AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shardul Thakur: 7 ವಿಕೆಟ್​ ಉರುಳಿಸಿ 7 ದಾಖಲೆ ಬರೆದ ಶಾರ್ದೂಲ್ ಠಾಕೂರ್..!

India vs South Africa 2nd Test: ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಪಂದ್ಯದಲ್ಲಿ 7 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ದಾಖಲೆ ಕೂಡ ಶಾರ್ದೂಲ್ ಠಾಕೂರ್ ಪಾಲಾಗಿದೆ. ಈ ಹಿಂದೆ ಅಶ್ವಿನ್ ಹಾಗೂ ಹರ್ಭಜನ್ ಸಿಂಗ್ ಈ ಸಾಧನೆ ಮಾಡಿದ್ದರು.

Shardul Thakur: 7 ವಿಕೆಟ್​ ಉರುಳಿಸಿ 7 ದಾಖಲೆ ಬರೆದ ಶಾರ್ದೂಲ್ ಠಾಕೂರ್..!
Shardul Thakur
TV9 Web
| Edited By: |

Updated on: Jan 04, 2022 | 8:57 PM

Share

ಭಾರತ-ದಕ್ಷಿಣ ಆಫ್ರಿಕಾ (India vs South Africa) ನಡುವಣ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ವೇಗಿ ಶಾರ್ದೂಲ್ ಠಾಕೂರ್ (Shardul Thakur)  7 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನೀಡಿದ 202 ರನ್​ಗಳಿಗೆ ಉತ್ತರವಾಗಿ ಇನಿಂಗ್ಸ್​ ಆರಂಭಿಸಿದ ದಕ್ಷಿಣ ಆಫ್ರಿಕಾ 2ನೇ ದಿನದಾಟವನ್ನು ಉತ್ತಮವಾಗಿ ಆರಂಭಿಸಿತ್ತು. ನಾಯಕ ಡೀನ್ ಎಲ್ಗರ್ ಹಾಗೂ ಕೀಗನ್ ಪೀಟರ್ಸನ್ 2ನೇ ವಿಕೆಟ್​ಗೆ ಅರ್ಧಶತಕದ ಜೊತೆಯಾಟವಾಡಿದ್ದರು. ಆದರೆ ಈ ವೇಳೆ ದಾಳಿಗಿಳಿದ ಶಾರ್ದೂಲ್ ಠಾಕೂರ್ ಬ್ಯಾಕ್ ಟು ಬ್ಯಾಕ್ ಮೂರು ವಿಕೆಟ್ ಪಡೆಯುವ ಮೂಲಕ ಸೌತ್​ ಆಫ್ರಿಕಾಗೆ ಶಾಕ್ ನೀಡಿದ್ದರು. ಅಲ್ಲದೆ 60 ಎಸೆತಗಳಲ್ಲಿ ಬಿರುಸಿನ 51 ರನ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ತೆಂಬ ಬವುಮಾ ಅವರನ್ನು ಔಟ್ ಮಾಡುವ ಮೂಲಕ ಶಾರ್ದೂಲ್ ಠಾಕೂರ್ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಬಾರಿಗೆ ಐದು ವಿಕೆಟ್ ಪಡೆದ ಸಾಧನೆ ಮಾಡಿದರು. 17.5 ಓವರ್‌ಗಳನ್ನು ಬೌಲ್ ಮಾಡಿದ ಶಾರ್ದೂಲ್ ಅಂತಿಮವಾಗಿ ಕೇವಲ 61 ರನ್​ ನೀಡಿ 7 ವಿಕೆಟ್ ಕಬಳಿಸಿದರು.

ಈ ಮೂಲಕ ಜೋಹಾನ್ಸ್​ಬರ್ಗ್​ನ ಮೈದಾನದಲ್ಲಿ ಐದು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ 6ನೇ ಬೌಲರ್ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಪಿಚ್​ನಲ್ಲಿ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್, ಶ್ರೀಶಾಂತ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಕಬಳಿಸಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ಶಾರ್ದೂಲ್ ಠಾಕೂರ್ ಕೂಡ ಸೇರ್ಪಡೆಯಾಗಿದ್ದಾರೆ.

ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ದ 7 ವಿಕೆಟ್ ಪಡೆದ ಟೀಮ್ ಇಂಡಿಯಾದ ಮೊದಲ ವೇಗಿ ಎಂಬ ದಾಖಲೆಯನ್ನೂ ಕೂಡ ಶಾರ್ದೂಲ್ ಠಾಕೂರ್ ಬರೆದಿದ್ದಾರೆ. ಇದಕ್ಕೂ ಮುನ್ನ ಸೌತ್ ಆಫ್ರಿಕಾ ವಿರುದ್ದ ಸ್ಪಿನ್ನರ್​ಗಳಾದ ಅಶ್ವಿನ್ ಹಾಗೂ ಹರ್ಭಜನ್ ಸಿಂಗ್ 7 ವಿಕೆಟ್ ಕಬಳಿಸಿದ್ದರು.

ಜೊತೆಗೆ ಜೋಹಾನ್ಸ್​ಬರ್ಗ್​ನ ವಾಂಡರರ್ಸ್​ ಪಿಚ್​ನಲ್ಲಿ 7 ವಿಕೆಟ್ ಕಬಳಿಸಿದ ಮೊದಲ ಭಾರತೀಯ ಬೌಲರ್​ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಪಿಚ್​ನಲ್ಲಿ ಅನಿಲ್ ಕುಂಬ್ಳೆ 6 ವಿಕೆಟ್ ಪಡೆದಿರುವುದು ದಾಖಲೆಯಾಗಿತ್ತು.

ಇನ್ನು ದಕ್ಷಿಣ ಆಫ್ರಿಕಾ ವಿರುದ್ದ ಅತ್ಯಂತ ಯಶಸ್ವಿ ಟೀಮ್ ಇಂಡಿಯಾ ಬೌಲರ್ ಎಂಬ ದಾಖಲೆಯನ್ನೂ ಕೂಡ ಶಾರ್ದೂಲ್ ಠಾಕೂರ್ ತಮ್ಮದಾಗಿಸಿಕೊಂಡರು. ಈ ಹಿಂದೆ 2016 ರಲ್ಲಿ ನಡೆದ ನಾಗ್ಪುರ ಟೆಸ್ಟ್​​ನಲ್ಲಿ ಅಶ್ವಿನ್ 66 ರನ್​ಗೆ 7 ವಿಕೆಟ್ ಕಬಳಿಸಿದ್ದು ಅತ್ಯುತ್ತಮ ದಾಖಲೆಯಾಗಿತ್ತು. ಇದೀಗ ಕೇವಲ 61 ರನ್​ಗೆ 7 ವಿಕೆಟ್ ಉರುಳಿಸಿ ಶಾರ್ದೂಲ್ ಠಾಕೂರ್ ಹೊಸ ಇತಿಹಾಸ ಬರೆದಿದ್ದಾರೆ.

ಇದಲ್ಲದೆ ದಕ್ಷಿಣ ಆಫ್ರಿಕಾದಲ್ಲಿ 7 ವಿಕೆಟ್ ಪಡೆದ 2ನೇ ಟೀಮ್ ಇಂಡಿಯಾ ಬೌಲರ್ ಎಂಬ ದಾಖಲೆಯನ್ನೂ ಕೂಡ ಶಾರ್ದೂಲ್ ಠಾಕೂರ್ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ 2011 ರಲ್ಲಿ ಹರ್ಭಜನ್ ಸಿಂಗ್ ಕೇಪ್​ಟೌನ್​ನಲ್ಲಿ 7 ವಿಕೆಟ್ ಕಬಳಿಸಿದ್ದರು.

ಹಾಗೆಯೇ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್​ ಪಂದ್ಯದಲ್ಲಿ 7 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾದ ಮೂರನೇ ಬೌಲರ್ ಎಂಬ ದಾಖಲೆ ಕೂಡ ಶಾರ್ದೂಲ್ ಠಾಕೂರ್ ಪಾಲಾಗಿದೆ. ಈ ಹಿಂದೆ ಅಶ್ವಿನ್ ಹಾಗೂ ಹರ್ಭಜನ್ ಸಿಂಗ್ ಈ ಸಾಧನೆ ಮಾಡಿದ್ದರು.

ಇನ್ನು ವಾಂಡರರರ್ಸ್​ ಮೈದಾನದಲ್ಲಿ ಅತ್ಯುತ್ತಮ ಬೌಲಿಂಗ್ ಫಿಗರ್ ಎಂಬ ದಾಖಲೆಯನ್ನು ಶಾರ್ದೂಲ್ ಠಾಕೂರ್ ಇಂಗ್ಲೆಂಡ್ ವೇಗಿ ಜೊತೆ ಹಂಚಿಕೊಂಡಿದ್ದಾರೆ. 2005 ರಲ್ಲಿ ಇದೇ ಮೈದಾನದಲ್ಲಿ ಇಂಗ್ಲೆಂಡ್ ವೇಗಿ ಮ್ಯಾಥ್ಯೂ ಹೊಗಾರ್ಡ್​ 61 ರನ್​ ನೀಡಿ 7 ವಿಕೆಟ್ ಪಡೆದಿದ್ದರು. ಇದೀಗ ಶಾರ್ದೂಲ್ ಠಾಕೂರ್ ಕೂಡ 61 ಕ್ಕೆ 7 ವಿಕೆಟ್ ಉರುಳಿಸಿ 16 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.

ಸಂಕ್ಷಿಪ್ತ ಸ್ಕೋರ್ ವಿವರ: ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್​- 229 ಭಾರತ ಮೊದಲ ಇನಿಂಗ್ಸ್​- 202 ಭಾರತ 2ನೇ ಇನಿಂಗ್ಸ್​- 74/2 (18)

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Ravindra Jadeja: ಸ್ಟಾರ್ ಆಲ್​ರೌಂಡರ್ ಜಡೇಜಾರನ್ನು ಆಯ್ಕೆ ಮಾಡದಿರಲು ಇದುವೇ ಕಾರಣ..!

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(SA Vs IND: Shardul Thakur Enters Record Books With Seven-wicket Haul)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ