AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಲ್​ರೌಂಡರ್ ಐಪಿಎಲ್​ನಿಂದ ಹೊರಕ್ಕೆ

Sam Curran ruled out: ರಾಜಸ್ಥಾನ ರಾಯಲ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದ ವೇಳೆ ಕರನ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಅಲ್ಲದೆ ಕೆಲ ಕಾಲ ಫೀಲ್ಡಿಂಗ್​ನಿಂದ ಹೊರಗುಳಿದಿದ್ದರು.

IPL 2021: CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಲ್​ರೌಂಡರ್ ಐಪಿಎಲ್​ನಿಂದ ಹೊರಕ್ಕೆ
csk
TV9 Web
| Edited By: |

Updated on:Oct 05, 2021 | 6:35 PM

Share

Sam Curran ruled out: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಯುವ ಆಲ್​ರೌಂಡರ್ ಸ್ಯಾಮ್ ಕರನ್ (Sam Curran) ಐಪಿಎಲ್​ನಿಂದ (IPL 2021) ಹೊರ ನಡೆದಿದ್ದಾರೆ. ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿರುವ ಸ್ಯಾಮ್ ಇದೀಗ ಐಪಿಎಲ್​ನಿಂದ ಹಿಂದೆ ಸರಿದಿದ್ದು, ಹಾಗೆಯೇ ಮುಂಬರುವ ಟಿ20 ವಿಶ್ವಕಪ್​ಗೂ ಅಲಭ್ಯರಾಗಲಿದ್ದಾರೆ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಪ್ರಕಟಿಸಿದೆ. ಇನ್ನು ಟಿ20 ವಿಶ್ವಕಪ್​ನಿಂದ ಹೊರಗುಳಿದಿರುವ ಸ್ಯಾಮ್ ಅವರ ಸ್ಥಾನಕ್ಕೆ ಅವರ ಹಿರಿಯ ಸಹೋದರ ಟಾಮ್ ಕರನ್ (Tom Curran)​ ಅವರನ್ನು ಇಂಗ್ಲೆಂಡ್ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ರಾಜಸ್ಥಾನ ರಾಯಲ್ಸ್ ವಿರುದ್ಧ ಶನಿವಾರ ನಡೆದ ಪಂದ್ಯದ ವೇಳೆ ಕರನ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಅಲ್ಲದೆ ಕೆಲ ಕಾಲ ಫೀಲ್ಡಿಂಗ್​ನಿಂದ ಹೊರಗುಳಿದಿದ್ದರು. ಇದೀಗ ಸಮಸ್ಯೆ ಗಂಭೀರವಾಗಿರುವುದರಿಂದ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಇಂಗ್ಲೆಂಡ್​ಗೆ ತೆರಳುವ ಕಾರಣ ಟಿ20 ವಿಶ್ವಕಪ್​ಗೂ ಲಭ್ಯರಿರುವುದಿಲ್ಲ ಎಂದು ತಿಳಿಸಿದ್ದಾರೆ.

ಸದ್ಯ ಚೆನ್ನೈ ಸೂಪರ್ ಕಿಂಗ್ಸ್​ ಪ್ಲೇ ಆಫ್ ಪ್ರವೇಶಿಸಿದೆ. ಇದಾಗ್ಯೂ ನಾಕೌಟ್ ಹಂತದ ಪಂದ್ಯದ ವೇಳೆ ಸ್ಯಾಮ್ ಕರನ್ ಅಲಭ್ಯತೆಯು ತಂಡದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ 23 ವರ್ಷದ ಸ್ಯಾಮ್ ಕರನ್ ಒಂಬತ್ತು ಪಂದ್ಯಗಳಿಂದ 9 ವಿಕೆಟ್ ಪಡೆದಿದ್ದರು. ಇದೀಗ ಅಂತಿಮ ಹಂತದಲ್ಲಿ ಹೊರಗುಳಿಯುತ್ತಿರುವುದರಿಂದ ಪ್ರಸ್ತುತ ತಂಡದಲ್ಲಿರುವ ಆಟಗಾರರನ್ನೇ ಮುಂದುವರೆಸಬೇಕಾಗುತ್ತದೆ. ಹೀಗಾಗಿ ಕರನ್ ಅಲಭ್ಯತೆಯು ಸಿಎಸ್​ಕೆ ತಂಡದ ಪ್ಲೇಆಫ್ ಪಂದ್ಯಗಳ ಫಲಿತಾಂಶಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅತ್ತ ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ಆಲ್​ರೌಂಡರ್​ ಬೆನ್​ ಸ್ಟೋಕ್ಸ್​ ಕೂಡ ಹೊರಗುಳಿದಿದ್ದು, ಇದೀಗ ತಂಡದಲ್ಲಿದ್ದ ಯುವ ಆಲ್​ರೌಂಡರ್ ಗಾಯದ ಕಾರಣ ಅಲಭ್ಯರಾಗಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ:  IPL 2021: ಮುಂದಿನ 2 ಪಂದ್ಯಗಳನ್ನು RCB ಗೆಲ್ಲಲೇಬೇಕು, ಏಕೆಂದರೆ…

ಇದನ್ನೂ ಓದಿ: David Warner: SRH ತಂಡದಲ್ಲಿಲ್ಲ ಸ್ಥಾನ: ಪ್ರೇಕ್ಷಕನಾಗಿ ಕಾಣಿಸಿಕೊಂಡ ಡೇವಿಡ್ ವಾರ್ನರ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

Published On - 6:17 pm, Tue, 5 October 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ