AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa vs India ODI: ನಾಳೆ ಮೊದಲ ಏಕದಿನ: ಟೀಮ್ ಇಂಡಿಯಾ ಪರ ಪದಾರ್ಪಣೆಗೆ ಸಜ್ಜಾದ ಈ ಆಟಗಾರ

India vs South Africa 1st ODI: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಭಾರತ ಪರ ಇಬ್ಬರು ಅಥವಾ ಓರ್ವ ಆಟಗಾರ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

South Africa vs India ODI: ನಾಳೆ ಮೊದಲ ಏಕದಿನ: ಟೀಮ್ ಇಂಡಿಯಾ ಪರ ಪದಾರ್ಪಣೆಗೆ ಸಜ್ಜಾದ ಈ ಆಟಗಾರ
india vs south africa Second ODI
TV9 Web
| Edited By: |

Updated on: Jan 18, 2022 | 11:23 AM

Share

ನಾಳೆ (ಜ. 19) ಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದ್ದು, ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆಎಲ್ ರಾಹುಲ್ (KL Rahul) ಮುನ್ನಡೆಸುತ್ತಿದ್ದಾರೆ. ಜಸ್​ಪ್ರೀತ್ ಬುಮ್ರಾ ಉಪ ನಾಯಕನಾಗಿದ್ದಾರೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ಸರಣಿಯನ್ನು ಮುನ್ನಡೆಸುತ್ತಿರುವ ರಾಹುಲ್ ಅಭ್ಯಾಸದ ವೇಳೆ ತಮ್ಮ ಸಹ ಆಟಗಾರರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿ ಗೇಮ್ ಪ್ಲಾನ್ ರೂಪಿಸುತ್ತಿದ್ದಾರೆ. ಐಪಿಎಲ್ ಸೇರಿದಂತೆ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಗಮನಸೆಳೆದಿರುವ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಹಾಗೂ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2017ರ ಬಳಿಕ ಮೊದಲ ಬಾರಿಗೆ ಭಾರತ ಏಕದಿನ ತಂಡಕ್ಕೆ ವಾಪಸಾಗಿದ್ದಾರೆ. ಹೀಗೆ ಭಾರತ ತಂಡ ಬಲಿಷ್ಠವಾಗಿದ್ದು, ಯಾವರೀತಿ ಪ್ರದರ್ಶನ ತೋರಲಿದೆ ಎಂಬುದು ಕುತೂಹಲ ಕೆರಳಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಭಾರತ ಪರ ಇಬ್ಬರು ಅಥವಾ ಓರ್ವ ಆಟಗಾರ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಅವರೇ ವೆಂಕಟೇಶ್ ಅಯ್ಯರ್ ಮತ್ತು ರುತುರಾಜ್ ಗಾಯಕ್ವಾಡ್. ಕೆಎಲ್ ರಾಹುಲ್ ಜೊತೆ ಅನುಭವಿ ಓಪನರ್ ಶಿಖರ್ ಧವನ್ ಇರುವ ಕಾರಣ ಗಾಯಕ್ವಾಡ್​ಗೆ ಸ್ಥಾನ ಅನುಮಾನ. ಆದರೆ, ವೆಂಕಟೇಶ್ ಅಯ್ಯರ್​ಗೆ ಸ್ಥಾನ ಖಚಿತವಾಗಿದೆ. ಇವರು ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿ ಆಲ್ರೌಂಡರ್ ಜವಾಬ್ದಾರಿ ಹೊರಲಿದ್ದಾರೆ.

ಅಶ್ವಿನ್​ಗೆ ಸ್ಥಾನ?:

ಸ್ಪಿನ್ನರ್​ಗಳ ಸಾಲಿನಲ್ಲಿ ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್ ಮತ್ತು ಜಯಂತ್ ಯಾದವ್ ಸ್ಥಾನ ಪಡೆದುಕೊಂಡಿದ್ದಾರೆ. ಚಹಾಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವಾಗಿದೆ. ಆದರೆ, ಅನುಭವದ ಆಧಾರದ ಮೇಲೆ ಅಶ್ವಿನ್​ರನ್ನು ಆಡಿಸುತ್ತಾರೋ ಅಥವಾ ಆಲ್ರೌಂಡರ್ ಆಗಿರುವ ಜಯಂತ್​ಗೆ ಸ್ಥಾನ ನೀಡ್ತಾರ ಎಂಬುದು ನೋಡಬೇಕಿದೆ.

ಪಂತ್-ಕಿಶನ್:

ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ಪೈಕಿ ಯಾರಿಗೆ ಸ್ಥಾನ ಎಂಬುದು ಮ್ಯಾನೇಜ್ಮೆಂಟ್​ಗೆ ದೊಡ್ಡ ತಲೆನೋವಾಗಿದೆ. ಇಬ್ಬರೂ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಅವರನ್ನು ಆಡಿಸುವುದೋ ಅಥವಾ ಶ್ರೇಯಸ್ ಅಯ್ಯರ್​ಗೆ ಸ್ಥಾನ ನೀಡಬೇಕಾ ಎಂಬ ಗೊಂದಲದಲ್ಲಿ ಕೋಚ್ ಹಾಗೂ ನಾಯಕನಿದ್ದಾರೆ.

ಸಿರಾಜ್ ಫಿಟ್:

ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ವೇಳೆ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದರಿಂದಾಗಿ ಮೂರನೇ ಟೆಸ್ಟ್​ಗೆ ಅಲಭ್ಯರಾಗಿದ್ದರು. ಅಲ್ಲದೆ ಸಿರಾಜ್ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೀಸಲು ಆಟಗಾರನಾಗಿ ವೇಗದ ಬೌಲರ್ ನವದೀಪ್ ಸೈನಿ ಏಕದಿನ ತಂಡಕ್ಕೆ ಬಿಸಿಸಿಐ ಹೆಸರಿಸಿತ್ತು. ಆದರೀಗ ಸಿರಾಜ್ ಸಂಪೂರ್ಣ ಗುಣಮುಖರಾಗಿದ್ದು, ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಬುಮ್ರಾ ಮಾಹಿತಿ ನೀಡಿದ್ದಾರೆ.

ಏಕದಿನ ಸರಣಿಗೆ ಭಾರತ ತಂಡ:

ಕೆ.ಎಲ್.ರಾಹುಲ್ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪ-ನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಯುಜ್ವೇಂದ್ರ ಚಹಾಲ್, ಆರ್. ಅಶ್ವಿನ್, ಭುವನೇಶ್ವರ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್ ಹಾಗೂ ನವದೀಪ್ ಸೈನಿ.

South Africa vs India: ಏಕದಿನ ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಗುಡ್ ನ್ಯೂಸ್: ಸ್ಟಾರ್ ಆಟಗಾರ ಕಮ್​ಬ್ಯಾಕ್

Beijing Winter Olympic: ಬೀಜಿಂಗ್ ಚಳಿಗಾಲದ ಒಲಿಂಪಿಕ್ಸ್‌: ವೀಕ್ಷಕರಿಗಿಲ್ಲ ಅವಕಾಶ, ಟಿಕೆಟ್ ಮಾರಾಟ ನಿಷೇಧ

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ