ಸಚಿನ್ ಅಥವಾ ಸೆಹ್ವಾಗ್, ಯಾರಿಗೆ ಬೌಲಿಂಗ್ ಮಾಡುವುದು ಕಷ್ಟ? ಮುತ್ತಯ್ಯ ಮುರಳೀಧರನ್ ಉತ್ತರ ಹೀಗಿದೆ

ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಮುತ್ತಯ್ಯ ಮುರಳೀಧರನ್ ಏಷ್ಯಾ ಲಯನ್ಸ್‌ ತಂಡದ ಪರ ಆಡುತ್ತಿದ್ದಾರೆ. ನಾಲ್ಕು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮುರಳೀಧರನ್ 3 ವಿಕೆಟ್ ಪಡೆದಿದ್ದಾರೆ.

ಸಚಿನ್ ಅಥವಾ ಸೆಹ್ವಾಗ್, ಯಾರಿಗೆ ಬೌಲಿಂಗ್ ಮಾಡುವುದು ಕಷ್ಟ? ಮುತ್ತಯ್ಯ ಮುರಳೀಧರನ್ ಉತ್ತರ ಹೀಗಿದೆ
muttiah muralitharan
Follow us
| Updated By: ಝಾಹಿರ್ ಯೂಸುಫ್

Updated on:Jan 27, 2022 | 8:20 PM

ಶ್ರೀಲಂಕಾದ ಮಾಜಿ ಅನುಭವಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಪ್ರಸ್ತುತ ಓಮನ್‌ನ ಮಸ್ಕತ್ ನಗರದಲ್ಲಿ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಇದೇ ವೇಳೆ ಸಂದರ್ಶನವೊಂದರಲ್ಲಿ ಕಾಣಿಸಿಕೊಂಡಿದ್ದ ಮುರಳೀಧರನ್ ಅವರಿಗೆ ಕೆಲ ಪ್ರಶ್ನೆಗಳನ್ನು ಮುಂದಿಡಲಾಗಿತ್ತು. ಅದರಲ್ಲಿ ಟೀಮ್ ಇಂಡಿಯಾದ ಮಾಜಿ ಆರಂಭಿಕರ ಬಗ್ಗೆ ಕೂಡ ಕೇಳಲಾಗಿತ್ತು. ಸಚಿನ್ ತೆಂಡೂಲ್ಕರ್ ಅಥವಾ ವೀರೇಂದ್ರ ಸೆಹ್ವಾಗ್ ನಿಮಗೆ ಬೌಲಿಂಗ್ ಮಾಡಲು ಯಾರಿಗೆ ಸುಲಭವಾಗುತ್ತಿತ್ತು ಎಂದು ಸ್ಪಿನ್ ಮಾಂತ್ರಿಕನಿಗೆ ಪ್ರಶ್ನಿಸಲಾಗಿತ್ತು.

ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿದ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುರಳೀಧರನ್, ನನಗೆ ಸಚಿನ್‌ ಅವರಿಗೆ ಬೌಲಿಂಗ್ ಮಾಡುವುದು ಸುಲಭವಾಗಿತ್ತು ಎಂದರು. ಈ ಮೂಲಕ ಸ್ಪೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರಿಗೆ ಚೆಂಡೆಸೆಯುವುದು ಸವಾಲಾಗಿತ್ತು ಎಂಬುದನ್ನು ಮುತ್ತಯ್ಯ ಮುರಳೀಧರನ್ ತಿಳಿಸಿದ್ದಾರೆ. ಇದೇ ವೇಳೆ ಟೆಸ್ಟ್ ಕ್ರಿಕೆಟ್​ನಲ್ಲಿ ನೀವು ಮಾಡಿರುವ 800 ವಿಕೆಟ್ ದಾಖಲೆ ಅಥವಾ ಏಕದಿನ ಕ್ರಿಕೆಟ್​ನಲ್ಲಿನ 500 ವಿಕೆಟ್​ಗಳ ದಾಖಲೆಯನ್ನು ಯಾರು ಮುರಿಯಬಲ್ಲರು ಎಂದು ಪ್ರಶ್ನಿಸಲಾಗಿತ್ತು.

ಇದಕ್ಕೂ ಮುತ್ತಯ್ಯ ಮುರಳೀಧರನ್ ಅವರ ಕಡೆಯಿಂದ ಬಂದ ಉತ್ತರ ಟೀಮ್ ಇಂಡಿಯಾ ಆಟಗಾರ ಎಂಬುದಾಗಿತ್ತು. ಹೌದು, ಪ್ರಸ್ತುತ ಆಡುತ್ತಿರುವ ಆಟಗಾರರಲ್ಲಿ ಅಶ್ವಿನ್ ಅವರು ನನ್ನ ದಾಖಲೆಯನ್ನು ಮುರಿಯುವ ಸಾಮರ್ಥ್ಯ ಹೊಂದಿದ್ದಾರೆ ಎಂದು ತಿಳಿಸಿದರು.

ಲೆಜೆಂಡ್ಸ್ ಲೀಗ್ ಕ್ರಿಕೆಟ್​ನಲ್ಲಿ ಮುತ್ತಯ್ಯ ಮುರಳೀಧರನ್ ಏಷ್ಯಾ ಲಯನ್ಸ್‌ ತಂಡದ ಪರ ಆಡುತ್ತಿದ್ದಾರೆ. ನಾಲ್ಕು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮುರಳೀಧರನ್ 3 ವಿಕೆಟ್ ಪಡೆದಿದ್ದಾರೆ. ಮುರಳೀಧರನ್ ನೇತೃತ್ವದ ಏಷ್ಯಾ ಲಯನ್ಸ್ ತಂಡ ಈ ಬಾರಿಯ ಟಿ20 ಲೀಗ್‌ನಲ್ಲಿ 4 ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು ಎರಡರಲ್ಲಿ ಸೋತಿದೆ.

ಇದನ್ನೂ ಓದಿ:  IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(sachin tendulkar or virender sehwag? muttiah muralitharan answers who easier to bowl)

Published On - 8:19 pm, Thu, 27 January 22

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು