AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: 3ನೇ ಏಕದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?

ಇಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಹಾಗಾದ್ರೆ ಇಂಡೋ-ಆಫ್ರಿಕಾ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?, ಭಾರತ ತಂಡ ಹೇಗಿದೆ? ಎಂಬ ಬಗೆಗಿನ ಮಾಹಿತಿಯನ್ನು ಇಲ್ಲಿದೆ.

India vs South Africa: 3ನೇ ಏಕದಿನ ಪಂದ್ಯ ಎಲ್ಲಿ?, ಎಷ್ಟು ಗಂಟೆಗೆ ಆರಂಭ?, ಯಾವುದರಲ್ಲಿ ನೇರಪ್ರಸಾರ?
SA vs IND 3rd ODI
TV9 Web
| Edited By: |

Updated on: Jan 23, 2022 | 10:31 AM

Share

ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಮೊದಲ ಎರಡೂ ಏಕದಿನ ಪಂದ್ಯಗಳಲ್ಲಿ ಸೋಲು ಕಂಡ ಭಾರತ (India) ಸರಣಿಯನ್ನು ಕಳೆದುಕೊಂಡಾಗಿದೆ. ಉಳಿದಿರುವುದು ಒಂದು ಪಂದ್ಯ. ಅದು ಇಂದು ಆಯೋಜಿಸಲಾಗಿದೆ. ದಕ್ಷಿಣ ಆಫ್ರಿಕಾ ಕ್ಲೀನ್​ಸ್ವೀಪ್ ಮಾಡುವತ್ತ ಚಿತ್ತ ನೆಟ್ಟದ್ದರೆ ಇತ್ತ ಟೀಮ್ ಇಂಡಿಯಾ ವೈಟ್​ವಾಷ್​ನಿಂದ ಪಾರಾಗಿ ಕೊನೇ ಪಂದ್ಯವನ್ನಾದರು ಗೆದ್ದು ಮಾನ ಉಳಿಸಿಕೊಳ್ಳುವ ಪ್ಲಾನ್​ನಲ್ಲಿದೆ. ಭಾರತದ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬರುತ್ತಿಲ್ಲ. ಬ್ಯಾಟರ್​ಗಳು ಮಧ್ಯಮ ಕ್ರಮಾಂಕದಲ್ಲಿ ವೈಫಲ್ಯ ಅನುಭವಿಸುತ್ತಿದ್ದರೆ, ಇತ್ತ ಬೌಲರ್​ಗಳು ಮಧ್ಯಮ ಓವರ್​ಗಳಲ್ಲಿ ವಿಕೆಟ್ ಕೀಳಲು ಪರದಾಡುತ್ತಿದ್ದಾರೆ. ಈ ಹಿಂದಿನ ಎರಡೂ ಪಂದ್ಯ ಸೋಲಲು ಇದೇ ಕಾರಣ. ಆಫ್ರಿಕಾ ಬ್ಯಾಟರ್​ಗಳನ್ನು ಪೆವಿಲಿಯನ್​ಗೆ ಅಟ್ಟಲು ಹರಸಾಹಸ ನಡೆಸಿದರೂ ಅದು ಸಾಧ್ಯವಾಗಲಿಲ್ಲ. ಇಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಹಾಗಾದ್ರೆ ಇಂಡೋ-ಆಫ್ರಿಕಾ ಮೂರನೇ ಏಕದಿನ ಪಂದ್ಯ ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?, ಭಾರತ ತಂಡ ಹೇಗಿದೆ? ಎಂಬ ಬಗೆಗಿನ ಮಾಹಿತಿಯನ್ನು ಇಲ್ಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಏಕದಿನ ಪಂದ್ಯ ಜನವರಿ 23 ರಂದು ನಡೆಯಲಿದೆ.

ಈ ಪಂದ್ಯ ಕೇಪ್​ಟೌನ್​ನ ನ್ಯೂಲೆಂಡ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ.

ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ಮಧ್ಯಾಹ್ನ 2 ಗಂಟೆಗೆ ಶುರುವಾಗಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಎರಡನೇ ಏಕದಿನ ಪಂದ್ಯ ಸ್ಟಾರ್ ಸ್ಫೋರ್ಟ್ಸ್​ ನೆಟ್​ವರ್ಕ್​​ನಲ್ಲಿ ನೇರಪ್ರಸಾರ ಕಾಣಲಿದೆ. ಡಿಸ್ನಿ+ ಹಾಟ್​ಸ್ಟಾರ್​ನಲ್ಲೂ ಲೈವ್ ಸ್ಟ್ರೀಮ್ ಆಗಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-2 ಅಂತರದಲ್ಲಿ ಸೋಲು ಅನುಭವಿಸಿದ್ದ ಭಾರತ ತಂಡ ಅಷ್ಟೇ ಪಂದ್ಯಗಳ ಏಕದಿನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳುವ ಯೋಜನೆ ರೂಪಿಸಿಕೊಂಡಿತ್ತು. ಆದರೆ ಮೊದಲನೇ ಪಂದ್ಯದಲ್ಲಿ 31 ರನ್‌ನಿಂದ ಸೋಲು ಅನುಭವಿಸಿದ್ದ ಟೀಮ್‌ ಇಂಡಿಯಾ, ಎರಡನೇ ಓಡಿಐನಲ್ಲಿಯೂ 7 ವಿಕೆಟ್‌ಗಳಿಂದ ಸೋಲಿಗೆ ಶರಣಾಗಿತ್ತು. ಆ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ.

ಟೀಮ್ ಇಂಡಿಯಾ ಮೂರನೇ ಏಕದಿನ ಪಂದ್ಯಕ್ಕೆ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬದಲಾವಣೆ ಮಾಡುವುದು ಬಹುತೇಕ ಖಚಿತವಾಗಿದೆ. ಭಾರತ ಪರ ಓಪನರ್​ಗಳಾಗಿ ಶಿಖರ್ ಧವನ್ ಜೊತೆ ಕೆಎಲ್ ರಾಹುಲ್ ಕಣಕ್ಕಿಳಿಯುವುದು ಅನುಮಾನ. ಯಾಕಂದ್ರೆ ರಾಹುಲ್ ಏಕದಿನ ಕ್ರಿಕೆಟ್​ನ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಇವರು 5ನೇ ಸ್ಥಾನದಲ್ಲಿ ಆಡುವ ಸಾಧ್ಯತೆ ಇದೆ. ಇತ್ತ ಅವಕಾಶಕ್ಕಾಗಿ ಕಾಯುತ್ತಿರುವ ರುತುರಾಜ್ ಗಾಯಕ್ವಾಡ್​ಗೆ ಸ್ಥಾನ ನೀಡಿ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

ಸ್ಪಿನ್ನರ್​ಗಳು ಕೂಡ ಈ ಪಿಚ್​ನಲ್ಲಿ ವಿಕೆಟ್ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಮುಖವಾಗಿ ಆರ್. ಅಶ್ವಿನ್ ಕೈಚಳಕ ನಡೆಯುತ್ತಿಲ್ಲ. ಹೀಗಾಗಿ ಇವರ ಜಾಗದಲ್ಲಿ ಆಲ್ರೌಂಡರ್ ಜಯಂತ್ ಯಾದವ್ ಅವರನ್ನು ನಿರೀಕ್ಷಿಸಲಾಗಿದೆ. ಯುಜ್ವೇಂದ್ರ ಚಹಾಲ್​ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಶಾರ್ದೂಲ್ ಥಾಕೂರ್ ಬೌಲಿಂಗ್‌ನಲ್ಲಿ ದುಬಾರಿಯಾಗಿದ್ದರೂ ಬ್ಯಾಟಿಂಗ್​ನಲ್ಲಿ ನೆರವು ನೀಡುತ್ತಿದ್ದಾರೆ. ಇನ್ನು ಭುವನೇಶ್ವರ್ ಕುಮಾರ್​​ ಸ್ಥಾನ ಕಳೆದುಕೊಳ್ಳುವುದು ಖಚಿತ. ಇವರ ಜಾಗಕ್ಕೆ ದೀಪಕ್ ಚಹರ್ ಅಥವಾ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವ ಸಾಧ್ಯತೆ ಇದೆ.

South Africa vs India: 3ನೇ ಏಕದಿನಕ್ಕೆ ಮೂರು ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

U19 World cup: ದಾಖಲೆ ಬರೆದ ರಾಜ್ ಬಾವಾ: ಭಾರತಕ್ಕೆ 326 ರನ್​ಗಳ ಗೆಲುವು, ಕಲೆಹಾಕಿದ ರನ್​ ಎಷ್ಟು ಗೊತ್ತೇ?

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ