AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?

IPL 2026 GT vs RR: ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 214 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡವು 18.4 ಓವರ್​ಗಳಲ್ಲಿ ಚೇಸ್ ಮಾಡಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಗುಜರಾತ್ ಟೈಟಾನ್ಸ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

ಫೈನಲ್ ಪಂದ್ಯದಲ್ಲಿ ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ?
Sai SudharsanImage Credit source: IPL
ಝಾಹಿರ್ ಯೂಸುಫ್
|

Updated on: May 30, 2026 | 8:14 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಮೂರು ಬಾರಿ ಹಿಟ್​​ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಸಾಯಿ ಸುದರ್ಶನ್. ಅದರಲ್ಲೂ ಬ್ಯಾಕ್ ಟು ಬ್ಯಾಕ್ ಹೀಗೆ ವಿಕೆಟ್ ಒಪ್ಪಿಸಿದ ಏಕೈಕ ಆಟಗಾರ ಕೂಡ ಸಾಯಿ ಸುದರ್ಶನ್. ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಿಟ್​ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ ಬ್ಯಾಟಿಂಗ್ ಮಾಡ್ತೀರಾ?  ಎಂಬ ಪ್ರಶ್ನೆ ಮುಂದಿಡಲಾಗಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಸಾಯಿ ಸುದರ್ಶನ್​​ಗೆ, ಅಹಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ನೀವು ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ? ಎಂದು ನಿರೂಪಕರು ಕೇಳಿದ್ದಾರೆ. ಇದಕ್ಕೆ ನಗುತ್ತಾ ಉತ್ತರಿಸಿದ ಸಾಯಿ, ನಾನು ಹೊಸದಾಗಿ ಏನನ್ನಾದರೂ ಮಾಡಬೇಕಿದೆ. ಈ ಸಮಸ್ಯೆಗೆ ಪರಿಹಾರವಾಗಿ ಹೊಸದಾಗಿ ‘ಗ್ರಿಪ್ ಟೆಕ್’ ಬಳಸಿ ನೆಟ್ಸ್‌ನಲ್ಲಿ ಕೆಲವು ಎಸೆತಗಳನ್ನು ಎದುರಿಸಿ ಪರೀಕ್ಷಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಇದೇ ವೇಳೆ ಎರಡು ಬಾರಿ ಹಿಟ್​ ವಿಕೆಟ್ ಆದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಾಯಿ ಸುದರ್ಶನ್, ಕಳೆದ ಪಂದ್ಯದಲ್ಲಿ ಚೆಂಡು ಬೌನ್ಸ್ ಆಗಿದ್ದ ಪರಿಣಾಮ ಬ್ಯಾಟ್ ಜಾರಿ ಸ್ಟಂಪ್​ಗೆ ಬಡಿಯಿತು. ಈ ಬಾರಿ ನಾನು ನೇರವಾಗಿ ಶಾಟ್ ಬಾರಿಸಲು ಬಯಸ್ಸಿದ್ದೆ. ದುರಾದೃಷ್ಟವಶಾತ್ ಹಿಟ್ ವಿಕೆಟ್ ಆದ ಎಂದರು.

ಇನ್ನು ಶುಭ್​ಮನ್ ಗಿಲ್ ಜೊತೆಗಿನ ಜೊತೆಯಾಟದ ಬಗ್ಗೆ ಮಾತನಾಡಿದ ಸಾಯಿ ಸುದರ್ಶನ್, ನಮ್ಮ ನಡುವೆ ಏನು ಮಾಡಬೇಕು ಎಂಬುದುರ ಬಗ್ಗೆ ಸ್ಪಷ್ಟತೆ ಇತ್ತು. ಮೊದಲ ಓವರ್​ನಿಂದಲೇ ಆಕ್ರಮಣಕಾರಿ ಆಟದೊಂದಿಗೆ ಬೌಲರ್​ಗಳಿಗೆ ಒತ್ತಡ ಹೇರುವುದು ನಮ್ಮ ಯೋಜನೆಯಾಗಿತ್ತು. ಅದರಂತೆ ಪವರ್​ಪ್ಲೇನಲ್ಲಿ ರನ್ ವೇಗ ಹೆಚ್ಚಿಸಲು ಯಶಸ್ವಿಯಾದೆವು. ಶುಭ್​ಮನ್ ಗಿಲ್ ಅತ್ಯದ್ಭುತವಾಗಿ ಬ್ಯಾಟ್ ಬೀಸಿದರು. ನಿಜ ಹೇಳಬೇಕೆಂದರೆ ನಾವೇನು ಅಂದುಕೊಂಡೆವು ಅದೆಲ್ಲಾವೂ ಸಾಧ್ಯವಾಯಿತು ಎಂದು ಸಾಯಿ ಸುದರ್ಶನ್ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆ ದಾಖಲೆ, ಈ ದಾಖಲೆ ಅಲ್ಲ… ಇದು ವೈಭವ್ ಸೂರ್ಯವಂಶಿ ವಿಶ್ವ ದಾಖಲೆ

ಈ ವೇಳೆ 215 ರನ್​ಗಳನ್ನು ಚೇಸ್ ಮಾಡಬಹುದು ಎಂದೆನಿಸಿತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಾಯಿ, ನಿಜ ಹೇಳಬೇಕೆಂದರೆ, ನಾವು ಸ್ಕೋರ್ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಸ್ಕೋರ್ ಎಷ್ಟೇ ಇರಲಿ. ನಮ್ಮ ಗಮನ ಕೇವಲ ಪ್ರತಿ ಎಸೆತದ ಮೇಲಿತ್ತು. ಪ್ರತಿ ಎಸೆತಗಳಲ್ಲೂ ರನ್​ಗಳಿಸಲು ನಿರ್ಧರಿಸಿದ್ದವು. ಇದುವೇ ನಮ್ಮನ್ನು ಯಶಸ್ಸಿನತ್ತ ಮುನ್ನಡೆಸಿದೆ ಎಂದು ಭಾವಿಸುತ್ತೇನೆ ಎಂದು ಸಾಯಿ ಸುದರ್ಶನ್ ಹೇಳಿದ್ದಾರೆ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ