AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs IND: 4 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ಅನುಭವಿ ಬೌಲರ್..?

India vs South Africa: ತಂಡದಲ್ಲಿ ಆಲ್​ರೌಂಡರ್ ಸ್ಪಿನ್ನರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಯುಜ್ವೇಂದ್ರ ಚಹಲ್ ಅವರನ್ನು ಎದುರಿಸಲಿದ್ದಾರೆ.

SA vs IND: 4 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ಅನುಭವಿ ಬೌಲರ್..?
Team India
TV9 Web
| Updated By: ಝಾಹಿರ್ ಯೂಸುಫ್|

Updated on: Dec 26, 2021 | 5:01 PM

Share

ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಟೀಮ್ ಇಂಡಿಯಾ ಏಕದಿನ ಸರಣಿಯನ್ನೂ ಸಹ ಆಡಲಿದೆ. ಆದರೆ ಈ ಸರಣಿಗಾಗಿ ಭಾರತ ಏಕದಿನ ತಂಡ ಇನ್ನೂ ಕೂಡ ಘೋಷಣೆಯಾಗಿಲ್ಲ ಎಂಬುದು ವಿಶೇಷ. ಇದೇ ಕಾರಣದಿಂದ ಸೌತ್ ಆಫ್ರಿಕಾ ವಿರುದ್ದದ ಏಕದಿನ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಮತ್ತೊಂದೆಡೆ ಈ ಸರಣಿಯೊಂದಿಗೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಂಬ್ಯಾಕ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

2021 ರ ಟಿ20 ವಿಶ್ವಕಪ್​ಗೆ ನಾಲ್ಕು ವರ್ಷಗಳ ಬಳಿಕ ಅಶ್ವಿನ್ ಮರಳಿದ್ದರು. ಇದೀಗ ಏಕದಿನ ತಂಡಕ್ಕೂ ಮರಳುವ ವಿಶ್ವಾಸದಲ್ಲಿದ್ದಾರೆ. ಅಶ್ವಿನ್ 2017 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನೂ ಆಡಿದ್ದರು. ಇದೀಗ ಮತ್ತೆ ತಂಡದಲ್ಲಿ ಹಿರಿಯ ಆಟಗಾರನಿಗೆ ಅವಕಾಶ ನೀಡುವ ಬಗ್ಗೆ ಚೇತನ್ ಶರ್ಮಾ ಅವರ ಆಯ್ಕೆ ಸಮಿತಿ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ತಂಡದಲ್ಲಿ ಅಶ್ವಿನ್ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ಆದರೆ ಮತ್ತೊಂದೆಡೆ ತಂಡದಲ್ಲಿ ಆಲ್​ರೌಂಡರ್ ಸ್ಪಿನ್ನರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಯುಜ್ವೇಂದ್ರ ಚಹಲ್ ಅವರನ್ನು ಎದುರಿಸಲಿದ್ದಾರೆ. ಆದರೆ ಈ ಇಬ್ಬರು ಆಟಗಾರರು ಗಾಯಗೊಂಡಿರುವ ಕಾರಣ ಏಕದಿನ ಸರಣಿಗೆ ಲಭ್ಯರಿದ್ದಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ. ಹೀಗಾಗಿ ಅಶ್ವಿನ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಆಯ್ಕೆ ಸಮಿತಿ ಸದಸ್ಯ ಚೇತನ್ ಶರ್ಮಾ, ಅಶ್ವಿನ್ ಅವರನ್ನು ಪವರ್‌ಪ್ಲೇ ಅಥವಾ ಮಧ್ಯಮ ಓವರ್‌ಗಳಲ್ಲಿ ಬಳಸಬಹುದು ಎಂದಿದ್ದಾರೆ. ಅಷ್ಟೇ ಅಲ್ಲದೆ ಯಾವುದೇ ಸಮಯದಲ್ಲಿ, ಯಾವುದೇ ಪರಿಸ್ಥಿತಿಯಲ್ಲಿ ಬೌಲ್ ಮಾಡುವ ಆಲ್ ರೌಂಡರ್ ಅನುಭವ ಹೊಂದಿರುವ ಬೌಲರ್ ಅನ್ನು ಆಯ್ಕೆ ಮಾಡುವುದು ಮುಖ್ಯ ಎಂದು ತಿಳಿಸಿದ್ದರು. ಇಲ್ಲಿ ಅಶ್ವಿನ್ ಅವರ ಹೆಸರನ್ನು ಉಲ್ಲೇಖಿಸಿರುವುದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್