AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ

Sachithra Senanayake Match Fixing: 2012 ಮತ್ತು 2016 ರ ನಡುವೆ ಶ್ರೀಲಂಕಾ ಕ್ರಿಕೆಟ್ ತಂಡದ ಪರ ಆಡಿದ್ದ ಆಲ್ರೌಂಡರ್ ಸಚಿತ್ರಾ ಸೇನಾನಾಯಕೆ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದೆ. ಹೀಗಾಗಿ ಕೊಲಂಬೊ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ತಿಂಗಳ ಅವಧಿಗೆ ಸೇನಾನಾಯಕೆಯ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಿದೆ.

ಸಿಎಸ್​ಕೆ ಆಟಗಾರನಿಂದ ಮ್ಯಾಚ್ ಫಿಕ್ಸಿಂಗ್ ಆರೋಪ: ವಿದೇಶ ಪ್ರವಾಸಕ್ಕೆ ನಿಷೇಧ
MS Dhoni and Sachithra Senanayake
Follow us
Vinay Bhat
|

Updated on:Aug 15, 2023 | 8:42 AM

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡಿದ್ದ ಸಚಿತ್ರಾ ಸೇನಾನಾಯಕೆ (Sachithra Senanayake) ಮ್ಯಾಚ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಇದೀಗ ಫಿಕ್ಸಿಂಗ್ ಆರೋಪ ಎದುರಿಸುತ್ತಿರುವ ಇವರನ್ನು ಕೊಲಂಬೊದ ಸ್ಥಳೀಯ ನ್ಯಾಯಾಲಯ ವಿದೇಶ ಪ್ರವಾಸಕ್ಕೆ ನಿಷೇಧ ಹೇರಿದೆ. 2012 ಮತ್ತು 2016 ರ ನಡುವೆ ಏಕೈಕ ಟೆಸ್ಟ್, 49 ಏಕದಿನ ಮತ್ತು 24 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದ 38 ವರ್ಷದ ಸೇನಾನಾಯಕೆ, 2020 ಲಂಕಾ ಪ್ರೀಮಿಯರ್ ಲೀಗ್‌ನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಸಚಿತ್ರಾ ಸೇನಾನಾಯಕೆ ಅವರು ಟೆಲಿಫೋನ್ ಮೂಲಕ ಪಂದ್ಯದ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಮಾಡಲು ಇಬ್ಬರು ಆಟಗಾರರನ್ನು ಸಂಪರ್ಕಿಸಿದ್ದರು ಎಂಬ ಆರೋಪವಿದೆ. ಹೀಗಾಗಿ ಕೊಲಂಬೊ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ತಿಂಗಳ ಅವಧಿಗೆ ಸೇನಾನಾಯಕೆಯ ಮೇಲೆ ಪ್ರಯಾಣ ನಿಷೇಧವನ್ನು ವಿಧಿಸಲು ವಲಸೆಯ ನಿಯಂತ್ರಕ ಜನರಲ್‌ಗೆ ಆದೇಶಿಸಿದೆ.

ನ್ಯಾಯಾಲಯದ ಆದೇಶವನ್ನು ಅಟಾರ್ನಿ ಜನರಲ್ ಇಲಾಖೆ ಪಡೆದುಕೊಂಡಿದೆ. ಮಾಜಿ ಆಫ್ ಸ್ಪಿನ್ನರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಕ್ರೀಡಾ ಸಚಿವಾಲಯದ ವಿಶೇಷ ತನಿಖಾ ಘಟಕವು ಅಟಾರ್ನಿ ಜನರಲ್ ಇಲಾಖೆಗೆ ಸೂಚನೆ ನೀಡಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ
Image
ಟೀಮ್ ಇಂಡಿಯಾ ಸೇರಲು ರಾಹುಲ್-ಅಯ್ಯರ್ ಹರಸಾಹಸ: ಇಂದು ನಿರ್ಧಾರವಾಗುತ್ತಾ ಇವರ ಭವಿಷ್ಯ?
Image
ಇಂಗ್ಲೆಂಡ್ ತಂಡಕ್ಕೆ ‘ಬೆನ್​’ಬಲ: ನಿವೃತ್ತಿ ಹಿಂಪಡೆದ ಸ್ಟೋಕ್ಸ್​..!
Image
400 ಕೋಟಿ ರೂ. ವೆಚ್ಚದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ
Image
ಸೌತ್ ಆಫ್ರಿಕಾ ಏಕದಿನ ತಂಡ ಪ್ರಕಟ: ಯುವ ಸ್ಪೋಟಕ ದಾಂಡಿಗ ಎಂಟ್ರಿ

Suryakumar Yadav: 50 ಇನಿಂಗ್ಸ್​ ಬಳಿಕ ಟಾಪ್-5 ಗೆ ಸೂರ್ಯನ ಎಂಟ್ರಿ..!

ಎಲ್ಲಾ ಮೂರು ಸ್ವರೂಪಗಳಲ್ಲಿ ಶ್ರೀಲಂಕಾ ತಂಡವನ್ನು ಪ್ರತಿನಿಧಿಸುವ ಸಚಿತ್ರಾ ಸೇನಾನಾಯಕೆ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಮೂಲಕವೂ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅವರು 2014 ಐಸಿಸಿ ಟ್ವೆಂಟಿ 20 ವಿಶ್ವಕಪ್ ವಿಜೇತ ತಂಡದ ಅವಿಭಾಜ್ಯ ಅಂಗವಾಗಿದ್ದರು. ಶ್ರೀಲಂಕಾದ 150 ನೇ ಏಕದಿನ ಕ್ಯಾಪ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಸಚಿತ್ರಾ ಅವರು ಅಜಂತಾ ಮೆಂಡಿಸ್ ಮತ್ತು ಸಿಕ್ಕುಗೆ ಪ್ರಸನ್ನ ಜೊತೆ ಪ್ರಮುಖ ಸ್ಪಿನ್ನರ್ ಆಗಿ ಕಾಣಿಸಿಕೊಂಡಿದ್ದರು.

ಸಿಎಸ್​ಕೆ ಪರ ಆಡಿದ್ದ ಸಚಿತ್ರಾ:

ಸಚಿತ್ರಾ ಸೇನಾನಾಯಕೆ 2013ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರಾಗಿ ಕೂಡ ತಮ್ಮ ಛಾಪು ಮೂಡಿಸಿದ್ದರು. ಇವರು ಬ್ಯಾಟಿಂಗ್ ಮೂಲಕ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗದಿದ್ದರೂ ಆಫ್-ಸ್ಪಿನ್ ಬೌಲಿಂಗ್ ಮೂಲಕ ಚೆನ್ನೈ ತಂಡದ ಪರ ಮಿಂಚಿದ್ದರು. ಧೋನಿ ತಂಡದ ಪರ 8 ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನು ಕಿತ್ತಿದ್ದರು. 26 ರನ್ ನೀಡಿ 2 ವಿಕೆಟ್ ಪಡೆದಿರುವುದು ಇವರ ಶ್ರೇಷ್ಠ ಸಾಧನೆ ಆಗಿದೆ. ಸಿಎಸ್​ಕೆ ತಂಡದಲ್ಲಿ ಇರುವಾಗ, ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿಯೊಂದಿಗೆ ಸೇನಾನಾಯಕೆ ಡ್ರೆಸ್ಸಿಂಗ್ ರೂಮ್ ಅನ್ನು ಹಂಚಿಕೊಂಡಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:42 am, Tue, 15 August 23

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ