AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…

RR vs RCB Qualifier 2: ಈ ಬಾರಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ದ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್​ ಕಲೆಹಾಕಿತು. ಇಲ್ಲಿ ಆರ್​ಸಿಬಿ ಬೌಲರ್​ಗಳು ಪಡೆದಿರುವುದು ಕೇವಲ 3 ವಿಕೆಟ್​ಗಳನ್ನು ಮಾತ್ರ.

RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ...
RR vs RCB Qualifier 2
TV9 Web
| Updated By: ಝಾಹಿರ್ ಯೂಸುಫ್|

Updated on: May 26, 2022 | 6:35 PM

Share

IPL 2022: ಐಪಿಎಲ್ ಸೀಸನ್​ 15 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಉಳಿದಿರುವುದು ಕೇವಲ 2 ಪಂದ್ಯ ಮಾತ್ರ. ಈಗಾಗಲೇ ಫೈನಲ್​ಗೆ ತಲುಪಿರುವ ಗುಜರಾತ್ ಟೈಟಾನ್ಸ್ (GT)​ ಅಂತಿಮ ಎದುರಾಳಿಯನ್ನು ಎದುರು ನೋಡುತ್ತಿದೆ. ಈ ಎದುರಾಳಿ ಯಾರು ಎಂಬುದು ಶುಕ್ರವಾರ ನಿರ್ಧಾರವಾಗಲಿದೆ. ಏಕೆಂದರೆ ಐಪಿಎಲ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ (RR vs RCB) ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ವಿಶೇಷ ಎಂದರೆ ಈ ಬಾರಿ ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ನಡೆಸಿದ್ದರೂ, ಆರ್​ಸಿಬಿ ತಂಡವು ಗ್ರೂಪ್​-ಎ ನಲ್ಲಿದ್ದ ರಾಜಸ್ಥಾನ್ ರಾಯಲ್ಸ್ ವಿರುದ್ದ 2 ಪಂದ್ಯವಾಡಿತ್ತು. ಅಂದರೆ ಗ್ರೂಪ್ ಎ ಮತ್ತು ಗ್ರೂಪ್ ಬಿ ನಡುವೆ ಒಂದು ತಂಡದ ವಿರುದ್ದ 2 ಪಂದ್ಯವಾಡಬೇಕಿತ್ತು. ಹೀಗೆ ಆರ್​ಸಿಬಿ ತಂಡಕ್ಕೆ ಎದುರಾಳಿಯಾಗಿ ಸಿಕ್ಕಿದ ರಾಜಸ್ಥಾನ್ ರಾಯಲ್ಸ್ ತಂಡವೇ ಇದೀಗ ಮೂರನೇ ಬಾರಿಗೆ ಎದುರಾಗಿದೆ.

ಇಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ. ಏಕೆಂದರೆ ಪ್ಲೇಆಫ್​ ಆಡಬೇಕಿದ್ದರೆ ಆ ತಂಡಗಳು ಬಲಿಷ್ಠ ಆಗಿರಲೇಬೇಕು. ಇದಾಗ್ಯೂ ಐಪಿಎಲ್ ಇತಿಹಾಸ ಅಂಕಿ ಅಂಶಗಳನ್ನು ಗಮನಿಸಿದರೆ ಆರ್​ಸಿಬಿ ರಾಜಸ್ಥಾನ್ ವಿರುದ್ದ ಮೇಲುಗೈ ಹೊಂದಿದೆ. ಅಂದರೆ ಉಭಯ ತಂಡಗಳು ಆಡಿರುವ 27 ಪಂದ್ಯಗಳಲ್ಲಿ ಆರ್​ಸಿಬಿ 13 ಬಾರಿ ಗೆದ್ದಿದೆ. ಇನ್ನು ರಾಜಸ್ಥಾನ್ ರಾಯಲ್ಸ್ 11 ಬಾರಿ ಜಯ ಸಾಧಿಸಿದೆ. ಇದು ಹಳೆಯ ಅಂಕಿ ಅಂಶಗಳಾದರೆ, ಇತ್ತೀಚಿನ ಅಂಕಿ ಅಂಶದಲ್ಲೂ ಆರ್​ಸಿಬಿ ತಂಡವೇ ಮುಂದಿದೆ.

ಅಂದರೆ ಕಳೆದ ಸೀಸನ್ ಹಾಗೂ ಈ ಸೀಸನ್​ನಲ್ಲಿನ ಅಂಕಿ ಅಂಶ ತೆಗೆದುಕೊಂಡರೆ, 4 ಪಂದ್ಯಗಳಲ್ಲಿ ಆರ್​ಸಿಬಿ ತಂಡ 3 ಬಾರಿ ಗೆದ್ದಿದೆ. 2021 ರ ಸೀಸನ್​ನಲ್ಲಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ದ 2 ಪಂದ್ಯಗಳನ್ನು ಗೆದ್ದುಕೊಂಡರೆ, ಈ ಬಾರಿ ಆಡಿದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಆದರೆ ಈ ಗೆಲುವು ಭರ್ಜರಿ ಗೆಲುವಾಗಿರಲಿಲ್ಲ ಎಂಬುದು ವಿಶೇಷ. ಅಂದರೆ ಇಲ್ಲಿ ಅಂಕಿ ಅಂಶಗಳ ಪ್ರಕಾರ ಆರ್​ಸಿಬಿ ಬಲಿಷ್ಠವಾಗಿದ್ದರೂ ರಾಜಸ್ಥಾನ್ ರಾಯಲ್ಸ್ ಉತ್ತಮ ಪೈಪೋಟಿ ನೀಡಿರುವುದು ಸ್ಪಷ್ಟ.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಏಕೆಂದರೆ ಈ ಬಾರಿಯ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ದ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್​ ಕಲೆಹಾಕಿತು. ಇಲ್ಲಿ ಆರ್​ಸಿಬಿ ಬೌಲರ್​ಗಳು ಪಡೆದಿರುವುದು ಕೇವಲ 3 ವಿಕೆಟ್​ಗಳನ್ನು ಮಾತ್ರ ಎಂಬುದು ಉಲ್ಲೇಖಾರ್ಹ. ಇನ್ನು 170 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ಗೆಲುವು ದಾಖಲಿಸಿದ್ದು ಕೊನೆಯ ಓವರ್​ನಲ್ಲಿ. ಅದು ಕೂಡ ಶಹಬಾಜ್ ಅಹ್ಮದ್ ಹಾಗೂ ದಿನೇಶ್ ಕಾರ್ತಿಕ್ ಅವರ ಎಚ್ಚರಿಕೆಯ ಆಟದಿಂದ ಎಂಬುದು ವಿಶೇಷ. ಅಂದರೆ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಆರ್​ಸಿಬಿ ತಂಡದ ಪ್ರಮುಖ ಬ್ಯಾಟ್ಸ್​ಮನ್​ಗಳು ವಿಫಲರಾಗಿದ್ದರು. ಇದಾಗ್ಯ 6 ವಿಕೆಟ್ ಕಳೆದುಕೊಂಡು ಆರ್​ಸಿಬಿ 4 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

ಇನ್ನು 2ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ದ ರಾಜಸ್ಥಾನ್ ರಾಯಲ್ಸ್​ ಸಾಧಿಸಿತ್ತು. ಈ ಪಂದ್ಯದಲ್ಲಿ ಉತ್ತಮ ಬೌಲಿಂಗ್ ನಡೆಸಿದ್ದ ಆರ್​ಸಿಬಿ ಬೌಲರ್​ಗಳು ರಾಜಸ್ಥಾನ್ ತಂಡವನ್ನು ಕೇವಲ 144 ರನ್​ಗಳಿಗೆ ನಿಯಂತ್ರಿಸಿದ್ದರು. 145 ರನ್​ಗಳ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿಯನ್ನು ಅತ್ಯುತ್ತಮ ಬೌಲಿಂಗ್ ಮೂಲಕ ನಿಯಂತ್ರಿಸುವಲ್ಲಿ ರಾಜಸ್ಥಾನ್ ರಾಯಲ್ಸ್ ಯಶಸ್ವಿಯಾಗಿತ್ತು. ಅಂದರೆ ಸುಲಭ ಗುರಿಯನ್ನು ಬೆನ್ನಟ್ಟಿದ ಆರ್​ಸಿಬಿ 115 ರನ್​ಗಳಿಗೆ ಆಲೌಟ್​ ಆಗುವ ಮೂಲಕ 29 ರನ್​ಗಳಿಂದ ಸೋಲನುಭವಿಸಿತ್ತು.

ಅಂದರೆ ಇಲ್ಲಿ ಆರ್​ಸಿಬಿ ವಿರುದ್ದದ ಕೊನೆಯ ಪಂದ್ಯದಲ್ಲಿ ಪರಾಕ್ರಮ ಮೆರೆದಿದ್ದ ರಾಜಸ್ಥಾನ್ ರಾಯಲ್ಸ್​ ಇದೀಗ ಅದೇ ಆತ್ಮ ವಿಶ್ವಾಸದಲ್ಲಿದ್ದಾರೆ. ಅದರಲ್ಲೂ ಆರ್​ಸಿಬಿ ವಿರುದ್ದ ಈ ಬಾರಿ ಆಡಿದ 2 ಪಂದ್ಯಗಳಲ್ಲೂ ರಾಜಸ್ಥಾನ್ ರಾಯಲ್ಸ್ ಉತ್ತಮ ಪ್ರದರ್ಶನವನ್ನೇ ನೀಡಿದೆ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಈ ಆರ್​ಸಿಬಿ ಬಲಿಷ್ಠವಾಗಿ ಕಂಡರೂ, ಪ್ರಸ್ತುತ ತಂಡಗಳ ಪ್ರದರ್ಶನವನ್ನು ಲೆಕ್ಕಕ್ಕೆ ತೆಗೆದುಕೊಂಡರೆ ಆರ್​ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್​ ತಂಡದಿಂದ ಕಠಿಣ ಪೈಪೋಟಿ ಎದುರಾಗುವುದು ಖಚಿತ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್