IND vs SL: ಅದೇ ರೈಲು, ಇಂಜಿನ್ ಮಾತ್ರ ಬದಲಾಗಿದೆ: ಸೂರ್ಯಕುಮಾರ್ ಯಾದವ್

India vs Sri Lanka: ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯಲ್ಲಿ ಒಟ್ಟು 6 ಪಂದ್ಯಗಳನ್ನಾಡಲಾಗುತ್ತದೆ. ಜುಲೈ 27 ರಿಂದ ಟಿ20 ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿದೆ. ಇದಾದ ಬಳಿಕ ಆಗಸ್ಟ್ 2 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಇನ್ನು ಟಿ20 ಸರಣಿ ಮೂಲಕ ಟೀಮ್ ಇಂಡಿಯಾ ಪರ ನಾಯಕರಾಗಿ ಸೂರ್ಯಕುಮಾರ್ ಯಾದವ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

IND vs SL: ಅದೇ ರೈಲು, ಇಂಜಿನ್ ಮಾತ್ರ ಬದಲಾಗಿದೆ: ಸೂರ್ಯಕುಮಾರ್ ಯಾದವ್
Suryakumar Yadav
Follow us
|

Updated on: Jul 27, 2024 | 8:48 AM

ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಇಂದಿನಿಂದ (ಜುಲೈ 27) ಶುರುವಾಗಲಿದೆ. ಈ ಸರಣಿಯ ಮೂಲಕ ಸೂರ್ಯಕುಮಾರ್ ಯಾದವ್ ಪೂರ್ಣ ಪ್ರಮಾಣದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಈ ಪಾದಾರ್ಪಣೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್, ರೋಹಿತ್ ಶರ್ಮಾ ಅವರ ಪರಂಪರೆಯನ್ನು ಮುಂದುವರೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಆಡಿದ ಆಕ್ರಮಣಕಾರಿ ಬ್ರಾಂಡ್ ಕ್ರಿಕೆಟ್​ ಅನ್ನು ನಾವು ಕೂಡ ಮುಂದುವರೆಸುತ್ತೇವೆ. ಇಲ್ಲಿ ಬದಲಾಗಿರುವುದು ರೈಲಿನ ಇಂಜಿನ್ ಮಾತ್ರ. ಬೋಗಿಗಳು ಹಾಗೆಯೇ ಉಳಿದಿವೆ. ಹಾಗಾಗಿ ಹಳೆಯ ರೈಲೇ ಚಲಿಸಲಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ನನ್ನ ಪ್ರಕಾರ, ಟೀಮ್ ಇಂಡಿಯಾದಲ್ಲಿ ಏನೂ ಬದಲಾಗುವುದಿಲ್ಲ. ಕ್ರಿಕೆಟ್ ಬ್ರ್ಯಾಂಡ್ ಒಂದೇ ಆಗಿರುತ್ತದೆ. ರೋಹಿತ್ ಶರ್ಮಾ ಅವರ ಜಾಗ ತುಂಬಿದ್ದಿರಂದ ನನ್ನಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೀಗಾಗಿ ರೋಹಿತ್ ಶರ್ಮಾ ಹಾಕಿಕೊಟ್ಟ ಹಾದಿಯಲ್ಲಿ ಸಾಗಲು ಬಯಸುವುದಾಗಿ ಸೂರ್ಯಕುಮಾರ್ ಹೇಳಿದ್ದಾರೆ.

ರೋಹಿತ್ ಶರ್ಮಾ ಅವರಿಂದ ನಾನು ಕಲಿತ ಮುಖ್ಯ ವಿಷಯ ಎಂದರೆ, ಎಲ್ಲರೊಂದಿಗೆ ಬೆರೆಯುವುದು. ಅಲ್ಲದೆ ಮೈದಾನದಲ್ಲೂ ಮತ್ತು ಹೊರಗೂ ನಾಯಕನಾಗಿ ಉಳಿಯುವುದು. ಆದರೆ ನಮ್ಮಿಬ್ಬರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಇದಾಗ್ಯೂ ಟಿ20 ಕ್ರಿಕೆಟ್ ಆಡುವುದು ಹೇಗೆ ಮತ್ತು ಪಂದ್ಯಾವಳಿಯನ್ನು ಗೆಲ್ಲುವುದು ಹೇಗೆ? ಎಂಬುದನ್ನು ನಾನು ರೋಹಿತ್ ಶರ್ಮಾ ಅವರ ನಾಯಕತ್ವದಿಂದ ಕಲಿತಿದ್ದೇನೆ. ಅದನ್ನೇ ಮುಂದುವರೆಸುವ ವಿಶ್ವಾಸವಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.

ಇನ್ನು ಹಾರ್ದಿಕ್ ಪಾಂಡ್ಯ ಬಗ್ಗೆ ಮಾತನಾಡಿದ ಸೂರ್ಯಕುಮಾರ್ ಯಾದವ್, ತಂಡದಲ್ಲಿ ಅವರ ಆಲ್​ರೌಂಡರ್ ಪಾತ್ರ ಹಾಗೆಯೇ ಉಳಿಯಲಿದೆ. ಏಕೆಂದರೆ ಅವರು ತಂಡಕ್ಕೆ ಅತ್ಯಂತ ಪ್ರಮುಖ ಆಟಗಾರ. ವಿಶ್ವಕಪ್‌ನಲ್ಲಿ ಅವರು ಪ್ರದರ್ಶನ ನೀಡಿದ ರೀತಿಯನ್ನೇ ಇಲ್ಲೂ ಮುಂದುವರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಸೂರ್ಯಕುಮಾರ್ ಯಾದವ್ ಹೇಳಿದರು.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಇದೇ ವೇಳೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅವರ ಸ್ಥಾನಗಳನ್ನು ತುಂಬುವವರು ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸೂರ್ಯ, ಈ ಮೂವರ ಸ್ಥಾನ ತುಂಬುವುದು ನನ್ನ ಪ್ರಕಾರ ದೊಡ್ಡ ಸವಾಲು. ಇದಾಗ್ಯೂ ಹೊಸ ಆಟಗಾರರು ಸಾಕಷ್ಟು ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಕೆಲ ಆಟಗಾರರು ದಿಗ್ಗಜರ ಸ್ಥಾನಗಳನ್ನು ತುಂಬುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ T20 ಸರಣಿ ವೇಳಾಪಟ್ಟಿ:

  • ಮೊದಲ ಟಿ20: ಜುಲೈ 27 (ಪಲ್ಲೆಕೆಲೆ) – 7 PM IS
  • ಎರಡನೇ ಟಿ20: ಜುಲೈ 28 (ಪಲ್ಲೆಕೆಲೆ) – 7 PM IST
  • ಮೂರನೇ ಟಿ20: ಜುಲೈ 30 (ಪಲ್ಲೆಕೆಲೆ) – 7 PM IST
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್