AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಜೊತೆ ಸಚಿನ್, ಧೋನಿ ಕೈ ಜೋಡಿಸಲಿ: ಗಿಲ್​ಕ್ರಿಸ್ಟ್​

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಹತ್ತು ತಂಡಗಳ ನಡುವಣ ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಭಾರತದ ಪಿಚ್​ನಲ್ಲಿ ವಿದೇಶಿ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಹೀಗಾಗಿಯೇ ಯುವ ಪಡೆಯನ್ನು ಒಳಗೊಂಡಿರುವ ಭಾರತ ತಂಡಕ್ಕೆ ಅತ್ಯುತ್ತಮ ಮಾರ್ಗದರ್ಶಕರ ಅಗತ್ಯತೆಯಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಆ್ಯಡಂ ಗಿಲ್​ಕ್ರಿಸ್ಟ್​, ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್, ಪಾಕಿಸ್ತಾನ್, ಭಾರತ […]

ಟೀಮ್ ಇಂಡಿಯಾ ಜೊತೆ ಸಚಿನ್, ಧೋನಿ ಕೈ ಜೋಡಿಸಲಿ: ಗಿಲ್​ಕ್ರಿಸ್ಟ್​
Adam Gilchrist
TV9 Web
| Edited By: |

Updated on: Sep 19, 2023 | 9:59 PM

Share

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಹತ್ತು ತಂಡಗಳ ನಡುವಣ ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ಭಾರತದ ಪಿಚ್​ನಲ್ಲಿ ವಿದೇಶಿ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಹೀಗಾಗಿಯೇ ಯುವ ಪಡೆಯನ್ನು ಒಳಗೊಂಡಿರುವ ಭಾರತ ತಂಡಕ್ಕೆ ಅತ್ಯುತ್ತಮ ಮಾರ್ಗದರ್ಶಕರ ಅಗತ್ಯತೆಯಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ಆ್ಯಡಂ ಗಿಲ್​ಕ್ರಿಸ್ಟ್​, ಈ ಬಾರಿಯ ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್, ಪಾಕಿಸ್ತಾನ್, ಭಾರತ ಹಾಗೂ ಆಸ್ಟ್ರೇಲಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ. ಅದರಲ್ಲೂ ಭಾರತ ತಂಡ ಏಷ್ಯಾ ಕಪ್ 2023 ರಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಕಾರಣ ನಿರೀಕ್ಷೆಗಳು ಹೆಚ್ಚಾಗಿವೆ. ಈ ನಿರೀಕ್ಷೆಗಳೊಂದಿಗೆ ಕಣಕ್ಕಿಳಿಯುವ ಟೀಮ್ ಇಂಡಿಯಾ ಮಹೇಂದ್ರ ಸಿಂಗ್ ಧೋನಿ ಹಾಗೂ ಸಚಿನ್ ತೆಂಡೂಲ್ಕರ್ ಸಮಯ ಕಳೆಯುವುದು ಸೂಕ್ತ ಎಂದು ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಪ್ರಕಾರ ಟೀಮ್ ಇಂಡಿಯಾಗೆ ಎಂಎಸ್ ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ಅಗತ್ಯತೆಯಿದೆ. ಭಾರತದ ಈ ಇಬ್ಬರು ದಿಗ್ಗಜರು ಟೀಮ್ ಇಂಡಿಯಾ ಜೊತೆ ವಿಶ್ವಕಪ್‌ನಲ್ಲಿ ಸಮಯ ಕಳೆಯಬೇಕು. ಇದರಿಂದ ಅವರ ಅನುಭವಗಳನ್ನು ಹಂಚಿಕೊಳ್ಳಬಹುದು ಎಂದು ಗಿಲ್​​ಕ್ರಿಸ್ಟ್ ಹೇಳಿದ್ದಾರೆ.

ಭಾರತದ ಆಟಗಾರರಿಗೆ ಏನು ಬೇಕು ಎಂದು ನಾನು ಹೇಳಲಾರೆ. ಆದರೆ ನಾನೇನಾದರೂ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ನಲ್ಲಿ ಇದ್ದಿದ್ದರೆ, ಖಂಡಿತವಾಗಿಯೂ ಧೋನಿ ಮತ್ತು ಸಚಿನ್ ಅವರನ್ನು ತಂಡದ ಆಟಗಾರರೊಂದಿಗೆ ಸಮಯ ಕಳೆಯಲು ಕೇಳುತ್ತಿದ್ದೆ. ಇದರಿಂದ ಅವರು ತಮ್ಮ ಅನುಭವಗಳನ್ನು ಅವರೊಂದಿಗೆ ಹಂಚಿಕೊಳ್ಳಬಹುದು.

ಇವರಿಬ್ಬರೇ ಅಲ್ಲ, ಯುವರಾಜ್ ಸಿಂಗ್ ಅವರಿಗೂ ಹಾಗೆ ಮಾಡುವಂತೆ ಕೇಳಿಕೊಳ್ಳುತ್ತಿದ್ದೆ ಎಂದು ಗಿಲ್ ಕ್ರಿಸ್ಟ್ ಹೇಳಿದ್ದಾರೆ. ಯುವರಾಜ್ 2011 ರ ವಿಶ್ವಕಪ್‌ನ ಹೀರೋ ಆಗಿದ್ದಾರೆ. ಹೀಗಾಗಿ ಯುವಿ, ಸಚಿನ್ ಹಾಗೂ ಧೋನಿಯ ಅನುಭವಗಳು ಟೀಮ್ ಇಂಡಿಯಾಗೆ ಪಾಲಿಗೆ ಉಪಯುಕ್ತವಾಗಲಿದೆ ಎಂದು ಗಿಲ್​ಕ್ರಿಸ್ಟ್ ತಿಳಿಸಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್ ಗೆಲ್ಲಬಲ್ಲ 5 ತಂಡಗಳನ್ನು ಹೆಸರಿಸಿದ ಸುರೇಶ್ ರೈನಾ

ಇನ್ನು ಪ್ರಸ್ತುತ ತಂಡದಲ್ಲಿರುವ ವಿರಾಟ್ ಕೊಹ್ಲಿ 2011 ರ ವಿಶ್ವಕಪ್ ಆಡಿದ ಅನುಭವ ಹೊಂದಿದ್ದಾರೆ. ನಿಸ್ಸಂಶಯವಾಗಿ ಅವರ ಅನುಭವವೂ ಇಲ್ಲಿ ಪ್ರಯೋಜನಕಾರಿಯಾಗಲಿದೆ. ಹಾಗೆಯೇ ಸಚಿನ್, ಯುವಿ, ಧೋನಿಯನ್ನು ತಂಡದ ಜೊತೆ ಕೈ ಜೋಡಿಸಲು ಹೇಳಿರುವುದರಿಂದ ಅದು ಭಾರತದ ವಿಶ್ವಕಪ್ ಕನಸಿಗೆ ನೆರವಾಗಲಿದೆ ಎಂದು ಆ್ಯಡಂ ಗಿಲ್​ಕ್ರಿಸ್ಟ್ ಅಭಿಪ್ರಾಯಪಟ್ಟಿದ್ದಾರೆ.

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ