಅನ್‌ಕ್ಯಾಪ್ ಆಗಿರುವ ಭಾರತೀಯರ ಮೊದಲ ಶತಕ ಇದಾಗಿದೆ. ಬೌಲಿಂಗ್‌ನಲ್ಲೂ ಈ ತಂಡ ಉತ್ತಮ ಪ್ರದರ್ಶನ ನೀಡಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ತಂಡವು ತನ್ನ ಪ್ಲೇಯಿಂಗ್-11 ರಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಕಡಿಮೆ. ತಂಡವು ತನ್ನ ಗೆಲುವಿನ ಸಂಯೋಜನೆಯನ್ನು ಕಾಯ್ದುಕೊಳ್ಳಲು ಬಯಸುತ್ತದೆ.

ಬದಲಾಗಲಿದೆಯೇ ರಾಜಸ್ಥಾನ ತಂಡ?

ರಾಜಸ್ತಾನದ ಕೊನೆಯ ಪಂದ್ಯದಲ್ಲಿ ತಂಡದ ಬೌಲಿಂಗ್ ಪರಿಣಾಮಕಾರಿಯಾಗಿರಲಿಲ್ಲ. ಯುಜುವೇಂದ್ರ ಚಹಾಲ್ ಮತ್ತು ರವಿಚಂದ್ರನ್ ಅಶ್ವಿನ್ ವಿಫಲರಾಗಿದ್ದರು. ಒಬೆಡ್ ಮೆಕಾಯ್ ಕೂಡ ಪರಿಣಾಮಕಾರಿಯಾಗಲಿಲ್ಲ. ಆದರೆ ಈ ತಂಡದಲ್ಲಿ ಬದಲಾವಣೆಯ ಸಾಧ್ಯತೆಗಳು ತೀರ ಕಡಿಮೆ ಎಂದು ತೋರುತ್ತದೆ. ಇದಕ್ಕೂ ಮುನ್ನ ಉತ್ತಮ ಇನ್ನಿಂಗ್ಸ್ ಆಡಿರುವ ಕಾರಣ ತಂಡವು ಯಶಸ್ವಿ ಜೈಸ್ವಾಲ್​ಗೆ ಮತ್ತೊಂದು ಅವಕಾಶ ನೀಡಲಿದೆ.

ಎರಡೂ ತಂಡಗಳ ಸಂಭಾವ್ಯ 11

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್​ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ