AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ

Sachin Tendulkar: ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ "ಹಾರ್ಡ್ ಟೋಸ್ಟ್" ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ
sachin tendulkar
TV9 Web
| Edited By: |

Updated on:Nov 02, 2022 | 4:41 PM

Share

ಕ್ರಿಕೆಟ್ ದೇವರು, ವಿಶ್ವ ಕ್ರಿಕೆಟ್​ನ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ (Sachin Tendulkar), ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ವೀಡಿಯೊಂದನ್ನು ಪೋಸ್ಟ್ ಮಾಡಿದ್ದು, ಈಗ ಆ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿರುವಂತೆ ಹೆದ್ದಾರಿ ಪಕ್ಕದ ಅಂಗಡಿಯೊಂದಕ್ಕೆ ಭೇಟಿ ನೀಡಿರುವ ಸಚಿನ್, ಅಲ್ಲಿ ತಮ್ಮ ಮಗನೊಂದಿಗೆ ಟೀ ಹೀರಿದ್ದಾರೆ. ವಾಸ್ತವವಾಗಿ ಎರಡು ದಿನಗಳ ಹಿಂದೆ ಸಚಿನ್‌ ತೆಂಡೂಲ್ಕರ್‌, ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳಿದ್ದಾರೆ. ಆ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಸಚಿನ್ ಚಹಾ ಸವಿದಿದ್ದಾರೆ.

ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ “ಹಾರ್ಡ್ ಟೋಸ್ಟ್” ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸರಳ ಉಡುಗೆಯಲ್ಲಿ ಕಾಣಿಸಿಕೊಂಡಿರುವ ಸಚಿನ್, ಟೀ ಕುಡಿಯುವುದರೊಂದಿಗೆ ಸ್ಥಳೀಯರೊಂದಿಗೆ ಸಂವಹನ ನಡೆಸಿದ್ದಾರೆ. ಹಾಗೆಯೇ ಆ ಬಳಿಕ ಟೀ ಸ್ಟಾಲ್ ಮಾಲೀಕರಿಗೆ ಹಸ್ತಲಾಘವ ಮಾಡಿ, ಅವರೊಂದಿಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ವೇಳೆ ಕಾಲೇಜು ವಿದ್ಯಾರ್ಥಿ ಹಾಗೂ ಸ್ಥಳೀಯರ ಜತೆಗೂ ಸಚಿನ್ ಮಾತುಕತೆ ನಡೆಸಿದ್ದಾರೆ. ತಂದೆ-ಮಗ ಇಬ್ಬರೂ ಎಸ್‌ಯುವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದು, ಸಚಿನ್ ತಾನು ಚಹಾ ಕುಡಿದಿದಲ್ಲದೆ ಕಾರಿನೊಳಗೆ ಕುಳಿತಿದ್ದ ಮಗ ಅರ್ಜುನ್ ತೆಂಡೂಲ್ಕರ್‌ಗೂ ಚಹಾವನ್ನು ನೀಡಿದ್ದಾರೆ. ಈ ಘಟನೆ ನಡೆದು ಎರಡು ದಿನಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸಚಿನ್ ಈ ವಿಡಿಯೋ ಹಂಚಿಕೊಂಡಿದ್ದು, ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

Published On - 4:38 pm, Wed, 2 November 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ