AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಿಬುಲ್ ಸಿಡಿಲಬ್ಬರದ ಸೆಂಚುರಿ: ಏಕದಿನ ಪಂದ್ಯಲ್ಲಿ ಗರಿಷ್ಠ ಸ್ಕೋರ್ ವಿಶ್ವ ದಾಖಲೆ

Vijay Hazare Trophy; ಏಕದಿನ ಕ್ರಿಕೆಟ್​ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ವಿಶ್ವ ದಾಖಲೆ ಬಿಹಾರ ತಂಡದ ಪಾಲಾಗಿದೆ. ಅದು ಕೂಡ ನಾಯಕ ಸಕಿಬುಲ್ ಗನಿ ಅವರ ಸಿಡಿಲಬ್ಬರದ ಶತಕದೊಂದಿಗೆ. ಈ ಸೆಂಚುರಿಯೊಂದಿಗೆ ಲಿಸ್ಟ್ ಎ ಪಂದ್ಯದಲ್ಲಿ ಅತೀ ವೇಗದ ಶತಕ ಬಾರಿಸಿದ ಹೆಗ್ಗಳಿಕೆಗೂ ಸಕಿಬುಲ್ ಗನಿ ಪಾತ್ರರಾಗಿದ್ದಾರೆ.

ಸಕಿಬುಲ್ ಸಿಡಿಲಬ್ಬರದ ಸೆಂಚುರಿ: ಏಕದಿನ ಪಂದ್ಯಲ್ಲಿ ಗರಿಷ್ಠ ಸ್ಕೋರ್ ವಿಶ್ವ ದಾಖಲೆ
Sakibul Gani
ಝಾಹಿರ್ ಯೂಸುಫ್
|

Updated on: Dec 24, 2025 | 1:30 PM

Share

ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪ್ಲೇಟ್ ಪಂದ್ಯದಲ್ಲಿ ಬಿಹಾರ ತಂಡವು ಬರೋಬ್ಬರಿ 574 ರನ್​ಗಳನ್ನು ಕಲೆಹಾಕಿದೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಬರೋಬ್ಬರಿ 190 ರನ್ ಕಲೆಹಾಕಿದರು.

ಈ ಭರ್ಜರಿ ಶತಕದೊಂದಿಗೆ ವಿಸ್ಫೋಟಕ ಆರಂಭ ಪಡೆದ ಬಿಹಾರ ಪರ ಅಂತಿಮ ಹಂತದಲ್ಲಿ ನಾಯಕ ಸಕಿಬುಲ್ ಗನಿ ಅಬ್ಬರಿಸಿದರು. ಅಂತಿಮ 10 ಓವರ್​ಗಳ ವೇಳೆ ಆರ್ಭಟಿಸಿದ ಸಕಿಬುಲ್ ಗನಿ ಕೇವಲ 32 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದರು.

ಸಕಿಬುಲ್ ಗನಿ ಭರ್ಜರಿ ದಾಖಲೆ:

ಕೇವಲ 32 ಎಸೆತಗಳಲ್ಲಿ ಸೆಂಚುರಿ ಚಚ್ಚುವ ಮೂಲಕ ಏಕದಿನ ಪಂದ್ಯದಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಅನ್​ಮೋಲ್ ಪ್ರೀತ್ ಸಿಂಗ್ ಹೆಸರಿನಲ್ಲಿತ್ತು. 2024 ರಲ್ಲಿ ಪಂಜಾಬ್ ಬ್ಯಾಟರ್ ವಿಜಯ ಹಝಾರೆ ಟೂರ್ನಿಯಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು.

ಇದೀಗ ಬಿಹಾರ ತಂಡದ ನಾಯಕ ಸಕಿಬುಲ್ ಗನಿ ಕೇವಲ 32 ಎಸೆತಗಳಲ್ಲಿ ಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಏಕದಿನ ಪಂದ್ಯದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಬರೋಬ್ಬರಿ 574 ರನ್​ಗಳು:

ಸಕಿಬುಲ್ ಗನಿ ಹಾಗೂ ವೈಭವ್ ಸೂರ್ಯವಂಶಿ ಬಾರಿಸಿದ ವಿಸ್ಫೋಟಕ ಸೆಂಚುರಿಗಳ ನೆರವಿನೊಂದಿಗೆ ಬಿಹಾರ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 574 ರನ್​ ಕಲೆಹಾಕಿದೆ. ಈ ಮೂಲಕ ಬಿಹಾರ ತಂಡವು ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಗರಿಷ್ಠ ಮೊತ್ತಗಳಿಸಿದ ವಿಶ್ವ ದಾಖಲೆ ದಾಖಲೆ ನಿರ್ಮಿಸಿದೆ.

ಅರುಣಾಚಲ ಪ್ರದೇಶ್ (ಪ್ಲೇಯಿಂಗ್ XI): ಕಮ್ಶಾ ಯಾಂಗ್ಫೋ (ನಾಯಕ), ಸೂರ್ಯಾಂಶ್ ಸಿಂಗ್, ಟೆಚಿ ನೇರಿ, ತಡಕಮಲ್ಲ ಮೋಹಿತ್, ನೀಲಂ ಓಬಿ, ನಬಮ್ ಟೆಂಪೋಲ್, ಆದಿತ್ಯ ವರ್ಮಾ, ಧೀರಜ್ ಆಂಟಿನ್, ಟೆಚಿ ಸಾನಿಯಾ, ಮಿಬೊಮ್ ಮೊಸು, ಟೆಚಿ ಡೋರಿಯಾ.

ಇದನ್ನೂ ಓದಿ: ಬರೋಬ್ಬರಿ 15 ಸಿಕ್ಸ್… ವಿಶ್ವ ದಾಖಲೆಯ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

ಬಿಹಾರ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಸಕಿಬುಲ್ ಗನಿ (ನಾಯಕ), ಆಯುಷ್ ಲೋಹರುಕಾ (ವಿಕೆಟ್ ಕೀಪರ್), ಮಂಗಲ್ ಮಹರೂರ್, ಪಿಯೂಷ್ ಸಿಂಗ್, ಆಕಾಶ್ ರಾಜ್, ಬಿಪಿನ್ ಸೌರಭ್, ಸೂರಜ್ ಕಶ್ಯಪ್, ಹಿಮಾಂಶು ತಿವಾರಿ, ಸಬೀರ್ ಖಾನ್, ಬಾದಲ್ ಕನೌಜಿಯಾ.

Follow Us
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ತುಂಗಭದ್ರಾದಿಂದ ಕದ್ದುಮುಚ್ಚಿ ಕಾರ್ಖಾನೆಗಳಿಗೆ ಹರಿಸಲಾಗುತ್ತಿದ್ದ ನೀರು ಬಂದ್
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!