AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಸಚಿನ್ ವಿಕೆಟ್ ಪಡೆದ ಫಾರೂಖಿ: ಕ್ರೀಡಾಂಗಣದಲ್ಲಿ ನೀರವ ಮೌನ..!

Sachin Tendulkar: ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ಎಂಬುದು ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್​ಗೆ ಎದುರಾಳಿಯಾಗಿ ಕಾಣಿಸಿಕೊಂಡಿದ್ದು ನಟ ಅಕ್ಷಯ್ ಕುಮಾರ್ ನೇತೃತ್ವದ ಖಿಲಾಡಿ ಇಲೆವೆನ್ ತಂಡ.

VIDEO: ಸಚಿನ್ ವಿಕೆಟ್ ಪಡೆದ ಫಾರೂಖಿ: ಕ್ರೀಡಾಂಗಣದಲ್ಲಿ ನೀರವ ಮೌನ..!
Sachin Tendulkar-Munawar Faruqui
TV9 Web
| Edited By: |

Updated on: Mar 07, 2024 | 10:49 AM

Share

ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ (ISPL) ಶುರುವಾಗಿದೆ. 6 ತಂಡಗಳ ನಡುವಣ ಟೆನಿಸ್ ಬಾಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿದಿದ್ದು ಮಾಸ್ಟರ್ಸ್ XI ಮತ್ತು ಖಿಲಾಡಿ XI ತಂಡಗಳು. ಇಲ್ಲಿ ಮಾಸ್ಟರ್ಸ್ ತಂಡವನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಮುನ್ನಡೆಸಿದರೆ, ಖಿಲಾಡಿ ತಂಡದ ಸಾರಥ್ಯವನ್ನು ಬಾಲಿವುಡ್ ನಟ ಅಕ್ಷಯ್ ಕುಮಾರ್ ವಹಿಸಿಕೊಂಡಿದ್ದರು.

ಒಂದೆಡೆ ಕ್ರಿಕೆಟಿಗರಿದ್ದರೆ, ಮತ್ತೊಂದೆಡೆ ಕಲಾವಿದರು ಕಣಕ್ಕಿಳಿದಿದ್ದರು. ಅದರಲ್ಲೂ ಸಚಿನ್ ತೆಂಡೂಲ್ಕರ್ ಅವರ ತಂಡದಲ್ಲಿ ಜಮ್ಮು-ಕಾಶ್ಮೀರ ಪ್ಯಾರಾ ಕ್ರಿಕೆಟ್ ತಂಡದ ನಾಯಕ ಅಮೀರ್ ಹುಸೇನ್ ಲೋನ್ ಅವರನ್ನು ಆಡಿದ್ದು ವಿಶೇಷವಾಗಿತ್ತು.

ಮಾಸ್ಟರ್ಸ್ XI vs ಖಿಲಾಡಿ XI:

ಈ ಪಂದ್ಯದಲ್ಲಿ ಖಾಲಿಡಿ ನಂಬರ್ 1 ಖ್ಯಾತಿಯ ಅಕ್ಷಯ್ ಕುಮಾರ್ ಸಚಿನ್ ತೆಂಡೂಲ್ಕರ್‌ಗೆ ಬೌಲಿಂಗ್ ಮಾಡಿದರು. ಇದೇ ವೇಳೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮಾಸ್ಟರ್ ಬ್ಲಾಸ್ಟರ್ ಕೂಡ ಗಮನ ಸೆಳೆದಿದ್ದರು. ಇದಾಗ್ಯೂ ಸಚಿನ್ ಅವರನ್ನು ಔಟ್ ಮಾಡುವಲ್ಲಿ ಹಿಂದಿ ಬಿಗ್ ಬಾಸ್ ವಿನ್ನರ್ ಮುನವರ್ ಫಾರೂಖಿ ಯಶಸ್ವಿಯಾದರು.

ಮುನವರ್ ಎಸೆತಕ್ಕೆ ಭರ್ಜರಿ ಪ್ರತ್ಯುತ್ತರ ನೀಡಲು ಯತ್ನಿಸಿದ ಸಚಿನ್ ತೆಂಡೂಲ್ಕರ್ ಸುಲಭ ಕ್ಯಾಚ್ ನೀಡಿದರು. ಇತ್ತ ಕ್ರಿಕೆಟ್ ದೇವರು ಔಟ್ ಆಗುತ್ತಿರುವುದು ಖುದ್ಧು ಮುನವರ್​ಗೂ ನಂಬಲಾಗಲಿಲ್ಲ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಸಚಿನ್ ಔಟಾಗುತ್ತಿದ್ದಂತೆ ಸ್ಟೇಡಿಯಂನಲ್ಲಿ ನೀರವ ಮೌನ ಆವರಿಸಿದ್ದು ವಿಶೇಷ. ಇನ್ನು ಖಿಲಾಡಿ ಇಲೆವೆನ್ ವಿರುದ್ಧದ ಈ ಪಂದ್ಯವನ್ನು ಮಾಸ್ಟರ್ಸ್​ ಇಲೆವೆನ್ 5 ರನ್​ಗಳಿಂದ ಗೆದ್ದುಕೊಂಡಿತು.

ISPL ಟೂರ್ನಿ:

ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ಎಂಬುದು ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ. ದೇಶದ ಅತ್ಯುತ್ತಮ ಟೆನಿಸ್ ಬಾಲ್ ಕ್ರಿಕೆಟರುಗಳಿಗೆ ವೇದಿಕೆ ಕಲ್ಪಿಸಲು ಈ ಟೂರ್ನಿಯನ್ನು ಶುರು ಮಾಡಲಾಗಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ 6 ತಂಡಗಳನ್ನು ಸಿನಿಮಾ ತಾರೆಯರು ಖರೀದಿಸಿರುವುದು ವಿಶೇಷ. ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ ತಂಡಗಳು ಮತ್ತು ಅದರ ಮಾಲೀಕರು ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

  • ಮಾಜ್ಹಿ ಮುಂಬೈ ತಂಡ: ಅಮಿತಾಬ್ ಬಚ್ಚನ್ (ಬಾಲಿವುಡ್ ನಟ)
  • ಶ್ರೀನಗರ ಕೆ ವೀರ್ ತಂಡ: ಅಕ್ಷಯ್ ಕುಮಾರ್ (ಬಾಲಿವುಡ್ ನಟ)
  • ಬೆಂಗಳೂರು ಸ್ಟ್ರೈಕರ್ಸ್ ತಂಡ: ಹೃತಿಕ್ ರೋಷನ್ (ಬಾಲಿವುಡ್ ನಟ)
  • ಚೆನ್ನೈ ಸಿಂಗಮ್ಸ್ ತಂಡ: ಸೂರ್ಯ (ಕಾಲಿವುಡ್ ನಟ)
  • ಫಾಲ್ಕನ್ ರೈಸರ್ಸ್ ಹೈದರಾಬಾದ್ ತಂಡ: ರಾಮ್ ಚರಣ್ (ಟಾಲಿವುಡ್ ನಟ)
  • ಟೈಗರ್ಸ್ ಆಫ್ ಕೋಲ್ಕತ್ತಾ ತಂಡ: ಸೈಫ್ ಅಲಿ ಖಾನ್ (ಬಾಲಿವುಡ್ ನಟ)
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ