AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ

Sachin Tendulkar: ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ "ಹಾರ್ಡ್ ಟೋಸ್ಟ್" ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕ್ರಿಕೆಟ್ ದೇವರು; ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಮಗನೊಂದಿಗೆ ಟೀ ಕುಡಿದ ಸಚಿನ್..! ವಿಡಿಯೋ
sachin tendulkar
TV9 Web
| Updated By: ಪೃಥ್ವಿಶಂಕರ|

Updated on:Nov 02, 2022 | 4:41 PM

Share

ಕ್ರಿಕೆಟ್ ದೇವರು, ವಿಶ್ವ ಕ್ರಿಕೆಟ್​ನ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ (Sachin Tendulkar), ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ವೀಡಿಯೊಂದನ್ನು ಪೋಸ್ಟ್ ಮಾಡಿದ್ದು, ಈಗ ಆ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿರುವಂತೆ ಹೆದ್ದಾರಿ ಪಕ್ಕದ ಅಂಗಡಿಯೊಂದಕ್ಕೆ ಭೇಟಿ ನೀಡಿರುವ ಸಚಿನ್, ಅಲ್ಲಿ ತಮ್ಮ ಮಗನೊಂದಿಗೆ ಟೀ ಹೀರಿದ್ದಾರೆ. ವಾಸ್ತವವಾಗಿ ಎರಡು ದಿನಗಳ ಹಿಂದೆ ಸಚಿನ್‌ ತೆಂಡೂಲ್ಕರ್‌, ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳಿದ್ದಾರೆ. ಆ ವೇಳೆ ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್​ನಲ್ಲಿ ಸಚಿನ್ ಚಹಾ ಸವಿದಿದ್ದಾರೆ.

ಈ ವಿಡಿಯೋದಲ್ಲಿ ಮಾತನಾಡಿರುವ ಸಚಿನ್, ತಾನು ಬೆಳಗಾವಿ-ಗೋವಾ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣ ಮಾಡುತ್ತಿರುವುದಾಗಿಯೂ ಹಾಗೂ “ಹಾರ್ಡ್ ಟೋಸ್ಟ್” ತಿನ್ನಲು ಕಾರ್ ನಿಲ್ಲಿಸಿರುವುದಾಗಿಯೂ ಹೇಳಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸರಳ ಉಡುಗೆಯಲ್ಲಿ ಕಾಣಿಸಿಕೊಂಡಿರುವ ಸಚಿನ್, ಟೀ ಕುಡಿಯುವುದರೊಂದಿಗೆ ಸ್ಥಳೀಯರೊಂದಿಗೆ ಸಂವಹನ ನಡೆಸಿದ್ದಾರೆ. ಹಾಗೆಯೇ ಆ ಬಳಿಕ ಟೀ ಸ್ಟಾಲ್ ಮಾಲೀಕರಿಗೆ ಹಸ್ತಲಾಘವ ಮಾಡಿ, ಅವರೊಂದಿಗೆ ಸೆಲ್ಫಿ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ವೇಳೆ ಕಾಲೇಜು ವಿದ್ಯಾರ್ಥಿ ಹಾಗೂ ಸ್ಥಳೀಯರ ಜತೆಗೂ ಸಚಿನ್ ಮಾತುಕತೆ ನಡೆಸಿದ್ದಾರೆ. ತಂದೆ-ಮಗ ಇಬ್ಬರೂ ಎಸ್‌ಯುವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದು, ಸಚಿನ್ ತಾನು ಚಹಾ ಕುಡಿದಿದಲ್ಲದೆ ಕಾರಿನೊಳಗೆ ಕುಳಿತಿದ್ದ ಮಗ ಅರ್ಜುನ್ ತೆಂಡೂಲ್ಕರ್‌ಗೂ ಚಹಾವನ್ನು ನೀಡಿದ್ದಾರೆ. ಈ ಘಟನೆ ನಡೆದು ಎರಡು ದಿನಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸಚಿನ್ ಈ ವಿಡಿಯೋ ಹಂಚಿಕೊಂಡಿದ್ದು, ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

Published On - 4:38 pm, Wed, 2 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ