AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

Salman Agha: ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ವಿಚಿತ್ರ ರನೌಟ್ ಆಗಿ, ಕೋಪಗೊಂಡ ಸಲ್ಮಾನ್ ಆಘಾ ಹೆಲ್ಮೆಟ್ ಎಸೆದು ICC ನಿಯಮ ಉಲ್ಲಂಘಿಸಿದ್ದರು. ಈ ವರ್ತನೆಗೆ ಐಸಿಸಿ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಿದೆ. ಪಂದ್ಯದ ಶುಲ್ಕ ಕಡಿತಗೊಳ್ಳದಿರುವುದು ಆಘಾಗೆ ಸಮಾಧಾನ ತಂದಿದೆ. ಈ ಘಟನೆ ಕ್ರಿಕೆಟ್ ಲೋಕದಲ್ಲಿ ಚರ್ಚೆಗೆ ಗ್ರಾಸವಾಗಿತ್ತು, ನಿಯಮ ಉಲ್ಲಂಘಿಸಿದರೂ ದಂಡವಿಲ್ಲದಿರುವುದು ಅಚ್ಚರಿ ಮೂಡಿಸಿದೆ.

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ
Salman Agha
ಪೃಥ್ವಿಶಂಕರ
|

Updated on: Mar 14, 2026 | 8:51 PM

Share

ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಈ ಪಂದ್ಯ ಈ ಫಲಿತಾಂಶದಿಂದ ಸದ್ದು ಮಾಡುವುದಕ್ಕಿಂತ ಪಂದ್ಯದ ಸಮಯದಲ್ಲಿ ನಡೆದ ರನೌಟ್​ನಿಂದ ಕ್ರಿಕೆಟ್​ ಲೋಕದಲ್ಲಿ ಸಂಚಲನ ಸೃಷ್ಟಿಸಿತು. ಬಾಂಗ್ಲಾದೇಶ ಬೌಲರ್​ಗೆ ಸಹಾಯ ಮಾಡಲು ಹೋಗಿ ರನೌಟ್​ಗೆ ಬಲಿಯಾಗಿದ್ದ ಪಾಕಿಸ್ತಾನ ತಂಡದ ಸಲ್ಮಾನ್ ಅಲಿ ಆಘಾ (Salman Agha ) ಮೈದಾನದಲ್ಲಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ಜೊತೆಗೆ ತಮ್ಮ ಹೆಲ್ಮೆಟ್, ಬ್ಯಾಟ್ ಮತ್ತು ಕೈ ಗ್ಲೌಸ್​ಗಳನ್ನು ನೆಲಕ್ಕೆ ಬಿಸಾಡಿ ಐಸಿಸಿ (ICC) ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಸಲ್ಮಾನ್ ಆಘಾಗೆ ಐಸಿಸಿಯಿಂದ ಶಿಕ್ಷೆ ಖಚಿತವಾಗಿತ್ತು. ಅದರಂತೆ ಪಂದ್ಯ ಮುಗಿದ ಒಂದು ದಿನದ ಬಳಿಕ ಐಸಿಸಿ ಸಲ್ಮಾನ್ ಆಘಾಕ್ಕೆ ಶಿಕ್ಷೆ ವಿಧಿಸಿದೆ.

ಆಘಾಗೆ 1 ಡಿಮೆರಿಂಟ್ ಅಂಕ

ಸಲ್ಮಾನ್ ಆಘಾ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.2 ಅನ್ನು ಉಲ್ಲಂಘಿಸಿರುವುದು ಖಚಿತವಾಗಿದ್ದು, ಪಂದ್ಯದ ಮರುದಿನ, ಐಸಿಸಿ ಸಲ್ಮಾನ್ ಆಘಾಗೆ ಶಿಕ್ಷೆ ವಿಧಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಐಸಿಸಿ, ಪಂದ್ಯದ ನಂತರ ಸಲ್ಮಾನ್ ಆಘಾ, ಮ್ಯಾಚ್ ರೆಫ್ರಿ ನೀಮೂರ್ ರಶೀದ್ ರಾಹುಲ್ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಆದಾಗ್ಯೂ, ಐಸಿಸಿ ಆಘಾ ಅವರ ಪಂದ್ಯ ಶುಲ್ಕವನ್ನು ಕಡಿತಗೊಳಿಸದಿರುವುದು ಅಚ್ಚರಿಯ ಸಂಗತಿಯಾಗಿದೆ. ವಾಸ್ತವವಾಗಿ ಈ ರೀತಿಯ ನಿಯಮ ಉಲ್ಲಂಘಿಸುವವರಿಗೆ ಡಿಮೆರಿಂಟ್ ಅಂಕವನ್ನು ನೀಡುವುದರ ಜೊತೆಗೆ ಇಂತಿಷ್ಟು ಪಂದ್ಯ ಶುಲ್ಕವನ್ನು ಸಹ ದಂಡವಾಗಿ ಕಟ್ಟಿಸಲಾಗುತ್ತದೆ. ಆದರೆ ಆಘಾ ವಿಚಾರದಲ್ಲಿ ಅದು ಸಂಭವಿಸಿಲ್ಲ. ಹೀಗಾಗಿ ಆಘಾ ದಂಡದ ಪಾರಾಗಿ ನಿಟ್ಟುಸಿರು ಬಿಟ್ಟಿದ್ದಾರೆ.

ಏನಿದು ವಿವಾದ?

ವಾಸ್ತವವಾಗಿ ಎರಡನೇ ಏಕದಿನ ಪಂದ್ಯದ ಪಾಕಿಸ್ತಾನದ ಇನ್ನಿಂಗ್ಸ್‌ನ 39 ನೇ ಓವರ್‌ ವಿಚಿತ್ರ ರನೌಟ್​ಗೆ ಸಾಕ್ಷಿಯಾಯಿತು​. ಬಾಂಗ್ಲಾದೇಶದ ಬೌಲರ್ ಮೆಹದಿ ಹಸನ್ ಎಸೆದ ಈ ಓವರ್‌ನ ನಾಲ್ಕನೇ ಚೆಂಡನ್ನು ರಿಜ್ವಾನ್ ನೇರವಾಗಿ ಬೌಲರ್ ಕಡೆಗೆ ಆಡಿದರು. ಇತ್ತ ನಾನ್-ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ಸಲ್ಮಾನ್ ಆಘಾ ರನ್​ಗಾಗಿ ತಮ್ಮ ಕ್ರೀಸ್‌ನಿಂದ ಹೊರಬಂದರಾದರೂ ಅಲ್ಲಿ ರನ್ ಇಲ್ಲದಿರುವುದನ್ನು ಗಮನಿಸಿ ಅಲ್ಲಿಯೇ ನಿಂತರು. ಅಷ್ಟರಲ್ಲಿ ರಿಜ್ವಾನ್ ಬಾರಿಸಿದ ಚೆಂಡು ಕೂಡ ಆಘಾ ಕಡೆಗೆ ಬಂತು. ಹೀಗಾಗಿ ಆಘಾ ಚೆಂಡನ್ನು ಹಿಡಿದು ಬೌಲರ್​ ಮೆಹದಿ ಹಸನ್​ಗೆ ರವಾನಿಸಲು ಪ್ರಯತ್ನಿಸಿದರು.

ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೂರ್ನಮೆಂಟ್ ತಂಡ ಪ್ರಕಟಿಸಿದ ಐಸಿಸಿ

ಈ ಹಂತದಲ್ಲಿ ಚಾಣಾಕ್ಷತೆ ತೋರಿದ ಮೆಹದಿ ಹಸನ್ ಚೆಂಡನ್ನು ಹಿಡಿದು, ನೇರವಾಗಿ ಸ್ಟಂಪ್​ಗೆ ಎಸೆದರು. ಇದೆಲ್ಲ ನಡೆಯುವಾಗ ಕ್ರೀಸ್​ನಿಂದ ಹೊರಗೆ ನಿಂತಿದ್ದ ಆಘಾ, ಕ್ರೀಸ್ ಒಳಗೆ ಬರುವ ಪ್ರಯತ್ನವನ್ನು ಮಾಡಲಿಲ್ಲ. ಹೀಗಾಗಿ ಚೆಂಡನ್ನು ಸ್ಟಂಪ್​ಗೆ ಎಸೆದ ಕೂಡಲೇ ಮೆಹದಿ ಹಸನ್​ ಔಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಲಾರಂಬಿಸಿದರು. ಇದನ್ನು ನೋಡಿ ಕಕ್ಕಾಬಿಕ್ಕಿಯಾದ ಆಘಾ, ಹಸನ್ ಜೊತೆಗೆ ವಾದಿಸಲು ಪ್ರಾರಂಭಿಸಿದರು. ಇತ್ತ ಫಿಲ್ಡ್ ಅಂಪೈರ್ ಮೂರನೇ ಅಂಪೈರ್​ ಬಳಿ ಮರುಪರಿಶೀಲನೆಗೆ ಮನವಿ ಮಾಡಿದರು. ಎಲ್ಲವನ್ನು ಕುಲಂಕುಶವಾಗಿ ಪರಿಶೀಲಿಸಿದ ಅಂಪೈರ್, ಸಲ್ಮಾನ್ ಆಘಾ ಔಟೆಂದು ತೀರ್ಪು ನೀಡಿದರು. ಇದರಿಂದ ಇನ್ನಷ್ಟು ಕೆರಳಿದ ಆಘಾ, ತಮ್ಮ ಹೆಲ್ಮೆಟ್ ಮತ್ತು ಕೈಗವಸುಗಳನ್ನು ತೆಗೆದು ನೆಲದ ಮೇಲೆ ಎಸೆದು ಆಕ್ರೋಶ ಹೊರಹಾಕಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!