RR vs RCB Qualifier 2 Live Streaming: ಗೆದ್ದವರಿಗೆ ಫೈನಲ್ ಟಿಕೆಟ್! ಸೋತವರಿಗೆ ಗೇಟ್​ಪಾಸ್; ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ

RR vs RCB Qualifier 2 Live Streaming: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್ ಆಡಲು ಪರವಾನಗಿ ಪಡೆಯುತ್ತದೆ. ಅದೇ ಸಮಯದಲ್ಲಿ, ಸೋತ ತಂಡವು ಮನೆಗೆ ಮರಳಲು ಟಿಕೆಟ್ ಪಡೆಯುತ್ತದೆ.

RR vs RCB Qualifier 2 Live Streaming: ಗೆದ್ದವರಿಗೆ ಫೈನಲ್ ಟಿಕೆಟ್! ಸೋತವರಿಗೆ ಗೇಟ್​ಪಾಸ್; ಪಂದ್ಯದ ಬಗ್ಗೆ ಮಾಹಿತಿ ಹೀಗಿದೆ
RR vs RCB
Follow us
| Updated By: ಪೃಥ್ವಿಶಂಕರ

Updated on: May 26, 2022 | 4:59 PM

ಈಗ ಐಪಿಎಲ್ 2022 (IPL 2022ರಲ್ಲಿ ಕೊನೆಯ 2 ಪಂದ್ಯಗಳು ಮಾತ್ರ ಉಳಿದಿವೆ. ಫೈನಲ್ ಮೇ 29 ರಂದು ನಡೆಯಲಿದ್ದು, ಅದಕ್ಕೂ ಮೊದಲು ಶುಕ್ರವಾರ, 27 ಮೇ, 2ನೇ ಕ್ವಾಲಿಫೈಯರ್ (Qualifier 2) ಪಂದ್ಯ ನಡೆಯಲಿದೆ. ನೀವು ಐಪಿಎಲ್ 2022 ಕ್ವಾಲಿಫೈಯರ್ 2 ಪಂದ್ಯವನ್ನು ಫೈನಲ್‌ಗೆ ಮೊದಲು ಫೈನಲ್ ಎಂದು ಕರೆಯಬಹುದು. ಕಾರಣ ಈ ಪಂದ್ಯದ ಮಹತ್ವ. ಕ್ವಾಲಿಫೈಯರ್ 2 ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಗೆಲ್ಲುವ ತಂಡವು ಫೈನಲ್ ಆಡಲು ಪರವಾನಗಿ ಪಡೆಯುತ್ತದೆ. ಅದೇ ಸಮಯದಲ್ಲಿ, ಸೋತ ತಂಡವು ಮನೆಗೆ ಮರಳಲು ಟಿಕೆಟ್ ಪಡೆಯುತ್ತದೆ. ಅಂದರೆ, ಅಂತಿಮ ಪ್ರಶಸ್ತಿಯನ್ನು ಗೆಲ್ಲಲು ಬಯಸಿದರೆ, ಮೊದಲು ಈ ಪಂದ್ಯವನ್ನು ಗೆಲ್ಲಬೇಕಿದೆ. ಹಾಗಾಗಿ ಫೈನಲ್​ಗೂ ಮುನ್ನವೇ ಫೈನಲ್ ಎಂದು ಹೇಳಲಾಗುತ್ತಿದೆ.

ಐಪಿಎಲ್ 2022ರ ಪ್ಲೇಆಫ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನ ಗಳಿಸಿತು. ಕ್ವಾಲಿಫೈಯರ್ ಒಂದರಲ್ಲಿ, ಅವರು ಅಗ್ರ ತಂಡ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಿದರು, ಅದರಲ್ಲಿ ಸೋಲನುಭವಿಸಬೇಕಾಯ್ತು. ಅದೇ ಸಮಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸವಾಲನ್ನು ಕೊನೆಗೊಳಿಸಿತು. ಈ ಎರಡೂ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದವು. ಈಗ ಕ್ವಾಲಿಫೈಯರ್ ಎರಡರಲ್ಲಿ ಎಲಿಮಿನೇಟರ್ ಗೆದ್ದ RCB, ಕ್ವಾಲಿಫೈಯರ್ ಒಂದನ್ನು ಕಳೆದುಕೊಂಡಿರುವ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ. ಇದರಲ್ಲಿ ಗೆದ್ದವರು ಗುಜರಾತ್ ಟೈಟಾನ್ಸ್ ಅನ್ನು ಮೇ 29 ರಂದು ಅಹಮದಾಬಾದ್‌ನಲ್ಲಿಯೇ ಎದುರಿಸಲಿದ್ದಾರೆ.

ಇದನ್ನೂ ಓದಿ:RCB vs RR, IPL 2022: 7 ವರ್ಷಗಳ ನಂತರ ಕ್ವಾಲಿಫೈಯರ್​ 2ಗೆ ಆರ್​ಸಿಬಿ! 2011ರ ಇತಿಹಾಸ ಮರುಕಳಿಸುತ್ತಾ?

ಇದನ್ನೂ ಓದಿ
Image
IPL 2022: ಲಕ್ನೋ ಸೋಲಿಗೆ ನಾಯಕ ರಾಹುಲ್ ಕಾರಣ ಎಂದ ಸಂಜಯ್ ಮಂಜ್ರೇಕರ್- ರವಿಶಾಸ್ತ್ರೀ..!
Image
ICC Test Rankings: ನಂ.1 ಸ್ಥಾನ ಉಳಿಸಿಕೊಂಡ ರವೀಂದ್ರ ಜಡೇಜಾ! ಕೊಹ್ಲಿ-ರೋಹಿತ್ ಸ್ಥಾನ ಯಾವುದು?
Image
RCB vs RR, IPL 2022: 7 ವರ್ಷಗಳ ನಂತರ ಕ್ವಾಲಿಫೈಯರ್​ 2ಗೆ ಆರ್​ಸಿಬಿ! 2011ರ ಇತಿಹಾಸ ಮರುಕಳಿಸುತ್ತಾ?

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಯಾವಾಗ ನಡೆಯಲಿದೆ? ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಶುಕ್ರವಾರ ಮೇ 27 ರಂದು ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಈ ಪಂದ್ಯ ನಡೆಯಲಿದೆ.

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು? ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಚಂದಾದಾರಿಕೆಯೊಂದಿಗೆ Disney+Hotstar ನಲ್ಲಿ ನೋಡಬಹುದು.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ