AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚ್ ಚಿಂತಿಸಬೇಡಿ, ಮ್ಯಾಚ್ ಮುಗೀತು! ಇದು ವೈಭವ್ ಆತ್ಮ ವಿಶ್ವಾಸದ ಕಥೆ!

Vaibhav Sooryavanshi: ಐಪಿಎಲ್​ ಅಂಗಳದಲ್ಲಿ 220 ರನ್​ಗಳನ್ನು ಚೇಸ್ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ಅನುಭವಿ ಬೌಲರ್​ಗಳನ್ನು ಎದುರಾಕಿಕೊಂಡು! ಆದರೆ 15 ವರ್ಷದ ವೈಭವ್ ಸೂರ್ಯವಂಶಿ ಬೃಹತ್ ಗುರಿ ಬೆನ್ನತ್ತುವ ಮುನ್ನವೇ ಕೋಚ್ ಮತ್ತು ಸಹ ಆಟಗಾರರಿಗೆ ಸವಾಲು ಹಾಕಿ ಗೆದ್ದು ಬಂದ ರೋಚಕ ಕಥೆಯೊಂದನ್ನು ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಬಿಚ್ಚಿಟ್ಟಿದ್ದಾರೆ.

ಕೋಚ್ ಚಿಂತಿಸಬೇಡಿ, ಮ್ಯಾಚ್ ಮುಗೀತು! ಇದು ವೈಭವ್ ಆತ್ಮ ವಿಶ್ವಾಸದ ಕಥೆ!
Sangakkara - VaibhavImage Credit source: IPL
ಝಾಹಿರ್ ಯೂಸುಫ್
|

Updated on: Jun 27, 2026 | 10:06 AM

Share

ಕ್ರಿಕೆಟ್ ಜಗತ್ತಿನಲ್ಲಿ ವೈಭವ್ ಸೂರ್ಯವಂಶಿ ಕುರಿತಾದ ಚರ್ಚೆಗಳು ಮುಂದುವರೆದಿದೆ. ಆದರೆ ಅದು ಭಾರತ ಮತ್ತು ಐರ್ಲೆಂಡ್ ನಡುವಣ ಪಂದ್ಯದ ವೇಳೆಯಲ್ಲ. ಬದಲಾಗಿ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದ ನಡುವೆ. ಈ ಪಂದ್ಯದ ವೇಳೆ ಕಾಮೆಂಟ್ರಿ ಬಾಕ್ಸ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಕುಮಾರ್ ಸಂಗಕ್ಕಾರ ಅವರು ‘ಸ್ಕೈ ಕ್ರಿಕೆಟ್’ಗೆ ವಿಶೇಷ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಸಂಗಾಕ್ಕರ ವೈಭವ್ ಅವರ ‘ಮಹಾ ವಿಶ್ವಾಸ’ದ ಕಥೆ ಬಿಚ್ಚಿಟ್ಟಿದ್ದಾರೆ.

ಕೋಚ್ ಚಿಂತಿಸಬೇಡಿ, ಪಂದ್ಯ ಮುಗಿಯಿತು:

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಕಲೆಹಾಕಿದ್ದು ಬರೋಬ್ಬರಿ 220 ರನ್​ಗಳು.

ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಮ್ಯಾಚ್​ನಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು. ಇಂತಹ ಸಂದರ್ಭದಲ್ಲಿ ಬ್ಯಾಟಿಂಗ್‌ಗೆ ಹೊರಡುವ ಮುನ್ನ 15 ವರ್ಷದ ವೈಭವ್ ಸೂರ್ಯವಂಶಿ, ಕೋಚ್ ಸಂಗಕ್ಕಾರ ಕಡೆಗೆ ಕಣ್ಣು ಹೊಡೆದು, “ಕೋಚ್, ನೀವು ಯೋಚನೆ ಮಾಡಬೇಡಿ. ಪಂದ್ಯ ಮುಗಿಯಿತು” ಎಂದು ಹೇಳಿ ಮೈದಾನಕ್ಕಿಳಿದಿದ್ದರು!

ಸಹ ಆಟಗಾರರಿಗೂ ಸೂಚನೆ:

221 ರನ್​ಗಳ ಬೃಹತ್ ಗುರಿ ಬೆನ್ನತ್ತಲು ಹೊರಟ್ಟಿದ್ದ ವೈಭವ್ ಸೂರ್ಯವಂಶಿ ಕೇವಲ ಕೋಚ್‌ಗೆ ಮಾತ್ರ ಧೈರ್ಯ ತುಂಬಿರಲಿಲ್ಲ. ಬದಲಾಗಿ ಡಗೌಟ್‌ನಲ್ಲಿದ್ದ ಸಹ ಆಟಗಾರರಾದ ಡೊನೊವನ್ ಫೆರೇರಾ ಮತ್ತು ಲುಹಾನ್-ಡ್ರೆ ಪ್ರಿಟೋರಿಯಸ್ ಬಳಿ ಹೋಗಿ, “ನೋಡಿ, ನಾನು ಇಂದು 13 ಸಿಕ್ಸರ್‌ಗಳನ್ನು ಬಾರಿಸುತ್ತೇನೆ. ನಾನು ಔಟಾಗಿ ಬಂದ ಬಳಿಕ, ಉಳಿದ ರನ್‌ಗಳನ್ನು ನೀವು ಹೊಡೆಯಿರಿ” ಎಂದು ಆತ್ಮವಿಶ್ವಾಸದಿಂದ ಹೇಳಿ ಹೊರಟ್ಟಿದ್ದರು.

ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲಿ ಅಬ್ಬರಿಸುತ್ತಿದ್ದಂತೆ, ಅದರಲ್ಲೂ ಆರಂಭದಲ್ಲೇ 5 ಸಿಕ್ಸರ್ ಬಾರಿಸುವಷ್ಟರಲ್ಲಿ, ಡೊನೊವನ್ ಮತ್ತು ಪ್ರಿಟೋರಿಯಸ್ ಆಶ್ಚರ್ಯಚಕಿತರಾಗಿದ್ದರು. ಅಲ್ಲದೆ ಈ ಹುಡುಗ ಏನು ಮಾತನಾಡಿದ್ದಾನೆ, ಅದನ್ನೇ ಮಾಡ್ತಿದ್ದಾನೆ. ಇವನ ಸಿಕ್ಸರ್‌ಗಳನ್ನು ಕೌಂಟ್ ಡೌನ್ ಮಾಡಲು ಶುರು ಮಾಡುವುದು ಒಳಿತು. ಏಕೆಂದರೆ ಇವನು ಹೇಳಿದ್ದನ್ನು ನಿಜವಾಗಿಯೂ  ಮಾಡಿ ಮುಗಿಸಲು ಹೊರಟ್ಟಿದ್ದಾನೆ ಎಂದು ತಮ್ಮೊಳಗೆ ಮಾತನಾಡಿಕೊಂಡಿದ್ದರಂತೆ.

ಹೇಳಿದಂತೆ ಮಾಡಿ ತೋರಿಸಿದ ವೈಭವ್:

ವೈಭವ್ ಸೂರ್ಯವಂಶಿ ಹೇಳಿದಂತೆ ಈ ಪಂದ್ಯದಲ್ಲಿ ಅಬ್ಬರಿಸಿದ್ದರು.  ಅಲ್ಲದೆ ಕೇವಲ 48 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ ಭರ್ಜರಿ ಬೌಂಡರಿಗಳ ನೆರವಿನಿಂದ 93 ರನ್ ಚಚ್ಚಿದರು. ಕೇವಲ 3 ಸಿಕ್ಸರ್‌ಗಳಿಂದ ತಮ್ಮ 13 ಸಿಕ್ಸರ್‌ಗಳ ಭವಿಷ್ಯ ನುಡಿಯನ್ನು ಮಿಸ್ ಮಾಡಿಕೊಂಡರೂ, ತಂಡಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ ತಂದು ಕೊಟ್ಟಿದ್ದರು.

ಇದನ್ನೂ ಓದಿ: 2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ!

ಈ ಆತ್ಮ ವಿಶ್ವಾಸದವನ್ನೇ ಕುಮಾರ್ ಸಂಗಾಕ್ಕರ ಹಾಡಿ ಹೊಗಳಿದ್ದಾರೆ. ಅಲ್ಲದೆ ವೈಭವ್ ಸೂರ್ಯವಂಶಿ ಅವರ ಈ ಅದ್ಭುತ ಪ್ರದರ್ಶನ ಮತ್ತು ಅಪ್ರತಿಮ ಆತ್ಮವಿಶ್ವಾಸ, ಅವರು ಕೇವಲ ಒಬ್ಬ ಸಾಮಾನ್ಯ ಆಟಗಾರನಲ್ಲ, ಬದಲಿಗೆ ಕ್ರಿಕೆಟ್ ಜಗತ್ತನ್ನು ಆಳಲು ಬಂದಿರುವ ಭವಿಷ್ಯದ ಸೂಪರ್‌ಸ್ಟಾರ್ ಎಂದು ಸಂಗಾಕ್ಕರ ಭವಿಷ್ಯ ನುಡಿದಿದ್ದಾರೆ.

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ