AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ

Sachin Tendulkar: ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ "ಹಾರ್ಡ್ ಟೋಸ್ಟ್" ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ
sachin tendulkar
TV9 Web
| Edited By: |

Updated on:Nov 02, 2022 | 4:41 PM

Share

ಕ್ರಿಕೆಟ್ ದೇವರು, ವಿಶ್ವ ಕ್ರಿಕೆಟ್​ನ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ (Sachin Tendulkar), ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ವೀಡಿಯೊಂದನ್ನು ಪೋಸ್ಟ್ ಮಾಡಿದ್ದು, ಈಗ ಆ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿರುವಂತೆ ಹೆದ್ದಾರಿ ಪಕ್ಕದ ಅಂಗಡಿಯೊಂದಕ್ಕೆ ಭೇಟಿ ನೀಡಿರುವ ಸಚಿನ್, ಅಲ್ಲಿ ತಮ್ಮ ಮಗನೊಂದಿಗೆ ಟೀ ಹೀರಿದ್ದಾರೆ. ವಾಸ್ತವವಾಗಿ ಎರಡು ದಿನಗಳ ಹಿಂದೆ ಸಚಿನ್‌ ತೆಂಡೂಲ್ಕರ್‌, ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳಿದ್ದಾರೆ. ಆ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಸಚಿನ್ ಚಹಾ ಸವಿದಿದ್ದಾರೆ.

ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ “ಹಾರ್ಡ್ ಟೋಸ್ಟ್” ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸರಳ ಉಡುಗೆಯಲ್ಲಿ ಕಾಣಿಸಿಕೊಂಡಿರುವ ಸಚಿನ್, ಟೀ ಕುಡಿಯುವುದರೊಂದಿಗೆ ಸ್ಥಳೀಯರೊಂದಿಗೆ ಸಂವಹನ ನಡೆಸಿದ್ದಾರೆ. ಹಾಗೆಯೇ ಆ ಬಳಿಕ ಟೀ ಸ್ಟಾಲ್ ಮಾಲೀಕರಿಗೆ ಹಸ್ತಲಾಘವ ಮಾಡಿ, ಅವರೊಂದಿಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ವೇಳೆ ಕಾಲೇಜು ವಿದ್ಯಾರ್ಥಿ ಹಾಗೂ ಸ್ಥಳೀಯರ ಜತೆಗೂ ಸಚಿನ್ ಮಾತುಕತೆ ನಡೆಸಿದ್ದಾರೆ. ತಂದೆ-ಮಗ ಇಬ್ಬರೂ ಎಸ್‌ಯುವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದು, ಸಚಿನ್ ತಾನು ಚಹಾ ಕುಡಿದಿದಲ್ಲದೆ ಕಾರಿನೊಳಗೆ ಕುಳಿತಿದ್ದ ಮಗ ಅರ್ಜುನ್ ತೆಂಡೂಲ್ಕರ್‌ಗೂ ಚಹಾವನ್ನು ನೀಡಿದ್ದಾರೆ. ಈ ಘಟನೆ ನಡೆದು ಎರಡು ದಿನಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸಚಿನ್ ಈ ವಿಡಿಯೋ ಹಂಚಿಕೊಂಡಿದ್ದು, ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

Published On - 4:38 pm, Wed, 2 November 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​